ಬ್ರೇಕಿಂಗ್ ನ್ಯೂಸ್
03-05-26 02:35 pm HK News Staffer ದೇಶ - ವಿದೇಶ
ಬೆಂಗಳೂರು, ಮೇ 3: ಯುದ್ಧವು ನಮ್ಮ ಆಯ್ಕೆಯಲ್ಲ, ಇರಾನ್ ಮೇಲೆ ಬಲವಂತವಾಗಿ ಹೇರಲ್ಪಟ್ಟದ್ದು ಎಂದು ಇರಾನ್ ಸರ್ವೋಚ್ಛ ನಾಯಕನ ಪ್ರತಿನಿಧಿ ಡಾ. ಅಬ್ದುಲ್ ಮಜೀದ್ ಹಕೀಮ್ ಇಲಾಹಿ ಹೇಳಿದ್ದಾರೆ.
ಬೆಂಗಳೂರು ಭೇಟಿ ವೇಳೆ ಮಾತನಾಡಿದ ಇಲಾಹಿ ಅವರು, ಇರಾನ್ ಎಂದಿಗೂ ಯುದ್ಧ ಬಯಸಲಿಲ್ಲ. ಆದರೆ, ನಮ್ಮ ಮೇಲೆ ಹೇರಲಾಯಿತು. ನಾವು ಈಗಲೂ ಯುದ್ಧ ಬಯಸುವುದಿಲ್ಲ, ಆದರೆ ಶತ್ರುಗಳು ಮುಂದುವರಿಸಿದರೆ 10 ವರ್ಷಗಳ ವರೆಗೂ ಹೋರಾಡಲು ನಾವು ಸಿದ್ಧ ಎಂದು ಹೇಳಿದ್ದಾರೆ.
ಅಮೆರಿಕ ಮತ್ತು ಇಸ್ರೇಲ್ ಈ ಯುದ್ಧವನ್ನು ಮೂರು ದಿನಗಳಲ್ಲಿ ಮುಗಿಸಬಹುದು ಎಂದುಕೊಂಡಿದ್ದವು, ಇರಾನ್ ಕುಸಿದು ಹೋಗುತ್ತದೆ ಮತ್ತು ಅದನ್ನು ವಿಭಜಿಸಬಹುದು ಎಂದು ಭಾವಿಸಿದ್ದವು. ಆದರೆ ಅದು ಸಾಧ್ಯವಾಗಲಿಲ್ಲ, ಮುಂದೆ ಕೂಡ ಆಗುವುದಿಲ್ಲ ಎಂದು ತಿಳಿಸಿದರು.
ಇರಾನ್ ತನ್ನ ಭೂಭಾಗದ ಒಂದು ಇಂಚು ಭೂಮಿಯನ್ನೂ ಕೂಡ ಬಿಟ್ಟುಕೊಡುವುದಿಲ್ಲ, ಬೇಕಾದರೆ ಜನರು ತಮ್ಮ ರಕ್ತವನ್ನೇ ಹರಿಸಲು ಸಿದ್ಧರಾಗಿದ್ದಾರೆ. “ಅಮೆರಿಕ ನಮ್ಮ ಎಲ್ಲಾ ಪರಮಾಣು ಕೇಂದ್ರಗಳನ್ನು ನಾಶ ಮಾಡಿದೆ ಎಂದು ಹೇಳುತ್ತದೆ. ಆದರೆ ಅದೇ ಸಮಯದಲ್ಲಿ ನಾವು ಪರಮಾಣು ಶಸ್ತ್ರಾಸ್ತ್ರ ಹೊಂದಿದ್ದೇವೆ ಎಂದು ಆರೋಪಿಸುತ್ತದೆ. ನಾವು ಎನ್ಪಿಟಿ ಒಪ್ಪಂದದ ಸಹಿ ರಾಷ್ಟ್ರವಾಗಿದ್ದು, ಶಾಂತಿಯುತ ಪರಮಾಣು ತಂತ್ರಜ್ಞಾನ ಅಭಿವೃದ್ಧಿಗೆ ಹಕ್ಕು ಹೊಂದಿದ್ದೇವೆ” ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ ಫೆಬ್ರವರಿ 28ರಂದು ಅಮೆರಿಕ ಮತ್ತು ಇಸ್ರೇಲ್ ಆರಂಭಿಸಿದ ಈ ಯುದ್ಧವು ಕೆಲವು ಆಂತರಿಕ ರಾಜಕೀಯ ಸಮಸ್ಯೆಗಳನ್ನು ಮುಚ್ಚಿಹಾಕಲು ನಡೆಸಿದ ಪ್ರಯತ್ನವಾಗಿದ್ದು, ಜಾಗತಿಕ ಗಮನವನ್ನು ಬೇರೆ ವಿಷಯಗಳಿಂದ ತಿರುಗಿಸಲು ಈ ದಾಳಿ ನಡೆದಿದೆ ಎಂದು ಇಲಾಹಿ ಆರೋಪಿಸಿದರು. ಯುದ್ಧದಲ್ಲಿ ಇರಾನ್ ತನ್ನ ಉನ್ನತ ನಾಯಕರು ಸೇರಿದಂತೆ ಹಲವರನ್ನು ಕಳೆದುಕೊಂಡಿದೆ. ನೂರಾರು ನಾಗರಿಕರು, ಶಾಲಾ ಮಕ್ಕಳು ಮೃತಪಟ್ಟಿದ್ದಾರೆ. ಇರಾನ್ ಜನರು ‘ಶಹಾದತ್’ (ತ್ಯಾಗ) ಎಂಬ ತತ್ವವನ್ನು ನಂಬುತ್ತಾರೆ. ಅದಕ್ಕಾಗಿ ಹೋರಾಡಲು ಸಿದ್ಧರಾಗಿದ್ದಾರೆ ಎಂದು ಹೇಳಿದರು.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm