ಬ್ರೇಕಿಂಗ್ ನ್ಯೂಸ್
22-04-26 09:10 pm HK News Staffer ದೇಶ - ವಿದೇಶ
ಟೆಹ್ರಾನ್, ಎಪ್ರಿಲ್ 22: ಭಾರತಕ್ಕೆ ತೈಲ ಹೊತ್ತು ಬರುತ್ತಿದ್ದ ಮತ್ತೆ ಮೂರು ಹಡಗುಗಳನ್ನು ಇರಾನ್ ವಶಕ್ಕೆ ಪಡೆದಿದೆ. ಇರಾನಿನ ಕ್ರಾಂತಿಕಾರಿ ಗಾರ್ಡ್ ಕಾರ್ಪ್ಸ್ (ಐಆರ್ ಜಿಸಿ) ಹಾರ್ಮುಜ್ ಜಲಸಂಧಿ ಮೂಲಕ ಭಾರತಕ್ಕೆ ಬರುತ್ತಿದ್ದ ಹಡಗಿನ ಮೇಲೆ ದಾಳಿ ಮಾಡಿ ವಶಪಡಿಸಿದೆ. ಐಆರ್ ಜಿಸಿ ಅವುಗಳನ್ನು ಇರಾನ್ ಜಲಗಡಿಯೊಳಕ್ಕೆ ಕರೆದೊಯ್ದಿದೆ ಎಂದು ಇರಾನ್ ಟಿವಿ ಮಾಧ್ಯಮಗಳು ವರದಿ ಮಾಡಿವೆ.
ಎರಡು ಹಡಗುಗಳು ಭಾರತದ ಗುಜರಾತಿನ ಮುಂದ್ರಾ ಬಂದರಿಗೆ ಬರುತ್ತಿತ್ತು. ಪನಾಮಾ ಧ್ವಜ ಹೊತ್ತಿದ್ದ ಎಂಎಸ್ ಸಿ ಫ್ರಾನ್ಸೆಸ್ಕಾ ಮತ್ತು ಲೈಬೀರಿಯಾ ಧ್ವಜ ಹೊಂದಿದ್ದ ಎಪಾಮಿನೋಡ್ಸ್ ಎಂಬ ಹೆಸರಿನ ಹಡಗುಗಳನ್ನು ಐಆರ್ ಜಿಸಿ ವಶಕ್ಕೆ ಪಡೆದಿದೆ. ಭಾರತದತ್ತ ಬರುತ್ತಿದ್ದ ಮತ್ತೊಂದು ಗ್ರೀಕ್ ಮೂಲದ ಯುಫೋರಿಯಾ ಹೆಸರಿನ ಹಡಗನ್ನೂ ಇರಾನ್ ವಶಕ್ಕೆ ಪಡೆದಿದೆ.
ಹಡಗಿನ ಮೇಲೆ ಐಆರ್ಜಿಸಿ ಗನ್ಬೋಟ್ ನಿಂದ ದಾಳಿ ನಡೆಸಿತ್ತು. ಗುಂಡು ಹಾರಿಸುವ ಮೊದಲು IRGC ಯಾವುದೇ ಎಚ್ಚರಿಕೆ ನೀಡಲಿಲ್ಲ. ಯುಕೆ ಏಜೆನ್ಸಿಯ ಪ್ರಕಾರ, ಯಾವುದೇ ಸಾವು- ನೋವು ಸಂಭವಿಸಿಲ್ಲ. ಏತನ್ಮಧ್ಯೆ, ಹಡಗು ಇರಾನಿನ ಸಶಸ್ತ್ರ ಪಡೆಗಳ ಎಚ್ಚರಿಕೆಗಳನ್ನು ನಿರ್ಲಕ್ಷಿಸಿದ ನಂತರ ಗುಂಡು ಹಾರಿಸಲಾಗಿದೆ ಎಂದು ಇರಾನಿನ ಸುದ್ದಿ ಸಂಸ್ಥೆ ನೂರ್ ನ್ಯೂಸ್ ಹೇಳಿಕೊಂಡಿದೆ. ಫಾಸ್ಕ್ ನ್ಯೂಸ್ ಏಜೆನ್ಸಿ ಇದನ್ನು ಹಾರ್ಮುಜ್ ಜಲಸಂಧಿಯ ಮೇಲೆ ತನ್ನ ನಿಯಂತ್ರಣವನ್ನು ಕಾನೂನುಬದ್ಧವಾಗಿ ಜಾರಿಗೊಳಿಸಲು ಇರಾನ್ನ ಪ್ರಯತ್ನ ಎಂದು ಬಣ್ಣಿಸಿದೆ.
ಕಳೆದ ವಾರ ಭಾರತದ ಜಗ್ ಆರ್ನವ್ ಮತ್ತು ಸನ್ಮಾರ್ ಹೆರಾಲ್ಡ್ ಎಂಬೆರಡು ಹಡಗುಗಳ ಮೇಲೆ ಇರಾನ್ ದಾಳಿ ಮಾಡಿತ್ತು. ಜಗ್ ಆರ್ನವ್ ಹಡಗು ಸೌದಿ ಅರೇಬಿಯಾದಿಂದ ಮತ್ತು ಸನ್ಮಾರ್ ಹೆರಾಲ್ಡ್ ಹಡಗು ಇರಾಕಿನಿಂದ ತೈಲ ಹೊತ್ತು ಬರುತ್ತಿತ್ತು. ಸ್ನೇಹಿತ ರಾಷ್ಟ್ರಗಳ ಮೇಲೆ ತಡೆ ಹೇರಲ್ಲ ಎಂಬ ಇರಾನ್ ಹೇಳಿಕೆಯ ನಡುವೆಯೂ ಭಾರತದ ಹಡಗುಗಳ ಮೇಲೆ ದಾಳಿ ನಡೆಸಿರುವುದು ಪರಿಸ್ಥಿತಿ ಗಂಭೀರತೆ ಸೃಷ್ಟಿಸಿದೆ.
ಇದೇ ವೇಳೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆರಡು ವಾರಗಳ ಕಾಲ ಕದನ ವಿರಾಮ ಘೋಷಣೆ ಮಾಡಿದೆ. ಆದರೆ ಹೊರ್ಮುಜ್ ಜಲಸಂಧಿಯ ಮೇಲಿನ ಹಿಡಿತವನ್ನು ಸಡಿಲಿಸುವುದಿಲ್ಲ ಎಂದು ಹೇಳಿದೆ. ಟ್ರಂಪ್ ಕದನ ವಿರಾಮ ಘೋಷಣೆ ಬೆನ್ನಲ್ಲೇ ಭಾರತದತ್ತ ತೆರಳುತ್ತಿದ್ದ ಹಡಗುಗಳ ಮೇಲೆ ಇರಾನ್ ದಾಳಿ ನಡೆಸಿ ವಶಕ್ಕೆ ಪಡೆದಿದೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm