ಬ್ರೇಕಿಂಗ್ ನ್ಯೂಸ್
07-05-26 10:29 pm HK News Staffer ದೇಶ - ವಿದೇಶ
ಕೋಲ್ಕತ್ತಾ, ಮೇ 07: ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸುವ ಬೆಳವಣಿಗೆಯೊಂದರಲ್ಲಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸರ್ಕಾರವನ್ನು ರಾಜ್ಯಪಾಲ ಆರ್ಎನ್ ರವಿ ವಜಾಗೊಳಿಸಿದ್ದಾರೆ. 2026ರ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಹೀನಾಯ ಸೋಲು ಕಂಡಿದ್ದರೂ, ಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದೇ ರಾಜಕೀಯ ಹೈಡ್ರಾಮಾ ಮುಂದುವರಿಸಿದ್ದರು.
ಚುನಾವಣಾ ಫಲಿತಾಂಶದ ಬಳಿಕ ಮಾತನಾಡಿದ್ದ ಮಮತಾ ಬ್ಯಾನರ್ಜಿ, “ಟಿಎಂಸಿ ಸೋತಿಲ್ಲ, ಚುನಾವಣಾ ಆಯೋಗದ ಕಾರಣ ಬಿಜೆಪಿ ಗೆದ್ದಿದೆ. ಬೇಕಿದ್ದರೆ ರಾಜ್ಯಪಾಲರೇ ನನ್ನನ್ನು ವಜಾ ಮಾಡಲಿ” ಎಂದು ಸವಾಲು ಹಾಕಿದ್ದರು. ಈ ಹೇಳಿಕೆ ಬಂಗಾಳ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿತ್ತು.
ಇದೀಗ ಸಂವಿಧಾನದ 172ನೇ ವಿಧಿಯ ಪ್ರಕಾರ, 2021ರಲ್ಲಿ ಅಸ್ತಿತ್ವಕ್ಕೆ ಬಂದಿದ್ದ 17ನೇ ವಿಧಾನಸಭೆಯ ಐದು ವರ್ಷದ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಭೆಯ ಅವಧಿ ಅಧಿಕೃತವಾಗಿ ಅಂತ್ಯಗೊಂಡಿದೆ. ಇದರ ಬೆನ್ನಲ್ಲೇ ರಾಜ್ಯಪಾಲ ಆರ್ಎನ್ ರವಿ ಅವರು ಸಂವಿಧಾನದ 164(1)ನೇ ವಿಧಿಯಡಿ ಮೇ 07ರಿಂದ ಜಾರಿಗೆ ಬರುವಂತೆ ಮಮತಾ ಬ್ಯಾನರ್ಜಿ ನೇತೃತ್ವದ ಸಚಿವ ಸಂಪುಟವನ್ನು ವಜಾಗೊಳಿಸಿ ವಿಧಾನಸಭೆಯನ್ನು ವಿಸರ್ಜಿಸಿದ್ದಾರೆ.
ಈ ಕ್ರಮದೊಂದಿಗೆ ಮಮತಾ ಬ್ಯಾನರ್ಜಿ ಸೇರಿದಂತೆ ಎಲ್ಲಾ 294 ಶಾಸಕರ ಸದಸ್ಯತ್ವವೂ ರದ್ದುಗೊಂಡಿದೆ. ಮಮತಾ ರಾಜೀನಾಮೆ ನೀಡಲು ನಿರಾಕರಿಸಿದ್ದರೂ, ಸಂವಿಧಾನಾತ್ಮಕ ಪ್ರಕ್ರಿಯೆಯಂತೆ ಅವರ ಸರ್ಕಾರದ ಅವಧಿ ಅಂತ್ಯಗೊಂಡಿರುವುದರಿಂದ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯಲು ಅವಕಾಶವಿಲ್ಲ ಎಂಬುದು ಸ್ಪಷ್ಟವಾಗಿದೆ.
ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 207 ಸ್ಥಾನಗಳನ್ನು ಗೆದ್ದು ಸ್ಪಷ್ಟ ಬಹುಮತ ಸಾಧಿಸಿದ್ದು, ಟಿಎಂಸಿ ಕೇವಲ 80 ಸ್ಥಾನಗಳಿಗೆ ಕುಸಿದಿದೆ. ಅಚ್ಚರಿಯ ಸಂಗತಿ ಎಂದರೆ, ಸ್ವತಃ ಮಮತಾ ಬ್ಯಾನರ್ಜಿ ಭವಾನಿಪುರ ಕ್ಷೇತ್ರದಲ್ಲೇ ಸುಮಾರು 15 ಸಾವಿರ ಮತಗಳ ಅಂತರದಿಂದ ಸೋಲು ಕಂಡಿದ್ದಾರೆ.
ಇದೀಗ ರಾಜ್ಯಪಾಲರು ಬಹುಮತ ಪಡೆದ ಬಿಜೆಪಿ ಪಕ್ಷವನ್ನು ಸರ್ಕಾರ ರಚಿಸಲು ಆಹ್ವಾನಿಸುವ ಸಾಧ್ಯತೆ ದಟ್ಟವಾಗಿದ್ದು, ಮೇ 9ರಂದು ಹೊಸ ಸರ್ಕಾರ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಬಂಗಾಳದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತಿರುವುದು ರಾಜ್ಯ ರಾಜಕೀಯದಲ್ಲಿ ಐತಿಹಾಸಿಕ ತಿರುವು ಎಂದು ವಿಶ್ಲೇಷಿಸಲಾಗುತ್ತಿದೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm