ಬ್ರೇಕಿಂಗ್ ನ್ಯೂಸ್
07-04-26 09:52 pm HK News Staffer ದೇಶ - ವಿದೇಶ
ವಾಷಿಂಗ್ಟನ್, ಎಪ್ರಿಲ್ 7: ಇರಾನ್ ವಿರುದ್ಧ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಗುಡುಗಿದ್ದಾರೆ. ಇರಾನಿನ ಇಡೀ ನಾಗರಿಕತೆ ಇಂದು ರಾತ್ರಿಗೆ ಕೊನೆಯಾಗಲಿದೆ. ಅದು ಮತ್ತೆಂದೂ ಮರಳುವುದಿಲ್ಲ. ಆ ರೀತಿ ಆಗಲೆಂದು ನಾನು ಬಯಸುವುದಿಲ್ಲ. ಆದರೆ ಅದು ಆಗೇ ಆಗುತ್ತದೆ ಎಂದು ಟ್ರಂಪ್ ತಮ್ಮ ‘ಟ್ರೂತ್ ಸೋಶಿಯಲ್’ ನಲ್ಲಿ ಹೇಳಿದ್ದು ಜಾಗತಿಕವಾಗಿ ಸಂಚಲನ ಮೂಡಿಸಿದೆ.
ಹರ್ಮುಜ್ ಜಲಸಂಧಿ ತೆರೆಯಲು ಮೂರನೇ ಬಾರಿಗೆ ನೀಡಿದ್ದ 48 ಗಂಟೆಗಳ ಗಡುವು ಮಂಗಳವಾರ ರಾತ್ರಿ 8 ಗಂಟೆಗೆ (ಭಾರತೀಯ ಕಾಲಮಾನ ಬುಧವಾರ ಬೆಳಗ್ಗೆ 6:30) ಮುಕ್ತಾಯಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಟ್ರಂಪ್ ಹೊಸ ಎಚ್ಚರಿಕೆ ಸಂದೇಶ ನೀಡಿದ್ದಾರೆ.
47 ವರ್ಷಗಳ ಸುಲಿಗೆ, ಭ್ರಷ್ಟಾಚಾರ ಮತ್ತು ಸಾವಿನ ಸರಣಿ ಇಂದಿಗೆ ಅಂತ್ಯವಾಗಲಿದೆ ಎಂದು ಹೇಳಿರುವ ಟ್ರಂಪ್, ಮೂಲಭೂತವಾದಿಗಳ ಆಡಳಿತ ಬದಲಿಸಲು ಗಟ್ಟಿ ನಿರ್ಧಾರಕ್ಕೆ ಬಂದಿದ್ದೇವೆ. ಈ ದಿನ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ ಎಂದು ಹೇಳಿದ್ದಾರೆ. ಹಾರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸಲು ಅಥವಾ ಅಮೆರಿಕಾ ಸೂಚಿಸಿದ ಒಪ್ಪಂದಕ್ಕೆ ಸಹಿ ಹಾಕಲು ನಿರಾಕರಿಸಿದರೆ, ಇರಾನ್ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳನ್ನು ಕೇವಲ ನಾಲ್ಕೇ ಗಂಟೆಗಳಲ್ಲಿ ಧ್ವಂಸ ಮಾಡುವುದಾಗಿ ಟ್ರಂಪ್ ಈ ಹಿಂದೆ ಬೆದರಿಕೆ ಹಾಕಿದ್ದರು. ಈ ಮೊದಲು ಮಾರ್ಚ್ 23ರಂದು ಐದು ದಿನ, ಆನಂತರ ಹತ್ತು ದಿನಕ್ಕೆ ಕದನ ವಿರಾಮ ಘೋಷಿಸಲಾಗಿತ್ತು. ಈ ನಡುವೆ, ಇರಾನ್ ಜೊತೆಗೆ ಮಾತುಕತೆ ನಡೆಸುತ್ತಿದ್ದೇವೆ ಎಂದು ಟ್ರಂಪ್ ಹೇಳುತ್ತ ಬಂದಿದ್ದರೂ, ಅವರ ಹೇಳಿಕೆಗಳನ್ನು ಇರಾನ್ ನಾಯಕರು ತಳ್ಳಿಹಾಕಿದ್ದರು.
ಇದರ ಬೆನ್ನಲ್ಲೇ ವಿಶ್ವಸಂಸ್ಥೆಯ ರಾಜತಾಂತ್ರಿಕ ಅಧಿಕಾರಿಯೊಬ್ಬರು ರಾಜೀನಾಮೆ ನೀಡಿದ್ದು, ಇರಾನ್ ಮೇಲೆ ಪರಮಾಣು ದಾಳಿ ನಡೆಯುವ ಸಾಧ್ಯತೆಯಿದೆ ಎಂಬ ಆತಂಕ ಹೊರಹಾಕಿದ್ದರು. ಇದೇ ವೇಳೆ, ಅಮೆರಿಕದ ನಡೆಗೆ ಯುಕೆ ಮತ್ತು ಸ್ಪೇನ್ ವಿರೋಧ ವ್ಯಕ್ತಪಡಿಸಿದ್ದರಿಂದ ಟ್ರಂಪ್ ಸ್ವಲ್ಪ ಮಟ್ಟಿಗೆ ತಣ್ಣಗಾಗಿದ್ದರು. ಆದರೆ ಮತ್ತೆ ಮತ್ತೆ ಎಚ್ಚರಿಕೆ ನೀಡುತ್ತ ಇರಾನ್ ಆಂತರಿಕವಾಗಿ ಕುಸಿಯುವಂತೆ ಮಾಡುತ್ತ ಬಂದಿದ್ದರು.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm