ಬ್ರೇಕಿಂಗ್ ನ್ಯೂಸ್
13-04-26 01:27 pm HK News Staffer ದೇಶ - ವಿದೇಶ
ಟೆಹ್ರಾನ್, ಏಪ್ರಿಲ್ 13: ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆ ಯಶಸ್ವಿಯಾಗಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ. ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ 21 ಗಂಟೆಗಳ ಸುದೀರ್ಘ ಸಂಧಾನ ವಿಫಲವಾದ ಕೆಲವೇ ಗಂಟೆಗಳಲ್ಲಿ, ಇರಾನ್, ಇಸ್ರೇಲ್ ಪ್ರಧಾನಿ ಮೇಲೆ ಆರೋಪ ಹೊರಿಸಿದೆ.
ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಾಘ್ಚಿ, ಮಾತುಕತೆ ಹಳಿ ತಪ್ಪಲು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ. ಮಾತುಕತೆ ನಡೆಯುತ್ತಿದ್ದ ವೇಳೆ ನೆತನ್ಯಾಹು, ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಅವರಿಗೆ ದೂರವಾಣಿ ಕರೆ ಮಾಡಿದ್ದು, ಅದರ ಬಳಿಕ ಮಾತುಕತೆ ದಿಕ್ಕು ತಪ್ಪಿತು ಎಂದು ಅವರು ಹೇಳಿದ್ದಾರೆ.
ಯುದ್ಧದ ಮೂಲಕ ಸಾಧಿಸಲು ಸಾಧ್ಯವಾಗದ್ದನ್ನ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಲು ಅಮೆರಿಕ ಪ್ರಯತ್ನಿಸಿತ್ತು. ಆದ್ರೆ ಸಭೆ ನಡೆಯುತ್ತಿದ್ದಾಗ ನೆತನ್ಯಾಹು, ವ್ಯಾನ್ಸ್ಗೆ ಕರೆ ಮಾಡಿ, ಅಮೆರಿಕ- ಇರಾನ್ ಮಾತುಕತೆಗಳಿಂದ ಗಮನವನ್ನ ಇಸ್ರೇಲ್ ಹಿತಾಸಕ್ತಿಗಳತ್ತ ಸೆಳೆದರು. ಇದು ಒಪ್ಪಂದವನ್ನು ಹಾಳುಮಾಡಿತು ಎಂದು ಅರಾಘ್ಚಿ ತಮ್ಮ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ಇದೇ ವೇಳೆ, ವ್ಯಾನ್ಸ್ ಇಸ್ಲಾಮಾಬಾದ್ ತೊರೆಯುವ ಮುನ್ನ ನಡೆಸಿದ ಸುದ್ದಿಗೋಷ್ಠಿಯೂ ಅನಗತ್ಯವಾಗಿತ್ತು ಎಂದು ಇರಾನ್ ಟೀಕಿಸಿದೆ. ತನ್ನ ರಾಷ್ಟ್ರೀಯ ಹಿತಾಸಕ್ತಿ ಹಾಗೂ ಸಾರ್ವಭೌಮತ್ವವನ್ನು ಕಾಪಾಡಲು ಇರಾನ್ ಸಂಪೂರ್ಣ ಬದ್ಧವಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ನೆತನ್ಯಾಹು ಕರೆ ಮಾಡಿದ ಆರೋಪದ ಕುರಿತು ಅಮೆರಿಕ ಸ್ಪಷ್ಟನೆ ನೀಡದಿದ್ದರೂ, ಅದನ್ನು ಸಂಪೂರ್ಣವಾಗಿ ತಳ್ಳಿ ಹಾಕಿಲ್ಲ. ಈ ವಿಷಯದಲ್ಲಿ ಪ್ರತಿಕ್ರಿಯೆಯನ್ನು ಕಾಯ್ದಿರಿಸಿರುವುದು ಗಮನಾರ್ಹವಾಗಿದೆ.
ಮಾತುಕತೆ ವಿಫಲವಾದ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ಕ್ರಮ ಕೈಗೊಂಡಿದ್ದು, ಹಾರ್ಮುಜ್ ಜಲಸಂಧಿ ಪ್ರದೇಶದಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಲು ಯುಎಸ್ ನೌಕಾಪಡೆಗೆ ಸೂಚನೆ ನೀಡಿದ್ದಾರೆ. ಇರಾನ್ಗೆ ಸಂಬಂಧಿಸಿದ ಅಕ್ರಮ ಸಾಗಾಟವನ್ನು ತಡೆಯಲು ಹಡಗುಗಳ ಸಂಚಾರದ ಮೇಲೂ ನಿಯಂತ್ರಣ ವಿಧಿಸುವ ಸಾಧ್ಯತೆ ಇದೆ. ಈ ಬೆಳವಣಿಗೆಗಳಿಂದ ಜಾಗತಿಕ ಮಟ್ಟದಲ್ಲಿ ತೈಲ ಬಿಕ್ಕಟ್ಟು ಮತ್ತಷ್ಟು ತೀವ್ರಗೊಳ್ಳುವ ಆತಂಕ ಎದುರಾಗಿದ್ದು, ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುವ ಸೂಚನೆಗಳು ಕಾಣಿಸುತ್ತಿವೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm