ಬ್ರೇಕಿಂಗ್ ನ್ಯೂಸ್
08-05-26 06:38 pm HK News Staffer ದೇಶ - ವಿದೇಶ
ಚೆನ್ನೈ, ಮೇ 8: ತಮಿಳುನಾಡಿನಲ್ಲಿ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಮುಖ್ಯಸ್ಥ ವಿಜಯ್ ಅವರಿಗೆ ಕೊನೆಗೂ ಬಹುಮತದ ಮ್ಯಾಜಿಕ್ ನಂಬರ್ ಸಿಕ್ಕಿದ್ದು, ಕಾಂಗ್ರೆಸ್ ನಂತರ ಎಡರಂಗ ಮತ್ತು ವಿಸಿಕೆ ಪಾರ್ಟಿಯೂ ಬೆಂಬಲ ಘೋಷಿಸಿವೆ. ಹೀಗಾಗಿ ದಳಪತಿ ವಿಜಯ್ ಅವರು ಶೀಘ್ರದಲ್ಲೇ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಲಿದ್ದಾರೆ.
ಸರ್ಕಾರ ರಚನೆಗೆ ನಟ-ರಾಜಕಾರಣಿ ವಿಜಯ್ ನೇತೃತ್ವದ ಟಿವಿಕೆಗೆ ಸಿಪಿಐ ಮತ್ತು ಸಿಪಿಎಂ ಶುಕ್ರವಾರ ಬೇಷರತ್ ಬೆಂಬಲ ಘೋಷಿಸಿದೆ. ಇದರ ಬೆನ್ನಲ್ಲೇ ವಿಸಿಕೆ ಸಹ ಟಿವಿಕೆಗೆ ಬೆಂಬಲ ಘೋಷಿಸಿ ರಾಜ್ಯಪಾಲರಿಗೆ ಪತ್ರ ಬರೆದಿದೆ. ಶುಕ್ರವಾರ ಸುದೀರ್ಘ ಚರ್ಚೆಯ ನಂತರ, ಎಡಪಕ್ಷಗಳು ವಿಜಯ್ ಅವರ ಟಿವಿಕೆಗೆ ಬೆಂಬಲ ನೀಡಲು ನಿರ್ಧರಿಸಿತು. ಆನಂತರ, ಈ ಕುರಿತ ಪತ್ರವನ್ನು ತಮಿಳುನಾಡು ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರಿಗೆ ಕಳುಹಿಸಲಾಗಿದೆ.
ಇದೇ ರೀತಿಯ ಜಂಜಾಟ ಮುಂದುವರಿದರೆ ಮೇ 10ರ ಬಳಿಕ ರಾಷ್ಟ್ರಪತಿ ಆಡಳಿತ ಹೇರಲು ಬಿಜೆಪಿ ಮುಂದಾಗಿದೆ. ಆಮೂಲಕ ಹಿಂಬಾಗಿಲಿನಿಂದ ಬಿಜೆಪಿ ರಾಜ್ಯದ ಆಡಳಿತ ನಡೆಸಲಿದೆ. ಇದನ್ನು ತಪ್ಪಿಸಲು ನಾವು ಟಿವಿಕೆಗೆ ಬೇಷರತ್ ಬೆಂಬಲ ನೀಡಿದ್ದೇವೆ, ನಾವು ಯಾವುದೇ ಕ್ಯಾಬಿನೆಟ್ ಸ್ಥಾನ ಬಯಸುವುದಿಲ್ಲ ಎಂದು ಸಿಪಿಐಎಂ ರಾಜ್ಯ ಸೆಕ್ರೆಟರಿ ಟಿ.ಟಿ ಷಣ್ಮುಗಂ ತಿಳಿಸಿದ್ದಾರೆ. 234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ ಸಿಪಿಐ ಮತ್ತು ಸಿಪಿಎಂ ತಲಾ ಇಬ್ಬರು ಶಾಸಕರನ್ನು ಹೊಂದಿದೆ. ಇದರ ಬೆನ್ನಲ್ಲೇ ವಿಸಿಕೆ(2) ಮತ್ತು ಒಂದೊಂದು ಸ್ಥಾನ ಇರುವ ಮುಸ್ಲಿಂ ಲೀಗ್ ಮತ್ತು ಎಕೆಎಂಎಂ ಕೂಡ ವಿಜಯ್ ಸರ್ಕಾರಕ್ಕೆ ಬೆಂಬಲ ನೀಡಿವೆ. ಇದರೊಂದಿಗೆ ವಿಜಯ್ ಸರ್ಕಾರದ ಬಲಾಬಲ 121 ಸ್ಥಾನಗಳಿಗೆ ಏರಿದೆ.
ಎಡಪಕ್ಷಗಳು ಮತ್ತು ಐಯುಎಂಎಲ್ ಡಿಎಂಕೆ ಮೈತ್ರಿಯಲ್ಲಿತ್ತಾದರೂ, ವಿಜಯ್ ಬೆಂಬಲ ಕೋರಿಕೆಯ ನಂತರ ಮಿತ್ರ ಪಕ್ಷಗಳಿಗೆ ನೀವು ಸರ್ಕಾರ ಸೇರುವ ಬಗ್ಗೆ ನಿರ್ಧಾರ ಮಾಡಿಕೊಳ್ಳಬಹುದು. ತನ್ನದೇನೂ ಅಭ್ಯಂತರ ಇಲ್ಲವೆಂದು ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಹೇಳಿದ್ದರು. ಇದರ ಬೆನ್ನಲ್ಲೇ ಈ ಪಕ್ಷಗಳು ದಳಪತಿ ವಿಜಯ್ ಸರ್ಕಾರಕ್ಕೆ ಬೆಂಬಲ ನೀಡಿವೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm