ಬ್ರೇಕಿಂಗ್ ನ್ಯೂಸ್
04-01-21 05:03 pm Headline Karnataka News Network ದೇಶ - ವಿದೇಶ
ನವದೆಹಲಿ, ಜ.4:ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾನನ್ನು ಮತ್ತೆ ಐಟಿ ಅಧಿಕಾರಿಗಳು ವಿಚಾರಣೆ ಆರಂಭಿಸಿದ್ದಾರೆ. ರಾಬರ್ಟ್ ವಾದ್ರಾನ ಮನೆಗೆ ಆಗಮಿಸಿರುವ ಐಟಿ ಅಧಿಕಾರಿಗಳು, ಬೇನಾಮಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಹೇಳಿಕೆಯನ್ನು ದಾಖಲು ಮಾಡುತ್ತಿದ್ದಾರೆ. ಇದೇ ವೇಳೆ, ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಾದ್ರಾ ಬೆನ್ನು ಬಿದ್ದಿದ್ದು, ವಿಚಾರಣೆ ಆರಂಭಿಸಿದ್ದಾರೆ.
ರಾಬರ್ಟ್ ವಾದ್ರಾ ಲಂಡನ್ನಲ್ಲಿ 1.9 ಮಿಲಿಯನ್ ಪೌಂಡ್ ಮೌಲ್ಯದ ಭಾರೀ ಬೆಲೆಬಾಳುವ ಆಸ್ತಿಯನ್ನು ಖರೀದಿಸಿದ್ದಾರೆ ಎನ್ನಲಾಗಿದ್ದು, ಹಣದ ಮೂಲದ ಬಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಎರಡು ವರ್ಷಗಳ ಹಿಂದೆಯೇ ಈ ಬಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಆಬಳಿಕ ವಾದ್ರಾ ನಿರೀಕ್ಷಣಾ ಜಾಮೀನು ಪಡೆದು ತಿರುಗಾಡುತ್ತಿದ್ದರು. ಕಳೆದ ವರ್ಷ ಕೊರೊನಾ ಕಾರಣದಿಂದ ವಿಚಾರಣೆಗೆ ಬ್ರೇಕ್ ಬಿದ್ದಿತ್ತು. ಈಗ ಮತ್ತೆ ಅಧಿಕಾರಿಗಳು ವಿಚಾರಣೆ ಆರಂಭಿಸಿದ್ದು, ಪ್ರಶ್ನೆಗಳನ್ನು ಮುಂದಿಟ್ಟು ಉತ್ತರ ಪಡೆಯುತ್ತಿದ್ದಾರೆ.
ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪತಿ ಆಗಿರುವ ಕಾರಣ, ಬಿಜೆಪಿ ರಾಜಕೀಯ ಉದ್ದೇಶದಿಂದ ಟಾರ್ಗೆಟ್ ಮಾಡಿಕೊಂಡು ದಾಳಿ ನಡೆಸುತ್ತಿದೆ ಎಂದು ರಾಬರ್ಟ್ ವಾದ್ರಾ ಪ್ರಕರಣದಲ್ಲಿ ಕಾಂಗ್ರೆಸ್ ವಾಗ್ದಾಳಿ ನಡೆಸಿತ್ತು. 2015ರಲ್ಲಿ ಐಟಿ ಅಧಿಕಾರಿಗಳು ರಾಬರ್ಟ್ ವಾದ್ರಾ ಲಂಡನ್ನಲ್ಲಿ 12 ಮಿಲಿಯನ್ ಪೌಂಡ್ ಮೌಲ್ಯದ ಆಸ್ತಿ ಹೊಂದಿರುವ ಬಗ್ಗೆ ಪ್ರಕರಣ ದಾಖಲಿಸಿದ್ದರು. ಅಕ್ರಮ ಹಣದ ವಹಿವಾಟು ಆಗಿರುವ ಹಿನ್ನೆಲೆಯಲ್ಲಿ 2018ರಲ್ಲಿ ಆ ಪ್ರಕರಣವನ್ನೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆಗೆ ಕೈಗೆತ್ತಿಗೊಂಡಿದ್ದರು.
Income Tax officials investigating alleged tax evasion by businessman Robert Vadra -- the son-in-law of Congress chief Sonia Gandhi -- are recording his statement today. The case is linked to the properties he allegedly purchased in the United Kingdom through arms dealer Sanjay Bhandari.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm