ಬ್ರೇಕಿಂಗ್ ನ್ಯೂಸ್
07-05-26 12:52 pm HK News Staffer ದೇಶ - ವಿದೇಶ
ಚೆನ್ನೈ, ಮೇ 7: ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಡಿಎಂಕೆ - ಎಐಎಡಿಎಂಕೆ ಬಹುಕಾಲದ ವೈರತ್ವ ಬದಿಗಿಟ್ಟು ಒಂದಾಗಲಿದೆ ಎನ್ನುವ ವದಂತಿ ನಡುವೆಯೇ ನಿರ್ಗಮಿತ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಇಂಗ್ಲಿಷ್ ದೈನಿಕ ಒಂದಕ್ಕೆ ಪ್ರತಿಕ್ರಿಯಿಸಿ, ಮೈತ್ರಿ ವದಂತಿಯನ್ನು ತಳ್ಳಿಹಾಕಿದ್ದಾರೆ. ಡಿಎಂಕೆ ಪಕ್ಷವು ವಿಜಯ್ ನೇತೃತ್ವದ ಟಿವಿಕೆ ಸರ್ಕಾರ ರಚಿಸುವುದಕ್ಕೆ ಕಾಯಲು ಸಿದ್ಧವಾಗಿದೆ. ಆರು ತಿಂಗಳ ಕಾಲ ಯಾವುದೇ ಅಡ್ಡಿಯಿಲ್ಲದೇ ಬೆಳವಣಿಗೆಯನ್ನು ಗಮನಿಸುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.
ಸ್ಟಾಲಿನ್ ಹೇಳಿಕೆಯಿಂದ ಮೈತ್ರಿ ಸಾಧ್ಯತೆಗಳ ಕುರಿತು ಹರಡುತ್ತಿದ್ದ ಊಹಾಪೋಹಗಳಿಗೆ ತೆರೆ ಬಿದ್ದಂತಾಗಿದೆ. ರಾಜ್ಯದಲ್ಲಿ ಸಂವಿಧಾನಾತ್ಮಕ ಸಂಕಷ್ಟ ಅಥವಾ ಮತ್ತೊಂದು ಚುನಾವಣೆ ಎದುರಿಸುವಂತಹ ಸ್ಥಿತಿ ಬರಬಾರದು ಎಂದು ಹೇಳಿದ ಸ್ಟಾಲಿನ್, ಹೊಸ ಸರ್ಕಾರವು ತಮ್ಮ ಸರ್ಕಾರ ಜಾರಿಗೆ ತಂದಿದ್ದ ಎಲ್ಲಾ ಯೋಜನೆಗಳನ್ನು ಮುಂದುವರಿಸಬೇಕು. ಜೊತೆಗೆ, ಟಿವಿಕೆ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಬೇಕು ಎಂದು ಹೇಳಿದರು.
ಮಹಿಳೆಯರಿಗೆ 2,500 ರೂ. ಪ್ರತಿ ತಿಂಗಳು ನೀಡುವ ವಿಜಯ್ ಭರವಸೆ ಕುರಿತ ಪ್ರಶ್ನೆಗೆ ಉತ್ತರಿಸಿದ ಸ್ಟಾಲಿನ್, ಅದು ಈಡೇರಿಸಲು ಕಷ್ಟದ ಭರವಸೆ. ಕನಿಷ್ಠ ನಾವು ನೀಡಿದಂತೆ 1,000 ರೂ. ಆದರೂ ನೀಡಿ ಎಂದು ಹೇಳಿದರು.
ತಮಿಳುನಾಡು ಚುನಾವಣೆಯಲ್ಲಿ ಟಿವಿಕೆ 108 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಏಕಪಕ್ಷವಾಗಿ ಹೊರಹೊಮ್ಮಿದ್ದರೂ ಬಹುಮತಕ್ಕೆ ಅಗತ್ಯವಿದ್ದ 118 ಸ್ಥಾನ ಪಡೆಯಲು ವಿಫಲವಾಗಿದೆ. ಕಾಂಗ್ರೆಸ್ ಬೆಂಬಲ ನೀಡಿದ ನಂತರ ಟಿವಿಕೆ ಬಲ 112ಕ್ಕೇರಿದ್ದರೂ, ಸರ್ಕಾರ ರಚಿಸಲು ಇನ್ನೂ ಐದು ಸ್ಥಾನಗಳ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ವಿಜಯ್ ಪಕ್ಷವು ಸಿಪಿಐ ಮತ್ತು ವಿಡುತಲೈ ಚಿರುಥೈಗಲ್ ಕಚ್ಚಿ ಪಕ್ಷಗಳ ಬೆಂಬಲ ಯಾಚಿಸಿದೆ. ವಿಜಯ್ ಪಕ್ಷದ ನಾಯಕರು ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದರೂ, ಪೂರ್ಣ ಬಹುಮತ ತೋರಿಸಿದ ನಂತರವೇ ಬನ್ನಿ ಎಂದು ಹೇಳಿದ್ದಾರೆನ್ನುವುದು ಕುತೂಹಲಕ್ಕೆ ಕಾರಣವಾಗಿದೆ. ಹೀಗಾಗಿ ವಿಜಯ್ ಪಕ್ಷವನ್ನು ಬದಿಗಿಟ್ಟು ಡಿಎಂಕೆ - ಎಐಎಡಿಎಂಕೆ ಸೇರಿ ಸರ್ಕಾರ ರಚಿಸಲಿದೆ ಎಂಬ ವದಂತಿ ಹರಡಿತ್ತು. ಆದರೆ ಸ್ಟಾಲಿನ್ ಈ ವದಂತಿಯನ್ನು ತಳ್ಳಿಹಾಕಿದ್ದು ಸರ್ಕಾರ ರಚನೆಯ ಕಸರತ್ತಿನಿಂದ ದೂರ ಉಳಿಯುವುದಾಗಿ ಹೇಳಿದ್ದಾರೆ.
ಚುನಾವಣೆಯಲ್ಲಿ ಡಿಎಂಕೆ 59 ಸ್ಥಾನ, ಎಐಎಡಿಎಂಕೆ 47, ಟಿವಿಕೆ 108, ಪಿಎಂಕೆ 4, ಕಾಂಗ್ರೆಸ್ 5, ಐಯುಎಂಎಲ್ 2, ಸಿಪಿಐ 2, ಸಿಪಿಎಂ 2 ಸ್ಥಾನಗಳನ್ನು ಗೆದ್ದರೆ, ಬಿಜೆಪಿ, ಡಿಎಂಡಿಕೆ ಮತ್ತು ಎಎಂಎಂಕೆ ತಲಾ ಒಂದು ಸ್ಥಾನ ಗೆದ್ದಿವೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm