ಬ್ರೇಕಿಂಗ್ ನ್ಯೂಸ್
20-04-26 09:37 pm HK News Staffer ದೇಶ - ವಿದೇಶ
ಟೆಹ್ರಾನ್, ಎಪ್ರಿಲ್ 20: ಇರಾನ್ ಧ್ವಜ ಹೊತ್ತಿದ್ದ ಸರಕು ಹಡಗೊಂದನ್ನು ಅಮೆರಿಕದ ಸೇನೆ ಒಮಾನ್ ಸಮುದ್ರ ತೀರದಲ್ಲಿ ವಶಪಡಿಸಿದ್ದು, ಇದರ ಬೆನ್ನಲ್ಲೇ ಉಭಯ ರಾಷ್ಟ್ರಗಳ ಉದ್ವಿಗ್ನತೆ ಮತ್ತೆ ಉಲ್ಬಂಣಗೊಂಡಿದೆ. ವರದಿಗಳ ಪ್ರಕಾರ, “ಟೌಸ್ಕಾ” ಎಂಬ ಇರಾನ್ ಹಡಗನ್ನು ತನ್ನ ನೌಕಾಪಡೆಯ ಎಚ್ಚರಿಕೆಗಳನ್ನು ನಿರ್ಲಕ್ಷಿಸಿದ್ದಕ್ಕಾಗಿ ವಶಕ್ಕೆ ಪಡೆಯಲಾಗಿದೆ ಎಂದು ಅಮೆರಿಕಾ ಹೇಳಿದೆ.
ಅಮೆರಿಕಾ ನೌಕಾಪಡೆಯ ಡಿಸ್ಟ್ರಾಯರ್ ಹಡಗು, ಇರಾನಿ ಸರಕು ಹಡಗಿನ ಎಂಜಿನ್ ಭಾಗಕ್ಕೆ ಗುಂಡು ಹಾರಿಸಿ ನಿಷ್ಕ್ರಿಯಗೊಳಿಸಿದೆ. ನಂತರ ಅಮೆರಿಕಾ ನೌಕಾ ಪಡೆ ಹಡಗನ್ನು ವಶಕ್ಕೆ ಪಡೆದು ಅದರೊಳಗಿನ ಸರಕುಗಳನ್ನು ಪರಿಶೀಲನೆ ನಡೆಸಿದೆ. ಈ ಕಾರ್ಯಾಚರಣೆಯ ವಿಡಿಯೋವನ್ನು ಅಮೆರಿಕಾ ಸೆಂಟ್ರಲ್ ಕಮಾಂಡ್ ಬಿಡುಗಡೆ ಮಾಡಿದ್ದು, ಹಲವು ಬಾರಿಯ ಎಚ್ಚರಿಕೆಗಳ ನಂತರ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದೆ.
ಇದಕ್ಕೆ ತೀವ್ರ ಪ್ರತಿಕ್ರಿಯೆ ನೀಡಿರುವ ಇರಾನ್ ಸರ್ಕಾರ, ಈ ಕ್ರಮವನ್ನು ನೇರವಾಗಿ “ಸಮುದ್ರ ದರೋಡೆ” ಎಂದು ಕರೆದಿದೆ. ಅಮೆರಿಕದ ಈ ದಾಳಿಗೆ ನಾವು ಶೀಘ್ರದಲ್ಲೇ ತಕ್ಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಘೋಷಿಸಿದೆ. ಇದರಿಂದ ಪ್ರದೇಶದಲ್ಲಿ ಮತ್ತೆ ಸೇನಾ ಸಂಘರ್ಷದ ಭೀತಿ ಹೆಚ್ಚಿದೆ.
ಇರಾನ್ ಅಧ್ಯಕ್ಷ ಮಸೂದ್ ಪೆಜೆಷ್ಕಿಯಾನ್ ಅಮೆರಿಕದ ಕ್ರಮವನ್ನು ಉದ್ದೇಶಪೂರ್ವಕ ಪ್ರಚೋದನೆ ಎಂದು ಟೀಕಿಸಿದ್ದಾರೆ. ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಅವರು ಪಾಕಿಸ್ತಾನದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಅಮೆರಿಕದ ಈ ನಡೆ ರಾಜತಾಂತ್ರಿಕ ಪ್ರಯತ್ನಗಳಿಗೆ ದೊಡ್ಡ ಧಕ್ಕೆ ತರುತ್ತಿದೆ ಎಂದು ತಿಳಿಸಿದ್ದಾರೆ.
ಇತ್ತ ಪಾಕಿಸ್ತಾನದಲ್ಲಿ ನಡೆಯಬೇಕಿದ್ದ ಎರಡನೇ ಹಂತದ ಮಾತುಕತೆಯೂ ಅನಿಶ್ಚಿತವಾಗಿದೆ. ಇದರಿಂದ ಅಮೆರಿಕಾ- ಇರಾನ್ ಸಂಘರ್ಷಕ್ಕೆ ರಾಜತಾಂತ್ರಿಕ ಪರಿಹಾರ ಸಿಗುವ ಸಾಧ್ಯತೆಗಳು ಕುಂಠಿತವಾಗಿದೆ. ಇರಾನ್ ನಾಯಕರು ತಮ್ಮ ನಿಲುವನ್ನು ಕಠಿಣಗೊಳಿಸಿದ್ದು, ಅಮೆರಿಕಾ ತನ್ನ ತೈಲ ನಿರ್ಬಂಧಗಳನ್ನು ಹಿಂತೆಗೆದುಕೊಳ್ಳುವ ವರೆಗೆ ಹಾರ್ಮುಜ್ ಮೂಲಕ ಸಾಗಣೆ ಮೇಲಿನ ನಿರ್ಬಂಧ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ. ಇದರಿಂದ ಜಾಗತಿಕ ತೈಲ ಬೆಲೆ ಏರಿಕೆ ಹಾಗೂ ಆರ್ಥಿಕ ಅಸ್ಥಿರತೆ ಹೆಚ್ಚುವ ಸಾಧ್ಯತೆ ಇದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm