ಬ್ರೇಕಿಂಗ್ ನ್ಯೂಸ್
20-04-26 09:37 pm HK News Staffer ದೇಶ - ವಿದೇಶ
ಟೆಹ್ರಾನ್, ಎಪ್ರಿಲ್ 20: ಇರಾನ್ ಧ್ವಜ ಹೊತ್ತಿದ್ದ ಸರಕು ಹಡಗೊಂದನ್ನು ಅಮೆರಿಕದ ಸೇನೆ ಒಮಾನ್ ಸಮುದ್ರ ತೀರದಲ್ಲಿ ವಶಪಡಿಸಿದ್ದು, ಇದರ ಬೆನ್ನಲ್ಲೇ ಉಭಯ ರಾಷ್ಟ್ರಗಳ ಉದ್ವಿಗ್ನತೆ ಮತ್ತೆ ಉಲ್ಬಂಣಗೊಂಡಿದೆ. ವರದಿಗಳ ಪ್ರಕಾರ, “ಟೌಸ್ಕಾ” ಎಂಬ ಇರಾನ್ ಹಡಗನ್ನು ತನ್ನ ನೌಕಾಪಡೆಯ ಎಚ್ಚರಿಕೆಗಳನ್ನು ನಿರ್ಲಕ್ಷಿಸಿದ್ದಕ್ಕಾಗಿ ವಶಕ್ಕೆ ಪಡೆಯಲಾಗಿದೆ ಎಂದು ಅಮೆರಿಕಾ ಹೇಳಿದೆ.
ಅಮೆರಿಕಾ ನೌಕಾಪಡೆಯ ಡಿಸ್ಟ್ರಾಯರ್ ಹಡಗು, ಇರಾನಿ ಸರಕು ಹಡಗಿನ ಎಂಜಿನ್ ಭಾಗಕ್ಕೆ ಗುಂಡು ಹಾರಿಸಿ ನಿಷ್ಕ್ರಿಯಗೊಳಿಸಿದೆ. ನಂತರ ಅಮೆರಿಕಾ ನೌಕಾ ಪಡೆ ಹಡಗನ್ನು ವಶಕ್ಕೆ ಪಡೆದು ಅದರೊಳಗಿನ ಸರಕುಗಳನ್ನು ಪರಿಶೀಲನೆ ನಡೆಸಿದೆ. ಈ ಕಾರ್ಯಾಚರಣೆಯ ವಿಡಿಯೋವನ್ನು ಅಮೆರಿಕಾ ಸೆಂಟ್ರಲ್ ಕಮಾಂಡ್ ಬಿಡುಗಡೆ ಮಾಡಿದ್ದು, ಹಲವು ಬಾರಿಯ ಎಚ್ಚರಿಕೆಗಳ ನಂತರ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದೆ.
ಇದಕ್ಕೆ ತೀವ್ರ ಪ್ರತಿಕ್ರಿಯೆ ನೀಡಿರುವ ಇರಾನ್ ಸರ್ಕಾರ, ಈ ಕ್ರಮವನ್ನು ನೇರವಾಗಿ “ಸಮುದ್ರ ದರೋಡೆ” ಎಂದು ಕರೆದಿದೆ. ಅಮೆರಿಕದ ಈ ದಾಳಿಗೆ ನಾವು ಶೀಘ್ರದಲ್ಲೇ ತಕ್ಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಘೋಷಿಸಿದೆ. ಇದರಿಂದ ಪ್ರದೇಶದಲ್ಲಿ ಮತ್ತೆ ಸೇನಾ ಸಂಘರ್ಷದ ಭೀತಿ ಹೆಚ್ಚಿದೆ.
ಇರಾನ್ ಅಧ್ಯಕ್ಷ ಮಸೂದ್ ಪೆಜೆಷ್ಕಿಯಾನ್ ಅಮೆರಿಕದ ಕ್ರಮವನ್ನು ಉದ್ದೇಶಪೂರ್ವಕ ಪ್ರಚೋದನೆ ಎಂದು ಟೀಕಿಸಿದ್ದಾರೆ. ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಅವರು ಪಾಕಿಸ್ತಾನದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಅಮೆರಿಕದ ಈ ನಡೆ ರಾಜತಾಂತ್ರಿಕ ಪ್ರಯತ್ನಗಳಿಗೆ ದೊಡ್ಡ ಧಕ್ಕೆ ತರುತ್ತಿದೆ ಎಂದು ತಿಳಿಸಿದ್ದಾರೆ.
ಇತ್ತ ಪಾಕಿಸ್ತಾನದಲ್ಲಿ ನಡೆಯಬೇಕಿದ್ದ ಎರಡನೇ ಹಂತದ ಮಾತುಕತೆಯೂ ಅನಿಶ್ಚಿತವಾಗಿದೆ. ಇದರಿಂದ ಅಮೆರಿಕಾ- ಇರಾನ್ ಸಂಘರ್ಷಕ್ಕೆ ರಾಜತಾಂತ್ರಿಕ ಪರಿಹಾರ ಸಿಗುವ ಸಾಧ್ಯತೆಗಳು ಕುಂಠಿತವಾಗಿದೆ. ಇರಾನ್ ನಾಯಕರು ತಮ್ಮ ನಿಲುವನ್ನು ಕಠಿಣಗೊಳಿಸಿದ್ದು, ಅಮೆರಿಕಾ ತನ್ನ ತೈಲ ನಿರ್ಬಂಧಗಳನ್ನು ಹಿಂತೆಗೆದುಕೊಳ್ಳುವ ವರೆಗೆ ಹಾರ್ಮುಜ್ ಮೂಲಕ ಸಾಗಣೆ ಮೇಲಿನ ನಿರ್ಬಂಧ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ. ಇದರಿಂದ ಜಾಗತಿಕ ತೈಲ ಬೆಲೆ ಏರಿಕೆ ಹಾಗೂ ಆರ್ಥಿಕ ಅಸ್ಥಿರತೆ ಹೆಚ್ಚುವ ಸಾಧ್ಯತೆ ಇದೆ.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
20-04-26 09:35 pm
HK News Staffer
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm