ಬ್ರೇಕಿಂಗ್ ನ್ಯೂಸ್
13-04-26 01:27 pm HK News Staffer ದೇಶ - ವಿದೇಶ
ಟೆಹ್ರಾನ್, ಏಪ್ರಿಲ್ 13: ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆ ಯಶಸ್ವಿಯಾಗಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ. ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ 21 ಗಂಟೆಗಳ ಸುದೀರ್ಘ ಸಂಧಾನ ವಿಫಲವಾದ ಕೆಲವೇ ಗಂಟೆಗಳಲ್ಲಿ, ಇರಾನ್, ಇಸ್ರೇಲ್ ಪ್ರಧಾನಿ ಮೇಲೆ ಆರೋಪ ಹೊರಿಸಿದೆ.
ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಾಘ್ಚಿ, ಮಾತುಕತೆ ಹಳಿ ತಪ್ಪಲು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ. ಮಾತುಕತೆ ನಡೆಯುತ್ತಿದ್ದ ವೇಳೆ ನೆತನ್ಯಾಹು, ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಅವರಿಗೆ ದೂರವಾಣಿ ಕರೆ ಮಾಡಿದ್ದು, ಅದರ ಬಳಿಕ ಮಾತುಕತೆ ದಿಕ್ಕು ತಪ್ಪಿತು ಎಂದು ಅವರು ಹೇಳಿದ್ದಾರೆ.
ಯುದ್ಧದ ಮೂಲಕ ಸಾಧಿಸಲು ಸಾಧ್ಯವಾಗದ್ದನ್ನ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಲು ಅಮೆರಿಕ ಪ್ರಯತ್ನಿಸಿತ್ತು. ಆದ್ರೆ ಸಭೆ ನಡೆಯುತ್ತಿದ್ದಾಗ ನೆತನ್ಯಾಹು, ವ್ಯಾನ್ಸ್ಗೆ ಕರೆ ಮಾಡಿ, ಅಮೆರಿಕ- ಇರಾನ್ ಮಾತುಕತೆಗಳಿಂದ ಗಮನವನ್ನ ಇಸ್ರೇಲ್ ಹಿತಾಸಕ್ತಿಗಳತ್ತ ಸೆಳೆದರು. ಇದು ಒಪ್ಪಂದವನ್ನು ಹಾಳುಮಾಡಿತು ಎಂದು ಅರಾಘ್ಚಿ ತಮ್ಮ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ಇದೇ ವೇಳೆ, ವ್ಯಾನ್ಸ್ ಇಸ್ಲಾಮಾಬಾದ್ ತೊರೆಯುವ ಮುನ್ನ ನಡೆಸಿದ ಸುದ್ದಿಗೋಷ್ಠಿಯೂ ಅನಗತ್ಯವಾಗಿತ್ತು ಎಂದು ಇರಾನ್ ಟೀಕಿಸಿದೆ. ತನ್ನ ರಾಷ್ಟ್ರೀಯ ಹಿತಾಸಕ್ತಿ ಹಾಗೂ ಸಾರ್ವಭೌಮತ್ವವನ್ನು ಕಾಪಾಡಲು ಇರಾನ್ ಸಂಪೂರ್ಣ ಬದ್ಧವಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ನೆತನ್ಯಾಹು ಕರೆ ಮಾಡಿದ ಆರೋಪದ ಕುರಿತು ಅಮೆರಿಕ ಸ್ಪಷ್ಟನೆ ನೀಡದಿದ್ದರೂ, ಅದನ್ನು ಸಂಪೂರ್ಣವಾಗಿ ತಳ್ಳಿ ಹಾಕಿಲ್ಲ. ಈ ವಿಷಯದಲ್ಲಿ ಪ್ರತಿಕ್ರಿಯೆಯನ್ನು ಕಾಯ್ದಿರಿಸಿರುವುದು ಗಮನಾರ್ಹವಾಗಿದೆ.
ಮಾತುಕತೆ ವಿಫಲವಾದ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ಕ್ರಮ ಕೈಗೊಂಡಿದ್ದು, ಹಾರ್ಮುಜ್ ಜಲಸಂಧಿ ಪ್ರದೇಶದಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಲು ಯುಎಸ್ ನೌಕಾಪಡೆಗೆ ಸೂಚನೆ ನೀಡಿದ್ದಾರೆ. ಇರಾನ್ಗೆ ಸಂಬಂಧಿಸಿದ ಅಕ್ರಮ ಸಾಗಾಟವನ್ನು ತಡೆಯಲು ಹಡಗುಗಳ ಸಂಚಾರದ ಮೇಲೂ ನಿಯಂತ್ರಣ ವಿಧಿಸುವ ಸಾಧ್ಯತೆ ಇದೆ. ಈ ಬೆಳವಣಿಗೆಗಳಿಂದ ಜಾಗತಿಕ ಮಟ್ಟದಲ್ಲಿ ತೈಲ ಬಿಕ್ಕಟ್ಟು ಮತ್ತಷ್ಟು ತೀವ್ರಗೊಳ್ಳುವ ಆತಂಕ ಎದುರಾಗಿದ್ದು, ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುವ ಸೂಚನೆಗಳು ಕಾಣಿಸುತ್ತಿವೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm