ಬ್ರೇಕಿಂಗ್ ನ್ಯೂಸ್
03-05-26 02:35 pm HK News Staffer ದೇಶ - ವಿದೇಶ
ಬೆಂಗಳೂರು, ಮೇ 3: ಯುದ್ಧವು ನಮ್ಮ ಆಯ್ಕೆಯಲ್ಲ, ಇರಾನ್ ಮೇಲೆ ಬಲವಂತವಾಗಿ ಹೇರಲ್ಪಟ್ಟದ್ದು ಎಂದು ಇರಾನ್ ಸರ್ವೋಚ್ಛ ನಾಯಕನ ಪ್ರತಿನಿಧಿ ಡಾ. ಅಬ್ದುಲ್ ಮಜೀದ್ ಹಕೀಮ್ ಇಲಾಹಿ ಹೇಳಿದ್ದಾರೆ.
ಬೆಂಗಳೂರು ಭೇಟಿ ವೇಳೆ ಮಾತನಾಡಿದ ಇಲಾಹಿ ಅವರು, ಇರಾನ್ ಎಂದಿಗೂ ಯುದ್ಧ ಬಯಸಲಿಲ್ಲ. ಆದರೆ, ನಮ್ಮ ಮೇಲೆ ಹೇರಲಾಯಿತು. ನಾವು ಈಗಲೂ ಯುದ್ಧ ಬಯಸುವುದಿಲ್ಲ, ಆದರೆ ಶತ್ರುಗಳು ಮುಂದುವರಿಸಿದರೆ 10 ವರ್ಷಗಳ ವರೆಗೂ ಹೋರಾಡಲು ನಾವು ಸಿದ್ಧ ಎಂದು ಹೇಳಿದ್ದಾರೆ.
ಅಮೆರಿಕ ಮತ್ತು ಇಸ್ರೇಲ್ ಈ ಯುದ್ಧವನ್ನು ಮೂರು ದಿನಗಳಲ್ಲಿ ಮುಗಿಸಬಹುದು ಎಂದುಕೊಂಡಿದ್ದವು, ಇರಾನ್ ಕುಸಿದು ಹೋಗುತ್ತದೆ ಮತ್ತು ಅದನ್ನು ವಿಭಜಿಸಬಹುದು ಎಂದು ಭಾವಿಸಿದ್ದವು. ಆದರೆ ಅದು ಸಾಧ್ಯವಾಗಲಿಲ್ಲ, ಮುಂದೆ ಕೂಡ ಆಗುವುದಿಲ್ಲ ಎಂದು ತಿಳಿಸಿದರು.
ಇರಾನ್ ತನ್ನ ಭೂಭಾಗದ ಒಂದು ಇಂಚು ಭೂಮಿಯನ್ನೂ ಕೂಡ ಬಿಟ್ಟುಕೊಡುವುದಿಲ್ಲ, ಬೇಕಾದರೆ ಜನರು ತಮ್ಮ ರಕ್ತವನ್ನೇ ಹರಿಸಲು ಸಿದ್ಧರಾಗಿದ್ದಾರೆ. “ಅಮೆರಿಕ ನಮ್ಮ ಎಲ್ಲಾ ಪರಮಾಣು ಕೇಂದ್ರಗಳನ್ನು ನಾಶ ಮಾಡಿದೆ ಎಂದು ಹೇಳುತ್ತದೆ. ಆದರೆ ಅದೇ ಸಮಯದಲ್ಲಿ ನಾವು ಪರಮಾಣು ಶಸ್ತ್ರಾಸ್ತ್ರ ಹೊಂದಿದ್ದೇವೆ ಎಂದು ಆರೋಪಿಸುತ್ತದೆ. ನಾವು ಎನ್ಪಿಟಿ ಒಪ್ಪಂದದ ಸಹಿ ರಾಷ್ಟ್ರವಾಗಿದ್ದು, ಶಾಂತಿಯುತ ಪರಮಾಣು ತಂತ್ರಜ್ಞಾನ ಅಭಿವೃದ್ಧಿಗೆ ಹಕ್ಕು ಹೊಂದಿದ್ದೇವೆ” ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ ಫೆಬ್ರವರಿ 28ರಂದು ಅಮೆರಿಕ ಮತ್ತು ಇಸ್ರೇಲ್ ಆರಂಭಿಸಿದ ಈ ಯುದ್ಧವು ಕೆಲವು ಆಂತರಿಕ ರಾಜಕೀಯ ಸಮಸ್ಯೆಗಳನ್ನು ಮುಚ್ಚಿಹಾಕಲು ನಡೆಸಿದ ಪ್ರಯತ್ನವಾಗಿದ್ದು, ಜಾಗತಿಕ ಗಮನವನ್ನು ಬೇರೆ ವಿಷಯಗಳಿಂದ ತಿರುಗಿಸಲು ಈ ದಾಳಿ ನಡೆದಿದೆ ಎಂದು ಇಲಾಹಿ ಆರೋಪಿಸಿದರು. ಯುದ್ಧದಲ್ಲಿ ಇರಾನ್ ತನ್ನ ಉನ್ನತ ನಾಯಕರು ಸೇರಿದಂತೆ ಹಲವರನ್ನು ಕಳೆದುಕೊಂಡಿದೆ. ನೂರಾರು ನಾಗರಿಕರು, ಶಾಲಾ ಮಕ್ಕಳು ಮೃತಪಟ್ಟಿದ್ದಾರೆ. ಇರಾನ್ ಜನರು ‘ಶಹಾದತ್’ (ತ್ಯಾಗ) ಎಂಬ ತತ್ವವನ್ನು ನಂಬುತ್ತಾರೆ. ಅದಕ್ಕಾಗಿ ಹೋರಾಡಲು ಸಿದ್ಧರಾಗಿದ್ದಾರೆ ಎಂದು ಹೇಳಿದರು.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm