ಬ್ರೇಕಿಂಗ್ ನ್ಯೂಸ್
06-05-26 11:02 pm HK News Desk ದೇಶ - ವಿದೇಶ
ಚೆನ್ನೈ, ಮೇ 6 ತಮಿಳುನಾಡಿನಲ್ಲಿ ಹೊಸ ಸರ್ಕಾರ ರಚನೆಗಾಗಿ ಕಾಂಗ್ರೆಸ್, ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ)ಗೆ ತನ್ನ ಸಂಪೂರ್ಣ ಬೆಂಬಲವನ್ನು ಅಧಿಕೃತವಾಗಿ ಘೋಷಿಸಿದೆ. ಇದೇ ವೇಳೆ, ವಿಜಯ್ ಅವರು ಸರ್ಕಾರ ರಚನೆಗೆ ರಾಜ್ಯಪಾಲರಲ್ಲಿ ಹಕ್ಕು ಮಂಡಿಸಿದ್ದು ಶೀಘ್ರ ಸರ್ಕಾರ ರಚನೆ ಮಾಡಲು ಮುಂದಾಗಿದ್ದಾರೆ.
ಇದೇ ವೇಳೆ, ತಮಿಳುನಾಡು ಕಾಂಗ್ರೆಸ್ ಹೇಳಿಕೆ ಬಿಡುಗಡೆ ಮಾಡಿದ್ದು ರಾಜ್ಯದ ಜನತೆ ವಿಜಯ್ ನೇತೃತ್ವದ ಟಿವಿಕೆಗೆ ಸ್ಪಷ್ಟ, ಬಲವಾದ ಮತ್ತು ಭಾರೀ ತೀರ್ಪು ನೀಡಿದ್ದಾರೆ. ತಮಿಳುನಾಡು ಕಾಂಗ್ರೆಸ್ ಸಮಿತಿ ಟಿವಿಕೆ ಸರ್ಕಾರ ರಚನೆಗೆ ಸಂಪೂರ್ಣ ಬೆಂಬಲ ನೀಡಲು ತೀರ್ಮಾನಿಸಿದೆ ಎಂದು ಪತ್ರದಲ್ಲಿ ಹೇಳಿದೆ. ಅಲ್ಲದೆ, ಭಾರತ ಸಂವಿಧಾನವನ್ನು ನಂಬದ ಯಾವುದೇ ಶಕ್ತಿಗಳನ್ನು ಈ ಮೈತ್ರಿಯಿಂದ ದೂರವಿಡುವ ವರೆಗೆ ನಮ್ಮ ಬೆಂಬಲ ಮುಂದುವರಿಯುತ್ತದೆ ಎಂದು ಪಕ್ಷ ಸ್ಪಷ್ಟಪಡಿಸಿದೆ.
ಟಿವಿಕೆ ಮತ್ತು ತಮಿಳುನಾಡು ಕಾಂಗ್ರೆಸ್ ನಡುವಿನ ಈ ಮೈತ್ರಿ, ಪೆರುಂತಲೈವರ್ ಕಾಮರಾಜ್ ಅವರ ತಮಿಳುನಾಡಿನ ಸುವರ್ಣಯುಗವನ್ನು ಮರಳಿ ತರಲು ಪ್ರಯತ್ನಿಸಲಿದೆ. ಜೊತೆಗೆ ತಂದೈ ಪೆರಿಯಾರ್ ಅವರ ಸಾಮಾಜಿಕ ನ್ಯಾಯದ ತತ್ವಗಳು ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನಾತ್ಮಕ ಆದರ್ಶಗಳನ್ನು ಮುಂದಿನ ವರ್ಷಗಳಲ್ಲಿ ಮುಂದುವರಿಸುವ ಬದ್ಧತೆಯೂ ಇದೆ ಎಂದು ಹೇಳಿದೆ. ಕಾಂಗ್ರೆಸ್, ಟಿವಿಕೆಯೊಂದಿಗೆ ಈ ಮೈತ್ರಿ ಕೇವಲ ಸರ್ಕಾರ ರಚನೆಗೆ ಮಾತ್ರ ಸೀಮಿತವಾಗದೇ, ಭವಿಷ್ಯದ ಲೋಕಸಭೆ ಮತ್ತು ರಾಜ್ಯಸಭೆ ಚುನಾವಣೆಗಳಲ್ಲಿಯೂ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದೆ.
ತನ್ನ ಪಕ್ಷಕ್ಕೆ ಬೆಂಬಲ ನೀಡಿದ ಕಾಂಗ್ರೆಸ್ ನಾಯಕರನ್ನು ವಿಜಯ್ ಅವರು ಹೂಮಾಲೆ ಸ್ವಾಗತಿಸಿದ್ದಾರೆ. ಇದೇ ವೇಳೆ, ತನ್ನೊಂದಿಗಿನ ಮೈತ್ರಿ ಮುರಿದುಕೊಂಡು ಟಿವಿಕೆ ಜೊತೆ ಸೇರಿದ ಕಾಂಗ್ರೆಸ್ ಬಗ್ಗೆ ಡಿಎಂಕೆ ನಾಯಕ ಸ್ಟಾಲಿನ್ ಕಿಡಿಕಾರಿದ್ದು ಬೆನ್ನಿಗೆ ಚೂರಿ ಹಾಕಿದ್ದಾಗಿ ಕಟು ನುಡಿಯಾಡಿದೆ
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm