ಬ್ರೇಕಿಂಗ್ ನ್ಯೂಸ್
20-04-26 10:54 pm HK News Staffer ದೇಶ - ವಿದೇಶ
ಲಕ್ನೋ, ಎಪ್ರಿಲ್ 20: ಮಹತ್ವದ ಬೆಳವಣಿಗೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧದ ದ್ವಿಪೌರತ್ವ ಪ್ರಕರಣದ ವಿಚಾರಣೆಯಿಂದ ಅಲಹಾಬಾದ್ ಹೈಕೋರ್ಟಿನ ಲಖ್ನೋ ಪೀಠದ ನ್ಯಾಯಮೂರ್ತಿ ಸುಭಾಷ್ ವಿದ್ಯಾರ್ಥಿ ಅವರು ಸೋಮವಾರ ಹಿಂದೆ ಸರಿದಿದ್ದಾರೆ.
ಇದೇ ವೇಳೆ, ರಾಹುಲ್ ದ್ವಿಪೌರತ್ವ ಹೊಂದಿದ್ದಾರೆ ಎಂದು ಆರೋಪಿಸಿರುವ ಅರ್ಜಿದಾರ, ಬಿಜೆಪಿ ಕಾರ್ಯಕರ್ತ ವಿಘ್ನೇಶ್ ಶಿಶಿರ್ ಅವರ ಕೆಲವು ಸಾಮಾಜಿಕ ಮಾಧ್ಯಮ ಪೋಸ್ಟ್ಗಳು ಮತ್ತು ಮಾಧ್ಯಮ ಸಂದರ್ಶನಗಳಿಗೆ ನ್ಯಾಯಾಲಯವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ವಿವಾದಾತ್ಮಕ ಪೋಸ್ಟ್ಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಮೂರ್ತಿ ವಿದ್ಯಾರ್ಥಿ, ಅರ್ಜಿದಾರ ಶಿಶಿರ್ ತಮ್ಮನ್ನು "ರಾಜಕೀಯ ಲಾಭಕ್ಕಾಗಿ" ಬಳಸಿಕೊಂಡಿದ್ದಾರೆ ಎಂದು ಮೌಖಿಕವಾಗಿ ಹೇಳಿ ಪ್ರಕರಣದ ವಿಚಾರಣೆಗೆ "ವಿಷಾದಿಸುತ್ತೇನೆ" ಎಂದು ಹೇಳಿದ್ದಾರೆ.
ಅರ್ಜಿದಾರರು ಈ ಪೀಠದ ಮುಂದೆ ಪ್ರಕರಣವನ್ನು ಮುಂದುವರಿಸಬೇಕೆ ಬೇಡವೇ ಎಂಬುದರ ಕುರಿತು ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್ಗಳ ಮೂಲಕ ಸಾರ್ವಜನಿಕ ಅಭಿಪ್ರಾಯವನ್ನು ಕೋರುತ್ತಿದ್ದಾರೆ ಮತ್ತು ಈ ವಿಷಯದಲ್ಲಿ ಸಿಜೆಐ ಅವರ ಸಮ್ಮತಿ ಕೋರಿದ್ದಾರೆ ಎಂದು ಗಮನಿಸಿದ ನ್ಯಾಯಮೂರ್ತಿ ಸುಭಾಷ್ ವಿದ್ಯಾರ್ಥಿ, ದುರುದ್ದೇಶದಿಂದ "ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾದ ಸಂದೇಶಗಳು ನ್ಯಾಯಾಲಯದ ವಿರುದ್ಧ ಆರೋಪ ಮಾಡಿದಂತೆ ಎಂದು ಹೇಳಿದ್ದಾರೆ.
ಶಿಶಿರ್ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್ಗಳನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸರ್ಕಾರಿ ವಕೀಲರು ಮತ್ತು ಭಾರತದ ಉಪ ಸಾಲಿಸಿಟರ್ ಜನರಲ್ ಸಹ ಹೇಳಿದ್ದಾರೆ. ನ್ಯಾಯಮೂರ್ತಿ ಸುಭಾಷ್ ವಿದ್ಯಾರ್ಥಿ ಅವರನ್ನು ಒಳಗೊಂಡ ಹೈಕೋರ್ಟ್ ಪೀಠ, ಕಳೆದ ಶನಿವಾರ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಮೊದಲು ನಿರ್ದೇಶಿಸಿತ್ತು. ಆದರೆ ಟೈಪ್ ಮಾಡಿ ಸಹಿ ಮಾಡುವ ಮೊದಲು ಪೀಠ, ತನ್ನ ಆದೇಶವನ್ನು ತಡೆ ಹಿಡಿದಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm