ಬ್ರೇಕಿಂಗ್ ನ್ಯೂಸ್
04-05-26 09:51 pm HK News Staffer ದೇಶ - ವಿದೇಶ
ಚೆನ್ನೈ, ಮೇ 4: ತಮಿಳುನಾಡಿನಲ್ಲಿ ನಟ ವಿಜಯ್ ಅವರ ಟಿವಿಕೆ ಬಿರುಗಾಳಿಗೆ ಹಾಲಿ ಸಿಎಂ ಎಂ.ಕೆ ಸ್ಟಾಲಿನ್ ಸೇರಿದಂತೆ ಘಟಾನುಘಟಿಗಳು ತರಗೆಲೆಯಂತೆ ತತ್ತರಿಸಿ ಬಿದ್ದಿದ್ದಾರೆ. ಒಂದು ಕಾಲದ ಡಿಎಂಕೆ ನಾಯಕನ ಎದುರಲ್ಲೇ ಸ್ಟಾಲಿನ್ ಸೋಲು ಕಂಡಿದ್ದು ವಿಶೇಷ.
ಟಿವಿಕೆ ಅಭ್ಯರ್ಥಿ, ಒಂದು ಕಾಲದ ಆಪ್ತನಾಗಿದ್ದ ವಿ.ಎಸ್ ಬಾಬು ಎದುರಲ್ಲಿ ಸಿಎಂ ಸ್ಟಾಲಿನ್ 9121 ಮತಗಳಿಂದ ಸೋತು ತೀವ್ರ ಮುಖಭಂಗ ಅನುಭವಿಸಿದ್ದಾರೆ. ಕೊಳತ್ತೂರು ಕ್ಷೇತ್ರವನ್ನು ಸ್ಟಾಲಿನ್ 2011ರಿಂದ ಮೂರು ಬಾರಿ ಪ್ರತಿನಿಧಿಸಿದ್ದರು. ಬಾಬು ಅವರು ಹಿಂದೆ ಡಿಎಂಕೆ ಪಕ್ಷದಲ್ಲಿ ಸಕ್ರಿಯನಾಗಿದ್ದು ಸ್ಟಾಲಿನ್ ಆಪ್ತನೂ ಆಗಿದ್ದ. ಉತ್ತರ ಚೆನ್ನೈ ವಿಭಾಗದಲ್ಲಿ ಡಿಎಂಕೆ ಜಿಲ್ಲಾ ಕಾರ್ಯದರ್ಶಿ ಆಗಿದ್ದರು. ಆನಂತರ, ಪಕ್ಷದಲ್ಲಿ ಮುನಿಸಿಕೊಂಡು ಎಐಎಡಿಎಂಕೆಯಲ್ಲಿ ಗುರುತಿಸಿಕೊಂಡಿದ್ದರು. 2026ರ ಚುನಾವಣೆಗೂ ಮೊದಲು ಬಾಬು ವಿಜಯ್ ಪಕ್ಷ ಸೇರಿದ್ದರು.
ಅಂದಹಾಗೆ, ಸ್ಟಾಲಿನ್ ಅಧಿಕಾರದಲ್ಲಿದ್ದಾಗಲೇ ಸೋತ ನಾಲ್ಕನೇ ಸಿಎಂ ಆಗಿದ್ದಾರೆ. ಈ ಹಿಂದೆ, ಪಿಎಸ್ ಕುಮಾರಸಾಮಿ, ಭಕ್ತವತ್ಸಲಂ ಮತ್ತು ಜಯಲಲಿತಾ ಅವರು ಕೂಡ ಸಿಎಂ ಆಗಿದ್ದಾಗಲೇ ಸೋಲನುಭವಿಸಿದ್ದರು. ವಿಶೇಷ ಅಂದರೆ 2011 ರ ಚುನಾವಣೆಯಲ್ಲಿ ಬಾಬು ಅವರೇ ಕೊಳತ್ತೂರು ಕ್ಷೇತ್ರದಲ್ಲಿ ಸ್ಟಾಲಿನ್ ಗೆಲ್ಲಿಸಲು ಕೆಲಸ ಮಾಡಿದ್ದರು. ಆನಂತರ, ತನ್ನ ಬದಲು ಪಿಕೆ ಸೇಕರ್ ಬಾಬು ಡಿಎಂಕೆಯಲ್ಲಿ ಪ್ರಾಬಲ್ಯಗೊಂಡಿದ್ದರಿಂದ ಬಾಬು ನೇಪಥ್ಯಕ್ಕೆ ಸರಿದಿದ್ದರು. ಈಗ ವಿಜಯ್ ಬ್ರಾಂಡಿನ ಲಾಭ ಪಡೆದು ಸಿಎಂ ಆಗಿದ್ದ ಸ್ಟಾಲಿನ್ ಅವರನ್ನೇ ಸೋಲಿಸಿ ದೇಶದ ಗಮನ ಸೆಳೆದಿದ್ದಾರೆ.
ಎರಡು ಕಡೆ ವಿಜಯ್ ಗೆಲುವು
ಪೆರುಂಬದೂರ್ ಹಿಂದಿನಿಂದಲೂ ಡಿಎಂಕೆ ಪ್ರಾಬಲ್ಯದ ಕ್ಷೇತ್ರ. ಆದರೆ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ವಿಜಯ್ ಎರಡೂ ಕಡೆ ಭಾರೀ ಅಂತರದ ಗೆಲುವು ಸಾಧಿಸಿದ್ದಾರೆ. ಪೆರುಂಬದೂರಿನಲ್ಲಿ ಡಿಎಂಕೆಯ ಆರ್ ಡಿ ಸೇಕರ್ ವಿರುದ್ಧ 50 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆದ್ದರೆ, ತಿರುಚಿರಾಪಳ್ಳಿ ಪೂರ್ವ ಕ್ಷೇತ್ರದಲ್ಲಿ ಡಿಎಂಕೆಯ ಇರುದಯರಾಜ್ ವಿರುದ್ಧ 23 ಸಾವಿರ ಮತಗಳಿಂದ ಗೆಲುವು ಸಾಧಿಸಿದ್ದಾರೆ.
ವಿಜಯ್ ಕಾರು ಚಾಲಕನ ಪುತ್ರ ಶಾಸಕ
ಇದರ ಮಧ್ಯೆ ಹೆಚ್ಚು ಗಮನ ಸೆಳೆದಿದ್ದು ಚೆನ್ನೈ ಪಕ್ಕದ ವಿರುಗಾಂಬಕ್ಕಂ ಕ್ಷೇತ್ರ. ಅಲ್ಲಿ ಟಿವಿಕೆ ಪಕ್ಷದಿಂದ ಗೆದ್ದಿದ್ದು ವಿಜಯ್ ಅವರ ಕಾರು ಚಾಲಕನ ಪುತ್ರ 30 ವರ್ಷದ ಆರ್.ಸಬರಿನಾಥನ್. 2016 ರಲ್ಲಿ ಎಐಡಿಎಂಕೆಯ ವಿರುಗ ರವಿ ಮತ್ತು 2021ರಲ್ಲಿ ಪ್ರಭಾಕರ ರಾಜಾ ಈ ಕ್ಷೇತ್ರವನ್ನು 22 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದರು.


49 ವರ್ಷಗಳ ಬಳಿಕ ಸಿನಿಮಾ ತಾರೆಯ ಮ್ಯಾಜಿಕ್
ತಮಿಳರ ನಾಡಿನಲ್ಲಿ ಸಿನಿಮಾ ನಟರಿಗೆ ಜನರು ಮತಧಾರೆ ನೀಡುವುದು ಹೊಸತಲ್ಲ. ಆದರೆ ವಿಜಯ್ ತಾನು ಸ್ಪರ್ಧಿಸಿದ ಮೊದಲ ಚುನಾವಣೆಯಲ್ಲೇ ಮ್ಯಾಜಿಕ್ ಮಾಡಿದ್ದಾರೆ. 49 ವರ್ಷಗಳ ಹಿಂದೆ ಅಂದರೆ 1977ರಲ್ಲಿ ಎಂಜಿಆರ್ ಕೂಡ ಇದೇ ರೀತಿ ಚಿತ್ರರಂಗದಿಂದ ನೇರವಾಗಿ ಚುನಾವಣಾ ಕಣಕ್ಕೆ ಧುಮುಕಿ ಯಶಸ್ಸು ಸಾಧಿಸಿದ್ದರು. ಹತ್ತು ವರ್ಷಗಳ ಕಾಲ ಆಡಳಿತ ನಡೆಸಿ 1987ರಲ್ಲಿ ಅಧಿಕಾರದಲ್ಲಿದ್ದಾಗಲೇ ಎಂಜಿಆರ್ ನಿಧನರಾಗಿದ್ದರು. ಎಂಜಿಆರ್ ಹಾದಿಯಲ್ಲೇ ವಿಜಯ್ ಯಶಸ್ಸು ಗಳಿಸಿರುವುದು ಎಲ್ಲರ ಹುಬ್ಬೇರುವಂತೆ ಮಾಡಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm