ಬ್ರೇಕಿಂಗ್ ನ್ಯೂಸ್
18-04-26 10:31 am HK News Staffer ದೇಶ - ವಿದೇಶ
ಟೆಹ್ರಾನ್, ಎಪ್ರಿಲ್ 18: ಒಂದೂವರೆ ತಿಂಗಳಿನಿಂದ ಸಂಘರ್ಷದ ಕಾರಣಕ್ಕೆ ತೀವ್ರ ಇಕ್ಕಟ್ಟಿನಲ್ಲಿ ಸಿಲುಕಿದ್ದ ಹಾರ್ಮುಜ್ ಜಲಸಂಧಿಯನ್ನು ಎಲ್ಲಾ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣವಾಗಿ ಮುಕ್ತಗೊಳಿಸುವುದಾಗಿ ಇರಾನ್ ಘೋಷಿಸಿದೆ. ಲೆಬನಾನ್ ಮತ್ತು ಇಸ್ರೇಲ್ ನಡುವಿನ 10 ದಿನಗಳ ತಾತ್ಕಾಲಿಕ ಕದನ ವಿರಾಮ ಜಾರಿಗೆ ಬಂದ ಬೆನ್ನಲ್ಲೇ ಈ ನಿರ್ಧಾರ ಹೊರಬಿದ್ದಿದೆ.
ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಅವರು ‘ಎಕ್ಸ್’ ನಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ. “ಲೆಬನಾನ್–ಇಸ್ರೇಲ್ ಕದನ ವಿರಾಮದ ಉಳಿದ ಅವಧಿ ವರೆಗೆ (ಏಪ್ರಿಲ್ 27ರ ವರೆಗೆ) ಜಲಸಂಧಿ ಹಡಗುಗಳ ಸಂಚಾರಕ್ಕೆ ಮುಕ್ತವಾಗಿರಲಿದೆ. ಹಡಗುಗಳು ಇರಾನ್ನ ಬಂದರು ಮತ್ತು ಕಡಲ ಸಂಸ್ಥೆ ಈಗಾಗಲೇ ನಿಗದಿಪಡಿಸಿರುವ ಮಾರ್ಗದಲ್ಲೇ ಸಂಚರಿಸಬೇಕು,” ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ನೌಕಾಪಡೆ ಕೆಲವು ದಿನಗಳಿಂದ ಗಣಿ ತೆರವು ಕಾರ್ಯಾಚರಣೆ ಮತ್ತು ಹಡಗುಗಳ ತಪಾಸಣೆ ಆರಂಭಿಸಿದ ನಂತರ ಉದ್ವಿಗ್ನತೆ ಹೆಚ್ಚಾಗಿತ್ತು. ಪರಿಸ್ಥಿತಿ ಸುಧಾರಿಸಿದರೆ ನೌಕಾಯಾನದ ಸ್ವಾತಂತ್ರ್ಯವನ್ನು ಮರು ಸ್ಥಾಪಿಸಲು ತಾವು ಸಿದ್ಧರಿದ್ದೇವೆ ಎಂಬ ಸಂಕೇತವನ್ನು ರವಾನಿಸುವ ಉದ್ದೇಶ ಇರಾನ್ ನಿರ್ಧಾರದ ಹಿಂದಿದೆ ಎಂದು ಎನ್ನಲಾಗುತ್ತಿದೆ.
ಇದೇ ವೇಳೆ ಜಲಸಂಧಿಯಲ್ಲಿ ಶಾಂತಿ ಸ್ಥಾಪಿಸಲು ಫ್ರಾನ್ಸ್ ಮತ್ತು ಬ್ರಿಟನ್ ಮುಂದಾಗಿವೆ. ಸುಮಾರು 40 ದೇಶಗಳ ಮತ್ತೊಂದು ಬೃಹತ್ ಸಭೆಯ ಅಧ್ಯಕ್ಷತೆಯನ್ನು ವಹಿಸುವುದಾಗಿ ಉಭಯ ರಾಷ್ಟ್ರಗಳು ಘೋಷಿಸಿವೆ. ಜಲಸಂಧಿಯಲ್ಲಿ ಅಡೆತಡೆಯಿಲ್ಲದ ಸಂಚಾರಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಒಮ್ಮತ ಮೂಡಿಸುವುದು ಸಭೆಯ ಮುಖ್ಯ ಉದ್ದೇಶವಾಗಿದೆ. ವಿಶ್ವದ ಪ್ರಮುಖ ತೈಲ ಸಾಗಾಣಿಕಾ ಮಾರ್ಗವು ಮತ್ತೆ ಮುಕ್ತವಾಗಿರುವುದರಿಂದ ಜಾಗತಿಕ ತೈಲ ಬೆಲೆಗಳಲ್ಲಿ ಉಂಟಾಗಬಹುದಾಗಿದ್ದ ಭಾರಿ ಏರಿಳಿತದ ಆತಂಕ ಸದ್ಯಕ್ಕೆ ದೂರವಾಗಿದೆ. ಏಪ್ರಿಲ್ 27ರ ವರೆಗೆ ಈ ಕದನ ವಿರಾಮ ಇರುವುದರಿಂದ, ಮುಂದಿನ ಹತ್ತು ದಿನಗಳಲ್ಲಿ ನಡೆಯಲಿರುವ ರಾಜತಾಂತ್ರಿಕ ಚರ್ಚೆಗಳು ಶಾಶ್ವತ ಪರಿಹಾರಕ್ಕೆ ದಾರಿ ಮಾಡಿಕೊಡಲಿವೆ ಎಂಬ ಆಶಯ ವ್ಯಕ್ತವಾಗಿದೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm