ಬ್ರೇಕಿಂಗ್ ನ್ಯೂಸ್
11-04-26 12:44 pm HK News Desk ದೇಶ - ವಿದೇಶ
ಹೂಸ್ಟನ್, ಎಪ್ರಿಲ್ 11: ನಾಸಾದ ನಾಲ್ವರು ಗಗನಯಾತ್ರಿಗಳು ಬಾಹ್ಯಾಕಾಶ ಇತಿಹಾಸದಲ್ಲಿ ಮತ್ತೊಂದು ಅಧ್ಯಾಯ ಬರೆದಿದ್ದಾರೆ. ನಾಸಾದ ‘ಆರ್ಟೆಮಿಸ್-2’ ಗಗನಯಾತ್ರಿಗಳ ತಂಡವು ಚಂದ್ರನ ಕಕ್ಷೆಯನ್ನು ಯಶಸ್ವಿಯಾಗಿ ಸುತ್ತು ಹಾಕುವ ಮೂಲಕ ಹತ್ತು ದಿನಗಳ ಯಾತ್ರೆಯನ್ನು ಕೊನೆಗೊಳಿಸಿದ್ದು ಇಂದು ಮುಂಜಾನೆ ಸುರಕ್ಷಿತವಾಗಿ ಪೆಸಿಫಿಕ್ ಸಾಗರದಲ್ಲಿ ಇಳಿದಿದೆ.
ನಾಲ್ವರು ಗಗನಯಾತ್ರಿಗಳನ್ನು ಹೊತ್ತ ನಾಸಾದ ‘ಒರಿಯಾನ್’ ಕ್ಯಾಪ್ಸೂಲ್ ಇಂದು ಮುಂಜಾನೆ ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೋ ಬಳಿಯ ಪೆಸಿಫಿಕ್ ಮಹಾಸಾಗರದಲ್ಲಿ ಯಶಸ್ವಿಯಾಗಿ ಇಳಿಯಿತು. ಭೂಮಿಯ ವಾತಾವರಣವನ್ನು ಪ್ರವೇಶಿಸುವಾಗ ಉಂಟಾದ ಸುಮಾರು 2,760 ಡಿಗ್ರಿ ಸೆಲ್ಸಿಯಸ್ನಷ್ಟು ಭೀಕರ ತಾಪಮಾನವನ್ನು ನೌಕೆಯ ಹೀಟ್ ಶೀಲ್ಡ್ ಸಮರ್ಥವಾಗಿ ಎದುರಿಸಿತು. ಭೂಮಿ ಸಮೀಪಿಸುತ್ತಿದ್ದಂತೆ ನೌಕೆಯಿಂದ ಗಗನಯಾತ್ರಿಗಳು ಪ್ಯಾರಾಚೂಟ್ ಮೂಲಕ ಸಮುದ್ರಕ್ಕೆ ಇಳಿದಿದ್ದು ಅಮೆರಿಕಾದ ನೌಕಾಪಡೆ ಮತ್ತು ನಾಸಾ ವಿಜ್ಞಾನಿಗಳ ತಂಡ ಸಂಭ್ರಮದಿಂದ ಸ್ವಾಗತಿಸಿದರು. ಐದು ದಶಕದ ಬಳಿಕ ನಾಸಾ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಚಂದ್ರನಲ್ಲಿಗೆ ಗಗನಯಾತ್ರಿಗಳನ್ನು ಕಳುಹಿಸಿತ್ತು. 1972ರ ಅಪೋಲೊ ಯಾತ್ರೆಯ ಬಳಿಕ ಚಂದ್ರನಲ್ಲಿಗೆ ಮಾನವನ ಮೊದಲ ಪ್ರಯಾಣವಾಗಿದ್ದು ಮುಂದಿನ ಎರಡು ವರ್ಷದಲ್ಲಿ ಚಂದ್ರನ ದಕ್ಷಿಣ ಧ್ರುವಕ್ಕೆ ಕಾಲಿಡಲು ಸಿದ್ಧತೆ ನಡೆಸಿದ್ದಾರೆ.




ಮಿಷನ್ನಲ್ಲಿ ರೀಡ್ ವೈಸ್ಮನ್, ವಿಕ್ಟರ್ ಗ್ಲೋವರ್, ಕ್ರಿಸ್ಟಿನಾ ಕೋಚ್ ಮತ್ತು ಜೆರೆಮಿ ಹ್ಯಾನ್ಸನ್ ಪಾಲ್ಗೊಂಡಿದ್ದರು. ಈ ಪೈಕಿ ಕ್ರಿಸ್ಟಿನಾ ಕೋಚ್ ಚಂದ್ರನ ಕಕ್ಷೆಯವರೆಗೆ ಪ್ರಯಾಣಿಸಿದ ಮೊದಲ ಮಹಿಳೆ ಎಂಬ ಇತಿಹಾಸ ನಿರ್ಮಿಸಿದ್ದಾರೆ. ಈ ತಂಡವು ಚಂದ್ರನ ಮೇಲ್ಮೈಗೆ ಇಳಿಯದಿದ್ದರೂ, ಚಂದ್ರನ ಹಿಂಭಾಗದಿಂದ ಹಾದುಹೋಗುವ ಮೂಲಕ ಭೂಮಿಯಿಂದ ಅತಿ ಹೆಚ್ಚು ದೂರ (ಸುಮಾರು 4 ಲಕ್ಷ ಕಿ.ಮೀ) ಪ್ರಯಾಣಿಸಿದ ಮಾನವರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಚಂದ್ರನ ಕಕ್ಷೆಯಲ್ಲಿ ಸುತ್ತುವಾಗ ಗಗನಯಾತ್ರಿಗಳು ಭವಿಷ್ಯದ ಮಾನವ ವಸಾಹತು ಮತ್ತು ಸಂಶೋಧನೆಗಳಿಗೆ ಪೂರಕವಾದ ಮಹತ್ವದ ತಾಂತ್ರಿಕ ಪರೀಕ್ಷೆಗಳನ್ನು ನಡೆಸಿದ್ದಾರೆ. ನೌಕೆಯೊಳಗಿನ ಆಮ್ಲಜನಕ ವ್ಯವಸ್ಥೆ, ವಿಕಿರಣದ ಮಟ್ಟ ಮತ್ತು ಸಂವಹನ ತಂತ್ರಜ್ಞಾನಗಳ ಕಾರ್ಯಕ್ಷಮತೆಯನ್ನು ಈ ಪ್ರವಾಸದಲ್ಲಿ ದೃಢೀಕರಿಸಲಾಗಿದೆ. ಈ ಯಶಸ್ಸು ಮುಂದಿನ ದಿನಗಳಲ್ಲಿ ಚಂದ್ರನ ಮೇಲೆ ಮನುಷ್ಯನನ್ನು ನೇರವಾಗಿ ಇಳಿಸುವ ‘ಆರ್ಟೆಮಿಸ್-3’ ಯೋಜನೆಗೆ ಭದ್ರ ಬುನಾದಿ ಹಾಕಿದೆ.
Four astronauts from NASA have safely returned to Earth after completing a historic journey around the Moon, marking a major milestone in modern space exploration. The crew of the Artemis II mission concluded their 10-day voyage with a successful splashdown in the Pacific Ocean early today.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 12:44 pm
HK News Desk
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
11-04-26 03:09 pm
Mangalore Correspondent
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm