ಬ್ರೇಕಿಂಗ್ ನ್ಯೂಸ್
03-05-26 02:35 pm HK News Staffer ದೇಶ - ವಿದೇಶ
ಬೆಂಗಳೂರು, ಮೇ 3: ಯುದ್ಧವು ನಮ್ಮ ಆಯ್ಕೆಯಲ್ಲ, ಇರಾನ್ ಮೇಲೆ ಬಲವಂತವಾಗಿ ಹೇರಲ್ಪಟ್ಟದ್ದು ಎಂದು ಇರಾನ್ ಸರ್ವೋಚ್ಛ ನಾಯಕನ ಪ್ರತಿನಿಧಿ ಡಾ. ಅಬ್ದುಲ್ ಮಜೀದ್ ಹಕೀಮ್ ಇಲಾಹಿ ಹೇಳಿದ್ದಾರೆ.
ಬೆಂಗಳೂರು ಭೇಟಿ ವೇಳೆ ಮಾತನಾಡಿದ ಇಲಾಹಿ ಅವರು, ಇರಾನ್ ಎಂದಿಗೂ ಯುದ್ಧ ಬಯಸಲಿಲ್ಲ. ಆದರೆ, ನಮ್ಮ ಮೇಲೆ ಹೇರಲಾಯಿತು. ನಾವು ಈಗಲೂ ಯುದ್ಧ ಬಯಸುವುದಿಲ್ಲ, ಆದರೆ ಶತ್ರುಗಳು ಮುಂದುವರಿಸಿದರೆ 10 ವರ್ಷಗಳ ವರೆಗೂ ಹೋರಾಡಲು ನಾವು ಸಿದ್ಧ ಎಂದು ಹೇಳಿದ್ದಾರೆ.
ಅಮೆರಿಕ ಮತ್ತು ಇಸ್ರೇಲ್ ಈ ಯುದ್ಧವನ್ನು ಮೂರು ದಿನಗಳಲ್ಲಿ ಮುಗಿಸಬಹುದು ಎಂದುಕೊಂಡಿದ್ದವು, ಇರಾನ್ ಕುಸಿದು ಹೋಗುತ್ತದೆ ಮತ್ತು ಅದನ್ನು ವಿಭಜಿಸಬಹುದು ಎಂದು ಭಾವಿಸಿದ್ದವು. ಆದರೆ ಅದು ಸಾಧ್ಯವಾಗಲಿಲ್ಲ, ಮುಂದೆ ಕೂಡ ಆಗುವುದಿಲ್ಲ ಎಂದು ತಿಳಿಸಿದರು.
ಇರಾನ್ ತನ್ನ ಭೂಭಾಗದ ಒಂದು ಇಂಚು ಭೂಮಿಯನ್ನೂ ಕೂಡ ಬಿಟ್ಟುಕೊಡುವುದಿಲ್ಲ, ಬೇಕಾದರೆ ಜನರು ತಮ್ಮ ರಕ್ತವನ್ನೇ ಹರಿಸಲು ಸಿದ್ಧರಾಗಿದ್ದಾರೆ. “ಅಮೆರಿಕ ನಮ್ಮ ಎಲ್ಲಾ ಪರಮಾಣು ಕೇಂದ್ರಗಳನ್ನು ನಾಶ ಮಾಡಿದೆ ಎಂದು ಹೇಳುತ್ತದೆ. ಆದರೆ ಅದೇ ಸಮಯದಲ್ಲಿ ನಾವು ಪರಮಾಣು ಶಸ್ತ್ರಾಸ್ತ್ರ ಹೊಂದಿದ್ದೇವೆ ಎಂದು ಆರೋಪಿಸುತ್ತದೆ. ನಾವು ಎನ್ಪಿಟಿ ಒಪ್ಪಂದದ ಸಹಿ ರಾಷ್ಟ್ರವಾಗಿದ್ದು, ಶಾಂತಿಯುತ ಪರಮಾಣು ತಂತ್ರಜ್ಞಾನ ಅಭಿವೃದ್ಧಿಗೆ ಹಕ್ಕು ಹೊಂದಿದ್ದೇವೆ” ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ ಫೆಬ್ರವರಿ 28ರಂದು ಅಮೆರಿಕ ಮತ್ತು ಇಸ್ರೇಲ್ ಆರಂಭಿಸಿದ ಈ ಯುದ್ಧವು ಕೆಲವು ಆಂತರಿಕ ರಾಜಕೀಯ ಸಮಸ್ಯೆಗಳನ್ನು ಮುಚ್ಚಿಹಾಕಲು ನಡೆಸಿದ ಪ್ರಯತ್ನವಾಗಿದ್ದು, ಜಾಗತಿಕ ಗಮನವನ್ನು ಬೇರೆ ವಿಷಯಗಳಿಂದ ತಿರುಗಿಸಲು ಈ ದಾಳಿ ನಡೆದಿದೆ ಎಂದು ಇಲಾಹಿ ಆರೋಪಿಸಿದರು. ಯುದ್ಧದಲ್ಲಿ ಇರಾನ್ ತನ್ನ ಉನ್ನತ ನಾಯಕರು ಸೇರಿದಂತೆ ಹಲವರನ್ನು ಕಳೆದುಕೊಂಡಿದೆ. ನೂರಾರು ನಾಗರಿಕರು, ಶಾಲಾ ಮಕ್ಕಳು ಮೃತಪಟ್ಟಿದ್ದಾರೆ. ಇರಾನ್ ಜನರು ‘ಶಹಾದತ್’ (ತ್ಯಾಗ) ಎಂಬ ತತ್ವವನ್ನು ನಂಬುತ್ತಾರೆ. ಅದಕ್ಕಾಗಿ ಹೋರಾಡಲು ಸಿದ್ಧರಾಗಿದ್ದಾರೆ ಎಂದು ಹೇಳಿದರು.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm