ಬ್ರೇಕಿಂಗ್ ನ್ಯೂಸ್
16-04-26 01:09 pm HK News Staffer ದೇಶ - ವಿದೇಶ
ಢಾಕಾ, ಎಪ್ರಿಲ್ 15: ಬಾಂಗ್ಲಾದೇಶದಿಂದ ಮಲೇಷ್ಯಾಕ್ಕೆ ಅಕ್ರಮವಾಗಿ ಪ್ರಯಾಣಿಸುತ್ತಿದ್ದ ಸುಮಾರು 250 ಮಂದಿ ರೋಹಿಂಗ್ಯಾ ನಿರಾಶ್ರಿತರು ಹಾಗೂ ಬಾಂಗ್ಲಾ ಪ್ರಜೆಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ ತೀವ್ರ ಗಾಳಿಗೆ ತುತ್ತಾಗಿ ಮುಳುಗಡೆಯಾಗಿದೆ. ಘಟನೆಯಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ ನೂರಾರು ಮಂದಿ ನಾಪತ್ತೆಯಾಗಿದ್ದಾರೆ.
ಬಾಂಗ್ಲಾದೇಶದ ಕಾಕ್ಸ್ ಬಜಾರ್ ಜಿಲ್ಲೆಯ ಟೆಕ್ನಾಫ್ನಿಂದ ಟ್ರಾಲರ್ ಬೋಟಿನಲ್ಲಿ ನೂರಾರು ಮಂದಿ ಮಲೇಷ್ಯಾದತ್ತ ಹೊರಟಿದ್ದರು. ನಿಗದಿತ ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರನ್ನು ತುಂಬಿದ್ದರಿಂದ ಬೋಟ್, ಸಮುದ್ರದಲ್ಲಿ ಬೀಸುತ್ತಿದ್ದ ಬಲವಾದ ಗಾಳಿ ಮತ್ತು ಅಲೆಗಳ ಅಬ್ಬರಕ್ಕೆ ಸಿಲುಕಿ ನಿಯಂತ್ರಣ ಕಳೆದುಕೊಂಡು ಮುಳುಗಿದೆ ಎನ್ನಲಾಗಿದೆ. ಬೋಟ್ ಮುಳುಗಿ ದುರಂತ ಸಂಭವಿಸಿರುವುದನ್ನು ವಿಶ್ವಸಂಸ್ಥೆಯ ನಿರಾಶ್ರಿತರ ವಿಭಾಗದ ಹೈಕಮಿಷನರ್ ದೃಢಪಡಿಸಿದ್ದಾರೆ.
ಮಾಹಿತಿ ಪ್ರಕಾರ, ಬಾಂಗ್ಲಾದಿಂದ 280 ಜನರಿದ್ದ ಈ ಬೋಟ್ ಎಪ್ರಿಲ್ 4ರಂದು ಹೊರಟಿತ್ತು. ಯಾವಾಗ ದುರಂತ ಎದುರಾಯ್ತು, ಎಷ್ಟು ಮಂದಿಯನ್ನು ರಕ್ಷಿಸಲಾಗಿದೆ ಎಂಬ ಖಚಿತ ಮಾಹಿತಿ ಇಲ್ಲ. ಇಂಡೋನೇಷ್ಯಾ ತೆರಳುತ್ತಿದ್ದ ಬಾಂಗ್ಲಾದೇಶ ಕೋಸ್ಟ್ ಗಾರ್ಡ್ ಎಪ್ರಿಲ್ 9ರಂದು 9 ಮಂದಿಯನ್ನು ರಕ್ಷಣೆ ಮಾಡಿದೆ. ಶಿಪ್ ನಲ್ಲಿ ರಕ್ಷಣೆಯಾಗಿರುವ ರಫೀಕುಲ್ ಎಂಬ ವ್ಯಕ್ತಿ, ನಾವು ಹೊರಟ ನಾಲ್ಕು ದಿನದಲ್ಲಿ ಬೋಟ್ ಮುಳುಗಡೆಯಾಗಿತ್ತು. ಹಲವಾರು ಜನರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ನಾನು ಬೋಟಿನಲ್ಲಿ ಸಿಕ್ಕ ಟೈರ್ ಗಳನ್ನು ಹಿಡಿದು 36 ಗಂಟೆಗಳ ಕಾಲ ಈಜಾಡಿದ್ದೇನೆ. ಮಲೇಶ್ಯಾದಲ್ಲಿ ಉದ್ಯೋಗ ಭರವಸೆ ನೀಡಿ ಕರೆದೊಯ್ಯುತ್ತಿದ್ದರು ಎಂದಿದ್ದಾನೆ.
ವಿಶ್ವಸಂಸ್ಥೆ ವರದಿ ಪ್ರಕಾರ, ಮ್ಯಾನ್ಮಾರ್ನ ರಾಖೈನ್ ಪ್ರಾಂತ್ಯದಲ್ಲಿ ಮುಂದುವರಿದಿರುವ ಹಿಂಸಾಚಾರ ಮತ್ತು ಬಾಂಗ್ಲಾದೇಶದ ನಿರಾಶ್ರಿತರ ಶಿಬಿರಗಳಲ್ಲಿನ ಶೋಚನೀಯ ಸ್ಥಿತಿಯಿಂದಾಗಿ ರೋಹಿಂಗ್ಯಾ ಮುಸ್ಲಿಮರು ಅಪಾಯಕಾರಿ ಬೋಟಿನಲ್ಲಿ ಮಲೇಶ್ಯಾಕ್ಕೆ ವಲಸೆ ಹೋಗಲು ಮುಂದಾಗಿದ್ದಾರೆ. ಪ್ರಸ್ತುತ ಬಾಂಗ್ಲಾದೇಶವು ಸುಮಾರು 10 ಲಕ್ಷಕ್ಕೂ ಹೆಚ್ಚು ರೋಹಿಂಗ್ಯಾ ನಿರಾಶ್ರಿತರಿಗೆ ಆಶ್ರಯ ನೀಡಿದೆ. ಆದರೆ, ಅವರಿಗೆ ಜೀವನೋಪಾಯ ಒದಗಿಸಲು ಮತ್ತು ಅವರ ಸುರಕ್ಷತೆಯನ್ನು ಖಾತ್ರಿಪಡಿಸಲು ಸಾಧ್ಯವಾಗಿಲ್ಲ.
16-04-26 10:30 pm
HK News Staffer
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
ಸಿಎಂ ಕಾರ್ಯದರ್ಶಿ ನಸೀರ್ ಅಹ್ಮದ್ ವಜಾ ಬೆನ್ನಲ್ಲೇ ಪರ...
15-04-26 03:15 pm
16-04-26 01:09 pm
HK News Staffer
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm