ಬ್ರೇಕಿಂಗ್ ನ್ಯೂಸ್
18-04-26 11:39 pm HK News Desk ದೇಶ - ವಿದೇಶ
ನವದೆಹಲಿ, ಎಪ್ರಿಲ್ 18: ರಾಜಧಾನಿ ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ನಡೆಸಿದ್ದನ್ನು ಪೊಲೀಸರು ವಿಫಲಗೊಳಿಸಿದ್ದಾರೆ. ಸೂಕ್ಷ್ಮ ಸ್ಥಳಗಳನ್ನು ಗುರಿಯಾಗಿಸಿ ದಾಳಿಗೆ ಸ್ಕೆಚ್ ಹಾಕಿದ್ದ ಮಹಾರಾಷ್ಟ್ರ, ಒಡಿಶಾ ಮತ್ತು ಬಿಹಾರದ ನಾಲ್ವರು ಶಂಕಿತ ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಚರಣೆ ವೇಳೆ ಸುಧಾರಿತ ಸ್ಫೋಟಕಗಳು, ಮೊಬೈಲ್, ಮತ್ತಿತರ ವಸ್ತುಗಳನ್ನು ವಶಪಡಿಸಲಾಗಿದೆ.
ಜನದಟ್ಟಣೆಯ ಸ್ಥಳಗಳನ್ನು ಗುರಿಯಾಗಿಸಿ ಐಇಡಿ ಅಳವಡಿಸಿದ್ದ ರಿಮೋಟ್ ನಿಯಂತ್ರಿತ ಟಾಯ್ ಕಾರನ್ನು ಜೋಡಿಸುವ ಪ್ರಕ್ರಿಯೆಯಲ್ಲಿ ಇಬ್ಬರು ಆರೋಪಿಗಳು ತೊಡಗಿಸಿಕೊಂಡಿದ್ದರು. ಈ ಬಗ್ಗೆ ಮಾಹಿತಿ ದೊರೆತ ವಿಶೇಷ ದಳವು ಗುಪ್ತಚರ ನೇತೃತ್ವದ ಕಾರ್ಯಾಚರಣೆಯಲ್ಲಿ ಮಹಾರಾಷ್ಟ್ರದ ಇಬ್ಬರು ಮತ್ತು ಒಡಿಶಾ ಮತ್ತು ಬಿಹಾರದಿಂದ ತಲಾ ಒಬ್ಬ ಆರೋಪಿಗಳನ್ನು ಬಂಧಿಸಿದೆ.
ನಾಲ್ವರು ಆರೋಪಿಗಳು ಇಸ್ಲಾಮಿಕ್ ರಾಷ್ಟ್ರ ಸ್ಥಾಪನೆಯ ಆಲೋಚನೆಯೊಂದಿಗೆ ಉಗ್ರಗಾಮಿ ಸಿದ್ಧಾಂತದಿಂದ ಪ್ರಭಾವಿತರಾಗಿದ್ದರು ಮತ್ತು "ಘಜ್ವಾ-ಎ-ಹಿಂದ್" ತತ್ವಗಳನ್ನು ಪ್ರಚಾರ ಮಾಡುತ್ತಿದ್ದರು. ಇಸ್ಲಾಮಿಕ್ ಖೊರಾಸಾನ್ ಲಷ್ಕರ್' ಪರಿಕಲ್ಪನೆಯಿಂದ ಪ್ರೇರಿತರಾಗಿದ್ದ ಆರೋಪಿಗಳು ತಮ್ಮ ಸಂಪರ್ಕದಲ್ಲಿರುವ ಯಯ
ಯುವಕರನ್ನು ಮತಾಂಧರನ್ನಾಗಿ ಮಾಡಲು ಕಪ್ಪು ಧ್ವಜ ಹಿಡಿದು ಪ್ರಚಾರದಲ್ಲಿ ತೊಡಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ಮುಚ್ಚಿದ ಮತ್ತು ಎನ್ಕ್ರಿಪ್ಟ್ ಮಾಡಿದ ಸಾಮಾಜಿಕ ಮಾಧ್ಯಮ ಗುಂಪುಗಳಲ್ಲಿ ಸಕ್ರಿಯರಾಗಿದ್ದರು. ಅಲ್ಲಿ ಜಿಹಾದ್, ಉಗ್ರಗಾಮಿ ಸಿದ್ಧಾಂತ ಮತ್ತು ಶಸ್ತ್ರಾಸ್ತ್ರಗಳಿಗೆ ಸಂಬಂಧಿಸಿದ ವಿಷಯವನ್ನು ಹಂಚಿಕೊಳ್ಳಲಾಗುತ್ತಿತ್ತು. ಹೊಸ ಸದಸ್ಯರನ್ನು ಗುರುತಿಸಲು, ಮೂಲಭೂತವಾದ ಬೋಧನೆ ಮಾಡಲು ಮತ್ತು ಅವರನ್ನು ಉಗ್ರಗಾಮಿ ಸಂಘಟನೆಗೆ ನೇಮಕ ಮಾಡಲು ಈ ವೇದಿಕೆಗಳನ್ನು ಬಳಸುತ್ತಿದ್ದರು. ಆರೋಪಿಗಳಲ್ಲಿ ಒಬ್ಬ ತನ್ನ ಅನುಯಾಯಿಗಳನ್ನು ಮತಾಂಧರನ್ನಾಗಿ ಮಾಡಲು ಮತ್ತು ತಮ್ಮ ಗುರಿಯ ಸಂಕೇತವಾಗಿ ಕಪ್ಪು ಧ್ವಜದೊಂದಿಗೆ ಕೆಂಪು ಕೋಟೆಯ ಚಿತ್ರವನ್ನು ಹಂಚಿಕೊಂಡಿದ್ದಾನೆ ಆರೋಪಿಸಲಾಗಿದೆ.
ಮತ್ತೊಬ್ಬ ಆರೋಪಿ ಡಿಸೆಂಬರ್ 2025 ರಲ್ಲಿ ದೆಹಲಿಗೆ ಭೇಟಿ ನೀಡಿದ್ದು, ಕೆಂಪು ಕೋಟೆ ಮತ್ತು ಇಂಡಿಯಾ ಗೇಟ್ ಸೇರಿದಂತೆ ಪ್ರಮುಖ ಸ್ಥಳಗಳನ್ನು ಪರಿಶೀಲಿಸಿದ್ದ ಎಂಬುದು ತನಿಖೆಯಲ್ಲಿ ಪತ್ತೆಯಾಗಿದೆ. ಅಯೋಧ್ಯೆಯ ರಾಮ ಮಂದಿರ, ಸಂಸತ್ತು ಮತ್ತು ಕೆಲವು ಮಿಲಿಟರಿ ನೆಲೆಗಳ ಮೇಲೆ ಸಂಭಾವ್ಯ ದಾಳಿಗಳ ಬಗ್ಗೆ ಸಂಚು ನಡೆಸಿದ್ದಾರೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm