ಬ್ರೇಕಿಂಗ್ ನ್ಯೂಸ್
04-01-21 06:10 pm Headline Karnataka News Network ದೇಶ - ವಿದೇಶ
Photo credits : Representative Image
ಭೋಪಾಲ್, ಜ.4: ಮಧ್ಯಪ್ರದೇಶದ ಮೂರ್ನಾಲ್ಕು ಜಿಲ್ಲೆಗಳಲ್ಲಿ ನೂರಾರು ಕಾಗೆಗಳು ದಿಢೀರ್ ಆಗಿ ಸತ್ತು ಬೀಳುತ್ತಿದ್ದು, ಕಳೆದ ಒಂದು ವಾರದಿಂದ ಕಂಡುಬರುತ್ತಿರುವ ಹೊಸ ವಿದ್ಯಮಾನ ಚಿಂತೆಗೆ ಕಾರಣವಾಗಿದೆ.
ಮಂಡ್ಸೌರ್, ಖಾರ್ಗೋನ್, ಇಂದೋರ್ ಮತ್ತು ಭೋಪಾಲ್ ಜಿಲ್ಲೆಯಲ್ಲಿ ಕಾಗೆಗಳ ಸಾವು ಕಂಡುಬಂದಿದೆ. ಇಂದೋರ್ ಜಿಲ್ಲೆಯಲ್ಲಿ 145ಕ್ಕೂ ಹೆಚ್ಚು ಕಾಗೆಗಳು ಸತ್ತಿರುವುದು ಪತ್ತೆಯಾಗಿದೆ. ರಾಜಸ್ಥಾನದ ಗಡಿ ಹಂಚಿಕೊಂಡಿರುವ ಮಂಡ್ಸೌರ್ ಜಿಲ್ಲೆಯಲ್ಲಿ 200ಕ್ಕೂ ಹೆಚ್ಚು ಕಾಗೆಗಳು ಸಾವು ಕಂಡಿದ್ದನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಗೆ ಸತ್ತಿರುವುದು ಹೇಗೆ, ಏನು ಕಾರಣ ಇರಬಹುದು ಎಂಬ ಬಗ್ಗೆ ಸಂಶೋಧನೆಗಳು ನಡೆದಿವೆ.

ಇಂದೋರ್ ಜಿಲ್ಲೆಯಲ್ಲಿ ಸಿಕ್ಕ ಕಾಗೆಗಳನ್ನು ಪರೀಕ್ಷೆಗೊಳಪಡಿಸಿದ್ದು ಎಚ್ 5 ಎನ್ 8 ರೀತಿಯ ಹಕ್ಕಿಜ್ವರದಿಂದ ಕಾಗೆ ಸತ್ತಿರುವ ಬಗ್ಗೆ ತಿಳಿದುಬಂದಿದೆ ಎಂದು ಭೋಪಾಲ್ ಪಶು ವೈದ್ಯಕೀಯ ವಿಭಾಗದ ವೈದ್ಯರು ಶಂಕೆ ವ್ಯಕ್ತಪಡಿಸಿದ್ದಾರೆ.
ನಾವು ಹಲವು ಜಿಲ್ಲೆಗಳಿಂದ ಸತ್ತಿರುವ ಕಾಗೆಗಳನ್ನು ಪರೀಕ್ಷೆಗೆ ಒಳಪಡಿಸಿದ್ದೇವೆ. ಬಾವಿಗಳಲ್ಲಿ ಸತ್ತು ಬಿದ್ದಿರುವುದನ್ನು ಪತ್ತೆ ಮಾಡಲಾಗಿದೆ. ಹೆಚ್ಚಿನ ಕಡೆ ಮರದಡಿಯಲ್ಲಿ ಕಾಗೆಗಳು ಸತ್ತು ಬಿದ್ದಿರುವುದು ಸಿಕ್ಕಿದೆ. ಇದನ್ನು ಪರೀಕ್ಷೆ ನಡೆಸಲಾಗುತ್ತಿದ್ದು ಇನ್ನು ಕೂಡ ಹಕ್ಕಿಜ್ವರವೇ ಕಾರಣ ಎಂಬ ಬಗ್ಗೆ ತೀರ್ಮಾನಕ್ಕೆ ಬಂದಿಲ್ಲ. ಆದ್ರೂ ಇದು ಗಂಭೀರ ವಿಚಾರವಾಗಿದ್ದು ನಾವು ಎಲರ್ಟ್ ಆಗಿದ್ದೇವೆ ಎಂದು ಪಶು ಸಂಗೋಪನಾ ಇಲಾಖೆಯ ಡಾ.ಲಲಿತ್ ಪಾಟಿಧರ್ ಹೇಳಿದ್ದಾರೆ.

ಇದೇ ವೇಳೆ, ಕಾಗೆ ಸತ್ತು ಬಿದ್ದಿರುವ ಪ್ರದೇಶದಲ್ಲಿ ಎಲರ್ಟ್ ಮಾಡಲಾಗಿದ್ದು, ಜನರಲ್ಲಿ ಹಕ್ಕಿಜ್ವರದ ಲಕ್ಷಣ ಇದೆಯೇ ಎಂಬ ಬಗ್ಗೆ ಆರೋಗ್ಯ ಇಲಾಖೆ ಶೋಧ ನಡೆಸುತ್ತಿದೆ.
Panic has gripped several parts of Madhya Pradesh after hundreds of crows have died in three districts in the past one week.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm