ಬ್ರೇಕಿಂಗ್ ನ್ಯೂಸ್
08-04-26 10:36 am HK News Staffer ದೇಶ - ವಿದೇಶ
ಟೆಹ್ರಾನ್, ಏಪ್ರಿಲ್ 08: ಭಾರೀ ಆತಂಕ, ಕುತೂಹಲ ನಡುವಲ್ಲೇ ಮಹತ್ವದ ಬೆಳವಣಿಗೆಯಾಗಿದ್ದು ಅಮೆರಿಕ ಮತ್ತು ಇರಾನ್ ಮಧ್ಯೆ ಎರಡು ವಾರಗಳ ಕದನ ವಿರಾಮ ಘೋಷಣೆಯಾಗಿದೆ. ಈ ನಿರ್ಧಾರವನ್ನು ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ‘ಟ್ರೂತ್ ಸೋಷಿಯಲ್’ ವೇದಿಕೆಯಲ್ಲಿ ಪ್ರಕಟಿಸಿದ್ದಾರೆ.
ಇರಾನ್ಗೆ ನೀಡಿದ್ದ 48 ಗಂಟೆಗಳ ಗಡುವು ಮುಗಿಯುವ ಒಂದು ಗಂಟೆ ಮೊದಲು ಈ ಘೋಷಣೆ ಹೊರಬಿದ್ದಿದ್ದು, ಮಹತ್ತರ ತಿರುವು ನೀಡಿದೆ. ಇದೇ ವೇಳೆ, ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಇರಾನ್ ಒಪ್ಪಿಕೊಂಡಿದ್ದು, ಪ್ರಸ್ತಾಪಿಸಿದ 10 ಅಂಶಗಳ ಪ್ರಸ್ತಾವನೆಯನ್ನು ಅಮೆರಿಕ ಸ್ವೀಕರಿಸಿದೆ ಎಂದು ಟ್ರಂಪ್ ತಿಳಿಸಿದ್ದಾರೆ. ಕದನ ವಿರಾಮಕ್ಕೆ ಪಾಕಿಸ್ತಾನ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಹಾಗೂ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಮಾಡಿದ ಮಧ್ಯಸ್ಥಿಕೆ ಮಹತ್ವದ್ದಾಗಿದೆ ಎನ್ನಲಾಗಿದೆ. ಟ್ರಂಪ್ ಹೇಳಿಕೆಯಲ್ಲಿ, “ಇರಾನ್ ಹಾರ್ಮುಜ್ ಜಲಸಂಧಿಯನ್ನು ಸಂಪೂರ್ಣ ತೆರೆಯಲು ಒಪ್ಪಿಕೊಂಡರೆ, ನಾವು ಯೋಜಿಸಿದ್ದ ದಾಳಿಯನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸುತ್ತೇವೆ. ಇದು ದ್ವಿಪಕ್ಷೀಯ ಕದನ ವಿರಾಮವಾಗಲಿದೆ,” ಎಂದು ತಿಳಿಸಿದ್ದಾರೆ.
ಇನ್ನೊಂದೆಡೆ, ಈ ಒಪ್ಪಂದದ ಭಾಗವಾಗಿ ಇಸ್ರೇಲ್ ಕೂಡ ತಾತ್ಕಾಲಿಕವಾಗಿ ದಾಳಿ ನಿಲ್ಲಿಸಲು ಒಪ್ಪಿಕೊಂಡಿದೆ ಎಂದು ಅಲ್ಲಿನ ಮಾಧ್ಯಮ ವರದಿಗಳು ಹೇಳಿವೆ. ಕದನ ವಿರಾಮ ಘೋಷಣೆ ಬೆನ್ನಲ್ಲೇ ಟೆಹ್ರಾನ್ ಸೇರಿದಂತೆ ಹಲವು ನಗರಗಳಲ್ಲಿ ಜನರು ಬೀದಿಗಿಳಿದು ವಿಜಯೋತ್ಸವ ಆಚರಿಸಿದರು. ರಾಷ್ಟ್ರಧ್ವಜಗಳನ್ನು ಹಿಡಿದು ಘೋಷಣೆ ಕೂಗಿದ ಜನರು, ಇದನ್ನು ತಮ್ಮ ಜಯವೆಂದು ಸಂಭ್ರಮಿಸಿದರು. ಇರಾಕ್ನ ಬಾಗ್ದಾದ್ನಲ್ಲಿಯೂ ಜನರು ಸಂಭ್ರಮಾಚರಣೆ ನಡೆಸಿ ಖುಷಿ ಹಂಚಿಕೊಂಡರು.

ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಎಲ್ಲಾ ಮಿಲಿಟರಿ ಘಟಕಗಳಿಗೆ ದಾಳಿ ನಿಲ್ಲಿಸುವಂತೆ ಸೂಚನೆ ನೀಡಿದ್ದು, “ಇದು ಯುದ್ಧದ ಅಂತ್ಯವಲ್ಲ, ಕೇವಲ ಕದನ ವಿರಾಮ ಮಾತ್ರ” ಎಂದು ಹೇಳಿಕೆ ನೀಡಿದ್ದಾರೆ. ಇದರ ಮಧ್ಯೆ, ಕಳೆದ ಕೆಲವು ವಾರಗಳಿಂದ ನಡೆದ ಸಂಘರ್ಷದಲ್ಲಿ ನೂರಾರು ಮಂದಿ ಸಾವನ್ನಪ್ಪಿದ್ದು, ಪ್ರದೇಶದಲ್ಲಿ ಉದ್ವಿಗ್ನ ಸ್ಥಿತಿ ಸೃಷ್ಟಿಯಾಗಿತ್ತು. ಫೆಬ್ರವರಿ 28ರಂದು ಅಮೆರಿಕ ಮತ್ತು ಇಸ್ರೇಲ್ ಜಂಟಿ ದಾಳಿ ನಡೆಸಿದ ಬಳಿಕ ಪರಿಸ್ಥಿತಿ ಬಿಗಡಾಯಿಸಿತ್ತು.
ಈಗ, ಎರಡು ವಾರಗಳ ಕದನ ವಿರಾಮ ಅವಧಿಯಲ್ಲಿ ಶಾಶ್ವತ ಶಾಂತಿ ಒಪ್ಪಂದದತ್ತ ಮಾತುಕತೆಗಳು ನಡೆಯಲಿದ್ದು, ಮೊದಲ ಹಂತದ ಚರ್ಚೆಗಳು ಇಸ್ಲಾಮಾಬಾದ್ನಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಹಾರ್ಮುಜ್ ಜಲಸಂಧಿ ಜಾಗತಿಕ ತೈಲ ಸರಬರಾಜಿಗೆ ಪ್ರಮುಖ ಮಾರ್ಗವಾಗಿದ್ದು, ಅದರ ಮುಚ್ಚುವಿಕೆ ಜಾಗತಿಕ ಇಂಧನ ಮಾರುಕಟ್ಟೆಗೆ ದೊಡ್ಡ ಹೊಡೆತ ನೀಡುವ ಸಾಧ್ಯತೆ ಇತ್ತು. ಈ ಹಿನ್ನೆಲೆಯಲ್ಲಿ ಕದನ ವಿರಾಮಕ್ಕೆ ಜಾಗತಿಕ ಮಟ್ಟದಲ್ಲಿ ಮಹತ್ವ ನೀಡಲಾಗುತ್ತಿದೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm