ಬ್ರೇಕಿಂಗ್ ನ್ಯೂಸ್
10-04-26 11:05 pm HK News Staffer ದೇಶ - ವಿದೇಶ
ಟೆಲ್ ಅವೀವ್, ಎಪ್ರಿಲ್ 10: ಅಮೆರಿಕ - ಇರಾನ್ ಮಧ್ಯೆ ಶಾಂತಿ ಮಾತುಕತೆಗೆ ಮಧ್ಯಸ್ಥಿಕೆ ವಹಿಸಲು ಮುಂದಾಗಿರುವ ಪಾಕಿಸ್ತಾನ ವಿರುದ್ಧ ಇಸ್ರೇಲ್ ಕಿಡಿಕಾರಿದೆ. ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸೀಫ್ ಅವರು, ಇಸ್ರೇಲ್ ಕದನ ವಿರಾಮ ಉಲ್ಲಂಘಿಸಿ ಲೆಬನಾನ್ ಮೇಲೆ ದಾಳಿ ನಡೆಸಿದ್ದಕ್ಕೆ ಎಲ್ಲ ನಾಶವಾಗಲಿ, ಅದು ಕ್ಯಾನ್ಸರ್ ದೇಶ ಎಂದು ಟೀಕಿಸಿದ್ದಕ್ಕೆ ಇಸ್ರೇಲ್ ತೀವ್ರ ಕಿಡಿಕಾರಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ‘ಇಸ್ರೇಲ್ ವಿನಾಶಕ್ಕೆ ಪಾಕ್ ರಕ್ಷಣಾ ಸಚಿವರು ಕರೆ ನೀಡಿರುವುದು “ಅಸ್ವೀಕಾರಾರ್ಹ” ಎಂದು ಖಂಡಿಸಿದ್ದಾರೆ. ಯಾವುದೇ ದೇಶ ಅಥವಾ ಸರ್ಕಾರದಿಂದ ಇಂತಹ ಹೇಳಿಕೆಯನ್ನು ಸಹಿಸಲು ಸಾಧ್ಯವಿಲ್ಲ. ಅದರಲ್ಲೂ ಶಾಂತಿ ಮಧ್ಯಸ್ಥಿಕೆಯ ಪಾತ್ರ ವಹಿಸುವ ದೇಶ ಇಂತಹ ಪದ ಬಳಕೆ ಮಾಡುವುದು ಸರಿಯಲ್ಲ. ಇಸ್ರೇಲ್ ತನ್ನ ಭದ್ರತೆ ಮತ್ತು ಅಸ್ತಿತ್ವವನ್ನು ರಕ್ಷಿಸಿಕೊಳ್ಳಲು ಯಾವ ಕ್ರಮಕ್ಕೂ ಹಿಂದೇಟು ಹಾಕುವುದಿಲ್ಲ ಎಂದು ಗುಡುಗಿದ್ದಾರೆ.
ಇದಲ್ಲದೆ, ಇಸ್ರೇಲ್ ವಿದೇಶಾಂಗ ಸಚಿವ ಗಿಡಿಯಾನ್ ಸಾರ್ ಕೂಡ ಪಾಕಿಸ್ತಾನದ ಹೇಳಿಕೆಗಳನ್ನು ತೀವ್ರವಾಗಿ ವಿರೋಧಿಸಿದ್ದು ಇಂತಹ ಭಾಷೆ ದ್ವೇಷವನ್ನು ಉತ್ತೇಜಿಸುವಂತಾಗಿದೆ ಎಂದು ಹೇಳಿದ್ದಾರೆ. “ಕ್ಯಾನ್ಸರ್ ರಾಜ್ಯ” ಎಂಬ ಪದ ಬಳಕೆ ಇಸ್ರೇಲ್ನ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಿದೆ ಎಂದು ಕಿಡಿಕಾರಿದ್ದಾರೆ. ಶಾಂತಿ ಮಾತುಕತೆ ನಡೆಸುವ ದೇಶದ ಜವಾಬ್ದಾರಿಯುತ ಸಚಿವರು ಇಂತಹ ಭಾಷೆ ಬಳಸುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಖವಾಜಾ ಆಸಿಫ್ ಇಸ್ರೇಲ್ ವಿರುದ್ಧ ಸಿಟ್ಟು ಹೊರಹಾಕುವುದು ಇದೇ ಮೊದಲೇನಲ್ಲ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಮಾನವಕುಲದ ಅತ್ಯಂತ ದೊಡ್ಡ ಅಪರಾಧಿ. ಅಮೆರಿಕ ವೆನೆಜುವೆಲಾದ ಅಧ್ಯಕ್ಷರನ್ನು ಸೆರೆಹಿಡಿದಂತೆಯೇ ನೆತನ್ಯಾಹು ಅವರನ್ನು ಅಪಹರಿಸಿ ಅಂತರಾಷ್ಟ್ರೀಯ ನ್ಯಾಯಾಲಯಕ್ಕೆ ಒಪ್ಪಿಸಬೇಕು ಎಂದು ಅವರು ಈ ಹಿಂದೆ ಆಗ್ರಹಿಸಿದ್ದರು.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm