ಬ್ರೇಕಿಂಗ್ ನ್ಯೂಸ್
07-05-26 10:29 pm HK News Staffer ದೇಶ - ವಿದೇಶ
ಕೋಲ್ಕತ್ತಾ, ಮೇ 07: ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸುವ ಬೆಳವಣಿಗೆಯೊಂದರಲ್ಲಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸರ್ಕಾರವನ್ನು ರಾಜ್ಯಪಾಲ ಆರ್ಎನ್ ರವಿ ವಜಾಗೊಳಿಸಿದ್ದಾರೆ. 2026ರ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಹೀನಾಯ ಸೋಲು ಕಂಡಿದ್ದರೂ, ಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದೇ ರಾಜಕೀಯ ಹೈಡ್ರಾಮಾ ಮುಂದುವರಿಸಿದ್ದರು.
ಚುನಾವಣಾ ಫಲಿತಾಂಶದ ಬಳಿಕ ಮಾತನಾಡಿದ್ದ ಮಮತಾ ಬ್ಯಾನರ್ಜಿ, “ಟಿಎಂಸಿ ಸೋತಿಲ್ಲ, ಚುನಾವಣಾ ಆಯೋಗದ ಕಾರಣ ಬಿಜೆಪಿ ಗೆದ್ದಿದೆ. ಬೇಕಿದ್ದರೆ ರಾಜ್ಯಪಾಲರೇ ನನ್ನನ್ನು ವಜಾ ಮಾಡಲಿ” ಎಂದು ಸವಾಲು ಹಾಕಿದ್ದರು. ಈ ಹೇಳಿಕೆ ಬಂಗಾಳ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿತ್ತು.
ಇದೀಗ ಸಂವಿಧಾನದ 172ನೇ ವಿಧಿಯ ಪ್ರಕಾರ, 2021ರಲ್ಲಿ ಅಸ್ತಿತ್ವಕ್ಕೆ ಬಂದಿದ್ದ 17ನೇ ವಿಧಾನಸಭೆಯ ಐದು ವರ್ಷದ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಭೆಯ ಅವಧಿ ಅಧಿಕೃತವಾಗಿ ಅಂತ್ಯಗೊಂಡಿದೆ. ಇದರ ಬೆನ್ನಲ್ಲೇ ರಾಜ್ಯಪಾಲ ಆರ್ಎನ್ ರವಿ ಅವರು ಸಂವಿಧಾನದ 164(1)ನೇ ವಿಧಿಯಡಿ ಮೇ 07ರಿಂದ ಜಾರಿಗೆ ಬರುವಂತೆ ಮಮತಾ ಬ್ಯಾನರ್ಜಿ ನೇತೃತ್ವದ ಸಚಿವ ಸಂಪುಟವನ್ನು ವಜಾಗೊಳಿಸಿ ವಿಧಾನಸಭೆಯನ್ನು ವಿಸರ್ಜಿಸಿದ್ದಾರೆ.
ಈ ಕ್ರಮದೊಂದಿಗೆ ಮಮತಾ ಬ್ಯಾನರ್ಜಿ ಸೇರಿದಂತೆ ಎಲ್ಲಾ 294 ಶಾಸಕರ ಸದಸ್ಯತ್ವವೂ ರದ್ದುಗೊಂಡಿದೆ. ಮಮತಾ ರಾಜೀನಾಮೆ ನೀಡಲು ನಿರಾಕರಿಸಿದ್ದರೂ, ಸಂವಿಧಾನಾತ್ಮಕ ಪ್ರಕ್ರಿಯೆಯಂತೆ ಅವರ ಸರ್ಕಾರದ ಅವಧಿ ಅಂತ್ಯಗೊಂಡಿರುವುದರಿಂದ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯಲು ಅವಕಾಶವಿಲ್ಲ ಎಂಬುದು ಸ್ಪಷ್ಟವಾಗಿದೆ.
ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 207 ಸ್ಥಾನಗಳನ್ನು ಗೆದ್ದು ಸ್ಪಷ್ಟ ಬಹುಮತ ಸಾಧಿಸಿದ್ದು, ಟಿಎಂಸಿ ಕೇವಲ 80 ಸ್ಥಾನಗಳಿಗೆ ಕುಸಿದಿದೆ. ಅಚ್ಚರಿಯ ಸಂಗತಿ ಎಂದರೆ, ಸ್ವತಃ ಮಮತಾ ಬ್ಯಾನರ್ಜಿ ಭವಾನಿಪುರ ಕ್ಷೇತ್ರದಲ್ಲೇ ಸುಮಾರು 15 ಸಾವಿರ ಮತಗಳ ಅಂತರದಿಂದ ಸೋಲು ಕಂಡಿದ್ದಾರೆ.
ಇದೀಗ ರಾಜ್ಯಪಾಲರು ಬಹುಮತ ಪಡೆದ ಬಿಜೆಪಿ ಪಕ್ಷವನ್ನು ಸರ್ಕಾರ ರಚಿಸಲು ಆಹ್ವಾನಿಸುವ ಸಾಧ್ಯತೆ ದಟ್ಟವಾಗಿದ್ದು, ಮೇ 9ರಂದು ಹೊಸ ಸರ್ಕಾರ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಬಂಗಾಳದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತಿರುವುದು ರಾಜ್ಯ ರಾಜಕೀಯದಲ್ಲಿ ಐತಿಹಾಸಿಕ ತಿರುವು ಎಂದು ವಿಶ್ಲೇಷಿಸಲಾಗುತ್ತಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm