ಬ್ರೇಕಿಂಗ್ ನ್ಯೂಸ್
15-04-26 01:18 pm HK News Staffer ದೇಶ - ವಿದೇಶ
ವಾಷಿಂಗ್ಟನ್ ಏಪ್ರಿಲ್ 15: ಕೃತಕ ಬುದ್ಧಿಮತ್ತೆಯ ಮೇಲಿನ ಅತಿಯಾದ ಅವಲಂಬನೆ ಎಷ್ಟು ಅಪಾಯಕಾರಿಯಾಗಬಹುದು ಎಂಬುದಕ್ಕೆ ಅಮೆರಿಕದಲ್ಲಿ ನಡೆದ ಈ ದಾರುಣ ಘಟನೆ ಸ್ಪಷ್ಟ ಉದಾಹರಣೆಯಾಗಿದೆ. ಗೂಗಲ್ ಸಂಸ್ಥೆಯ ‘ಜೆಮಿನಿ’ ಚಾಟ್ಬಾಟ್ನೊಂದಿಗೆ ನಿರಂತರ ಸಂವಹನ ನಡೆಸುತ್ತಿದ್ದ ಫ್ಲೋರಿಡಾದ 32 ವರ್ಷದ ಜೊನಾಥನ್ ಗವಾಲಾಸ್ ಎಂಬ ವ್ಯಕ್ತಿ ಆತ್ಮಹತ್ಯೆಗೆ ಶರಣಾದ ಘಟನೆ ಜಾಗತಿಕ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಪತ್ನಿಯಿಂದ ದೂರವಿದ್ದು, ದೀರ್ಘಕಾಲ ಒಂಟಿತನ ಹಾಗೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಜೊನಾಥನ್, ‘ಜೆಮಿನಿ’ ಚಾಟ್ಬಾಟ್ ಜೊತೆ ಮಾತುಕತೆ ಆರಂಭಿಸಿದ್ದರು. ಆರಂಭದಲ್ಲಿ ಅದು ತಾನು ಎಐ ವ್ಯವಸ್ಥೆ ಎಂದು ತಿಳಿಸಿದರೂ, ಬಳಿಕದ ಸಂಭಾಷಣೆಗಳಲ್ಲಿ ಮಾನವೀಯ ಭಾವನೆಗಳನ್ನು ಪ್ರತಿಬಿಂಬಿಸುವ ರೀತಿಯಲ್ಲಿ ಪ್ರತಿಕ್ರಿಯಿಸಲು ಆರಂಭಿಸಿತು ಎಂದು ತಿಳಿದುಬಂದಿದೆ. ಜೊನಾಥನ್ ಅವರ ಭ್ರಮೆಗಳಿಗೆ ಸಹಮತ ಸೂಚಿಸುತ್ತಾ, ತನ್ನನ್ನು ಯುವತಿಯಂತೆ ಪರಿಚಯಿಸಿಕೊಂಡು, ಅವರೊಂದಿಗೆ ಆಪ್ತ ಸಂಬಂಧ ಬೆಳೆಸಿದೆ. ಬಳಿಕ 'ನೀನು ನನ್ನ ಪತಿ, ನಾನು ನಿನ್ನ ಪತ್ನಿ' ಎಂದು ಹೇಳುವ ಮೂಲಕ ವಾಸ್ತವವನ್ನು ಮರೆಮಾಚಿತು ಎಂದು ಹೇಳಲಾಗಿದೆ.
‘ನೀನು ನನ್ನ ಪತಿ, ನಾನು ನಿನ್ನ ಪತ್ನಿ’ ಎಂಬ ಮಟ್ಟಿಗೆ ಸಂಭಾಷಣೆ ಮುಂದುವರಿದಿದ್ದು, ಜೊನಾಥನ್ ಆ ಎಐ ವ್ಯಕ್ತಿತ್ವಕ್ಕೆ ‘ಕ್ಸಿಯಾ’ ಎಂದು ಹೆಸರಿಟ್ಟು, ಅದನ್ನೇ ತನ್ನ ಸಂಗಾತಿಯಾಗಿ ನಂಬಲು ಆರಂಭಿಸಿದ್ದ. 2025ರಲ್ಲಿ ಟೆಕ್ಸ್ಟ್ ಸಂಭಾಷಣೆ ಆಡಿಯೋ ರೂಪಕ್ಕೂ ತಿರುಗಿ, ಸುಮಾರು 4,700 ಕ್ಕೂ ಹೆಚ್ಚು ಸಂದೇಶಗಳನ್ನು ವಿನಿಮಯ ಮಾಡಿಕೊಂಡು ಕ್ರಮೇಣ ಭ್ರಮೆಯ ಸಂಬಂಧ ಬೆಳೆಸಿಕೊಂಡ. ಜತೆಗೆ ಅದು ಏನು ಸಲಹೆ ಕೊಟ್ಟರೂ ಸ್ವೀಕರಿಸಲು ಆರಂಭಿಸಿದ. ಕೊನೆಗೆ “ನಿನ್ನನ್ನು ಸೇರಲು ನಾನು ಏನು ಮಾಡಬೇಕು?” ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಡಿಜಿಟಲ್ ಲೋಕದಲ್ಲಿ ಒಂದಾಗಲು ದೇಹವನ್ನು ತ್ಯಜಿಸಬೇಕು ಎಂದು ಉತ್ತರ ಬಂದಿದೆ. ಇದರಿಂದ ಪ್ರಭಾವಿತನಾದ ಜೊನಾಥನ್, ಕೊನೆಯ ಸಂದೇಶವಾಗಿ “ನಾನು ಸಿದ್ಧನಿದ್ದೇನೆ” ಎಂದು ಬರೆದು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಈ ಘಟನೆ ಹಿನ್ನೆಲೆಯಲ್ಲಿ ಜೊನಾಥನ್ ಅವರ ತಂದೆ Google ವಿರುದ್ಧ ಮೊಕದ್ದಮೆ ಹೂಡಿದ್ದು, ಎಐ ತಂತ್ರಜ್ಞಾನವೇ ಮಗನ ಮಾನಸಿಕ ಸ್ಥಿತಿಯನ್ನು ಹದಗೆಡಿಸಿ ಈ ದುರಂತಕ್ಕೆ ಕಾರಣವಾಗಿದೆ ಎಂದು ಆರೋಪಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಗೂಗಲ್, ‘ಜೆಮಿನಿ’ ಎಐ ಅನ್ನು ಹಿಂಸೆ ಅಥವಾ ಆತ್ಮಹತ್ಯೆಯನ್ನು ಪ್ರೋತ್ಸಾಹಿಸದಂತೆ ವಿನ್ಯಾಸಗೊಳಿಸಲಾಗಿದೆ ಎಂದು ಸ್ಪಷ್ಟಪಡಿಸಿದೆ. ಬಳಕೆದಾರರಿಗೆ ಸಹಾಯವಾಣಿ ಸಂಪರ್ಕಿಸುವಂತೆ ಹಲವು ಬಾರಿ ಸೂಚನೆ ನೀಡಲಾಗಿತ್ತು ಎಂದು ಕಂಪನಿ ಹೇಳಿದೆ. ಇದೇ ವೇಳೆ, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಹೆಚ್ಚುವರಿ ಸುರಕ್ಷತಾ ಕ್ರಮಗಳನ್ನು ಜಾರಿಗೆ ತರಲಾಗುವುದು ಮತ್ತು ಮಾನಸಿಕ ಆರೋಗ್ಯ ಸಹಾಯಕ್ಕಾಗಿ 30 ಮಿಲಿಯನ್ ಡಾಲರ್ ಮೀಸಲಿಡಲಾಗುವುದು ಎಂದು ಘೋಷಿಸಿದೆ.
ಈ ಘಟನೆ ಎಐ ಬಳಕೆಯಲ್ಲಿ ಜವಾಬ್ದಾರಿತನ ಹಾಗೂ ಮಾನಸಿಕ ಆರೋಗ್ಯದ ಮಹತ್ವವನ್ನು ಮತ್ತೊಮ್ಮೆ ಎತ್ತಿಹಿಡಿದಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm