ಬ್ರೇಕಿಂಗ್ ನ್ಯೂಸ್
04-01-21 06:10 pm Headline Karnataka News Network ದೇಶ - ವಿದೇಶ
Photo credits : Representative Image
ಭೋಪಾಲ್, ಜ.4: ಮಧ್ಯಪ್ರದೇಶದ ಮೂರ್ನಾಲ್ಕು ಜಿಲ್ಲೆಗಳಲ್ಲಿ ನೂರಾರು ಕಾಗೆಗಳು ದಿಢೀರ್ ಆಗಿ ಸತ್ತು ಬೀಳುತ್ತಿದ್ದು, ಕಳೆದ ಒಂದು ವಾರದಿಂದ ಕಂಡುಬರುತ್ತಿರುವ ಹೊಸ ವಿದ್ಯಮಾನ ಚಿಂತೆಗೆ ಕಾರಣವಾಗಿದೆ.
ಮಂಡ್ಸೌರ್, ಖಾರ್ಗೋನ್, ಇಂದೋರ್ ಮತ್ತು ಭೋಪಾಲ್ ಜಿಲ್ಲೆಯಲ್ಲಿ ಕಾಗೆಗಳ ಸಾವು ಕಂಡುಬಂದಿದೆ. ಇಂದೋರ್ ಜಿಲ್ಲೆಯಲ್ಲಿ 145ಕ್ಕೂ ಹೆಚ್ಚು ಕಾಗೆಗಳು ಸತ್ತಿರುವುದು ಪತ್ತೆಯಾಗಿದೆ. ರಾಜಸ್ಥಾನದ ಗಡಿ ಹಂಚಿಕೊಂಡಿರುವ ಮಂಡ್ಸೌರ್ ಜಿಲ್ಲೆಯಲ್ಲಿ 200ಕ್ಕೂ ಹೆಚ್ಚು ಕಾಗೆಗಳು ಸಾವು ಕಂಡಿದ್ದನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಗೆ ಸತ್ತಿರುವುದು ಹೇಗೆ, ಏನು ಕಾರಣ ಇರಬಹುದು ಎಂಬ ಬಗ್ಗೆ ಸಂಶೋಧನೆಗಳು ನಡೆದಿವೆ.

ಇಂದೋರ್ ಜಿಲ್ಲೆಯಲ್ಲಿ ಸಿಕ್ಕ ಕಾಗೆಗಳನ್ನು ಪರೀಕ್ಷೆಗೊಳಪಡಿಸಿದ್ದು ಎಚ್ 5 ಎನ್ 8 ರೀತಿಯ ಹಕ್ಕಿಜ್ವರದಿಂದ ಕಾಗೆ ಸತ್ತಿರುವ ಬಗ್ಗೆ ತಿಳಿದುಬಂದಿದೆ ಎಂದು ಭೋಪಾಲ್ ಪಶು ವೈದ್ಯಕೀಯ ವಿಭಾಗದ ವೈದ್ಯರು ಶಂಕೆ ವ್ಯಕ್ತಪಡಿಸಿದ್ದಾರೆ.
ನಾವು ಹಲವು ಜಿಲ್ಲೆಗಳಿಂದ ಸತ್ತಿರುವ ಕಾಗೆಗಳನ್ನು ಪರೀಕ್ಷೆಗೆ ಒಳಪಡಿಸಿದ್ದೇವೆ. ಬಾವಿಗಳಲ್ಲಿ ಸತ್ತು ಬಿದ್ದಿರುವುದನ್ನು ಪತ್ತೆ ಮಾಡಲಾಗಿದೆ. ಹೆಚ್ಚಿನ ಕಡೆ ಮರದಡಿಯಲ್ಲಿ ಕಾಗೆಗಳು ಸತ್ತು ಬಿದ್ದಿರುವುದು ಸಿಕ್ಕಿದೆ. ಇದನ್ನು ಪರೀಕ್ಷೆ ನಡೆಸಲಾಗುತ್ತಿದ್ದು ಇನ್ನು ಕೂಡ ಹಕ್ಕಿಜ್ವರವೇ ಕಾರಣ ಎಂಬ ಬಗ್ಗೆ ತೀರ್ಮಾನಕ್ಕೆ ಬಂದಿಲ್ಲ. ಆದ್ರೂ ಇದು ಗಂಭೀರ ವಿಚಾರವಾಗಿದ್ದು ನಾವು ಎಲರ್ಟ್ ಆಗಿದ್ದೇವೆ ಎಂದು ಪಶು ಸಂಗೋಪನಾ ಇಲಾಖೆಯ ಡಾ.ಲಲಿತ್ ಪಾಟಿಧರ್ ಹೇಳಿದ್ದಾರೆ.

ಇದೇ ವೇಳೆ, ಕಾಗೆ ಸತ್ತು ಬಿದ್ದಿರುವ ಪ್ರದೇಶದಲ್ಲಿ ಎಲರ್ಟ್ ಮಾಡಲಾಗಿದ್ದು, ಜನರಲ್ಲಿ ಹಕ್ಕಿಜ್ವರದ ಲಕ್ಷಣ ಇದೆಯೇ ಎಂಬ ಬಗ್ಗೆ ಆರೋಗ್ಯ ಇಲಾಖೆ ಶೋಧ ನಡೆಸುತ್ತಿದೆ.
Panic has gripped several parts of Madhya Pradesh after hundreds of crows have died in three districts in the past one week.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am