ಬ್ರೇಕಿಂಗ್ ನ್ಯೂಸ್
12-04-26 10:59 pm HK News Desk ದೇಶ - ವಿದೇಶ
ವಾಷಿಂಗ್ಟನ್, ಎಪ್ರಿಲ್ 12: ಇರಾನ್ ಜೊತೆಗಿನ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ಪ್ರಕಟಣೆ ನೀಡಿದ್ದು, ಹೋರ್ಮುಜ್ ಜಲಸಂಧಿ ಮೂಲಕ ತೆರಳುವ ಎಲ್ಲ ಹಡಗುಗಳನ್ನು ಅಮೆರಿಕ ನೌಕಾಪಡೆ ತಡೆಹಿಡಿಯಲಿದೆ ಎಂದು ತಿಳಿಸಿದ್ದಾರೆ. ಈ ಕುರಿತ ಪೋಸ್ಟ್ನಲ್ಲಿ, ಇತ್ತೀಚಿನ ಮಾತುಕತೆಯಲ್ಲಿ ಬಹುತೇಕ ವಿಷಯಗಳು ಬಗೆಹರಿದಿದ್ದರೂ, “ನಿಜವಾಗಿ ಅಗತ್ಯವಾಗಿದ್ದ ಅಣ್ವಸ್ತ್ರ ಸಂಬಂಧಿತ ವಿಷಯ ಮಾತ್ರ ಬಗೆಹರಿದಿಲ್ಲ” ಎಂದು ಹೇಳಿದ್ದಾರೆ.
ಇರಾನ್ ಹೋರ್ಮುಜ್ ಜಲಸಂಧಿಯಲ್ಲಿ ಸಮುದ್ರ ಸ್ಫೋಟಕಗಳನ್ನು (ಮೈನ್ಸ್) ಅಳವಡಿಸಿರಬಹುದೆಂಬ ಸೂಚನೆ ನೀಡಿ ಅಸ್ಥಿರತೆ ಸೃಷ್ಟಿಸುತ್ತಿದೆ ಎಂದು ಅವರು ಆರೋಪಿಸಿದ್ದು, ಇದನ್ನು “ಜಗತ್ತಿನ ಮೇಲೆ ನಡೆಯುತ್ತಿರುವ ಬಲವಂತದ ವಸೂಲಿ” ಎಂದು ವರ್ಣಿಸಿದ್ದಾರೆ. ಇರಾನ್ಗೆ ಶುಲ್ಕ ಪಾವತಿಸಿರುವ ಪ್ರತಿ ಹಡಗನ್ನೂ ಪತ್ತೆಹಚ್ಚಿ ತಡೆದು ಪರಿಶೀಲಿಸಲು ನಮ್ಮ ನೌಕಾಪಡೆಗೆ ಆದೇಶಿಸಿದ್ದೇನೆ. ಅನಧಿಕೃತ ಶುಲ್ಕವನ್ನು ಪಾವತಿಸಿದ ಯಾರಿಗೂ ಮುಕ್ತ ಸಮುದ್ರದಲ್ಲಿ ಸುರಕ್ಷಿತ ಸಂಚಾರದ ಹಕ್ಕು ಇರುವುದಿಲ್ಲ. ಇರಾನ್ ಹೋರ್ಮುಜ್ ಜಲಸಂಧಿಯಲ್ಲಿ ಅಳವಡಿಸಿರುವ ಮೈನ್ಸ್ಗಳನ್ನು ನಾಶಪಡಿಸುವ ಕಾರ್ಯವನ್ನೂ ಮಾಡುತ್ತೇವೆ ಎಂದಿದ್ದಾರೆ.
ನಮ್ಮ ಮೇಲೆ ಅಥವಾ ಇತರೇ ಹಡಗುಗಳ ಮೇಲೆ ಗುಂಡು ಹಾರಿಸುವ ಯಾವುದೇ ಇರಾನಿಯನ್ನೂ ಸಂಪೂರ್ಣವಾಗಿ ನಾಶ ಮಾಡಲಾಗುತ್ತದೆ. ಈಗಾಗಲೇ ತಮ್ಮ ದೇಶವನ್ನು ಹಾಳು ಮಾಡಿರುವ ಈ ಪರಿಸ್ಥಿತಿಗೆ ತೆರೆ ಎಳೆಯುವ ಮಾರ್ಗವನ್ನು ಇರಾನ್ ಇತರರಿಗಿಂತ ಹೆಚ್ಚು ಚೆನ್ನಾಗಿ ತಿಳಿದಿದೆ” ಎಂದು ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.
ಇರಾನ್ಗೆ ಶುಲ್ಕ ಪಾವತಿಸುತ್ತಿದೆ ಎಂದು ಶಂಕೆ ಇರುವ ಹಡಗುಗಳನ್ನು ಅಮೆರಿಕದ ಪಡೆಗಳು ತಡೆದು ಪರಿಶೀಲಿಸಲಿದೆ, ಹಾಗೆಯೇ ಆ ಜಲಮಾರ್ಗದಲ್ಲಿ ಅಳವಡಿಸಲಾಗಿದೆ ಎಂದು ಹೇಳಲಾಗಿರುವ ಸ್ಫೋಟಕಗಳನ್ನು ತೆರವುಗೊಳಿಸುವುದಾಗಿ ಟ್ರಂಪ್ ಹೇಳಿದ್ದಾರೆ. ಯಾವುದೇ ವೈರತ್ವದ ಕ್ರಮ ನಡೆದರೆ ಕಠಿಣ ಸೈನಿಕ ಪ್ರತೀಕಾರ ಎದುರಾಗಲಿದೆ ಎಂದು ಅವರು ಎಚ್ಚರಿಸಿದರು. “ಅವರ ನೌಕಾಪಡೆ, ವಾಯುಪಡೆ ನಾಶವಾಗಿದೆ. ವಾಯು ರಕ್ಷಣಾ ವ್ಯವಸ್ಥೆ ಮತ್ತು ರಾಡಾರ್ಗಳು ಪ್ರಯೋಜನ ಕಳೆದುಕೊಂಡಿವೆ. ಖೋಮೇನಿ ಮತ್ತು ಅವರ ‘ನಾಯಕರು’ ಬಹುತೇಕ ಸತ್ತಿದ್ದಾರೆ. ಇವೆಲ್ಲದಕ್ಕೂ ಅವರ ಅಣ್ವಸ್ತ್ರದ ಆಸೆಯೇ ಕಾರಣವಾಗಿದೆ.
ಇರಾನ್ ಮೇಲಿನ ನಿಷೇಧ ಕ್ರಮ ಶೀಘ್ರದಲ್ಲೇ ಆರಂಭವಾಗಲಿದ್ದು ಇತರ ದೇಶಗಳೂ ಇದರಲ್ಲಿ ಭಾಗಿಯಾಗಲಿವೆ. ಬಲವಂತದ (ಎಕ್ಸ್ಟಾರ್ಷನ್) ಮೂಲಕ ಇರಾನ್ ಲಾಭ ಪಡೆಯಲು ಅವಕಾಶ ನೀಡುವುದಿಲ್ಲ. ಅವರಿಗೆ ಹಣ ಬೇಕು, ಅದಕ್ಕಿಂತ ಮುಖ್ಯವಾಗಿ ಅಣ್ವಸ್ತ್ರ ಸಾಮರ್ಥ್ಯ ಬೇಕು. ಸೂಕ್ತ ಸಮಯದಲ್ಲಿ ನಾವು ಸಂಪೂರ್ಣ ಸಜ್ಜುಗೊಂಡಿದ್ದೇವೆ. ನಮ್ಮ ಸೈನ್ಯ ಇರಾನ್ನ ಉಳಿದಿರುವ ಅಲ್ಪ ಶಕ್ತಿಯನ್ನೂ ಸಂಪೂರ್ಣವಾಗಿ ನಾಶಮಾಡಲಿದೆ ಎಂದು ಡೊನಾಲ್ಡ್ ಟ್ರಂಪ್ ತಮ್ಮ ಪೋಸ್ಟ್ನಲ್ಲಿ ಹೇಳಿದ್ದಾರೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm