ಬ್ರೇಕಿಂಗ್ ನ್ಯೂಸ್
09-05-26 11:14 am HK News Staffer ದೇಶ - ವಿದೇಶ
ನವದೆಹಲಿ, ಮೇ 9: ಪೆಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಪಾಕಿಸ್ತಾನ ವಿರುದ್ಧ ಭಾರತ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ, ಶತ್ರು ರಾಷ್ಟ್ರ ಪಾಕಿಸ್ತಾನಕ್ಕೆ ನೆರೆ ರಾಷ್ಟ್ರ ಚೀನಾ ಸಹಾಯ ಮಾಡಿರುವುದು ಈಗ ಸ್ಪಷ್ಟವಾಗಿದೆ. ಸ್ವತಃ ಚೀನಾ ಈ ಅಂಶವನ್ನು ಒಪ್ಪಿಕೊಂಡಿದೆ.
ಭಾರತದೊಂದಿಗಿನ ಯುದ್ಧ ಸಮಯದಲ್ಲಿ ಪಾಕಿಸ್ತಾನಕ್ಕೆ ಆನ್-ಸೈಟ್ ತಾಂತ್ರಿಕ ಬೆಂಬಲವನ್ನು ನೀಡಿರುವುದಾಗಿ ಚೀನಾ ಮೊದಲ ಬಾರಿಗೆ ದೃಢಪಡಿಸಿದೆ ಎಂದು ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ವರದಿ ಮಾಡಿದೆ. ಕಳೆದ ವರ್ಷ ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿತ್ತು, ಪೆಹಲ್ಗಾಮ್ ಉಗ್ರ ದಾಳಿಯಲ್ಲಿ 26 ಮಂದಿ ಪ್ರವಾಸಿಗರನ್ನು ಭಯೋತ್ಪಾದಕರು ಕೊಂದಿದ್ದರು.
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ 9 ಭಯೋತ್ಪಾದನಾ ಶಿಬಿರಗಳನ್ನು ಗುರಿಯಾಗಿಸಿ ಭಾರತ ದಾಳಿ ನಡೆಸಿತ್ತು. ಜೈಶ್-ಎ-ಮೊಹಮ್ಮದ್, ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಉಗ್ರವಾದಿ ಗುಂಪುಗಳಿಗೆ ಸೇರಿದ 100 ಕ್ಕೂ ಹೆಚ್ಚು ಭಯೋತ್ಪಾದಕರು ಸಾವನ್ನಪ್ಪಿದರು. ಚೀನಾದ ಟಿವಿ ಮಾಧ್ಯಮವೊಂದು ವಾಯುಯಾನ ಉದ್ಯಮ ನಿಗಮದ ಎಂಜಿನಿಯರ್ಗಳು ಪಾಕಿಸ್ತಾನಿ ಕಾರ್ಯಾಚರಣೆಗಳನ್ನು ಬೆಂಬಲಿಸಿದ್ದಾಗಿ ತಿಳಿಸಿದ್ದಾರೆ. ಆಮೂಲಕ ಭಾರತ- ಪಾಕಿಸ್ತಾನ ಘರ್ಷಣೆಯಲ್ಲಿ ಚೀನಾದ ಸಿಬ್ಬಂದಿ ಪಾತ್ರ ವಹಿಸಿದ್ದಾರೆ ಎಂಬುದನ್ನು ಈ ಮೂಲಕ ಬೀಜಿಂಗ್ ಮೊದಲ ಬಾರಿಗೆ ಒಪ್ಪಿಕೊಂಡಿದೆ.
ಚೆಂಗ್ಡು ವಿಮಾನ ವಿನ್ಯಾಸ ಮತ್ತು ಸಂಶೋಧನಾ ಸಂಸ್ಥೆಯ ಎಂಜಿನಿಯರ್ ಜಾಂಗ್ ಹೆಂಗ್, ಸಂಘರ್ಷದ ಸಮಯದಲ್ಲಿ ಪಾಕಿಸ್ತಾನಕ್ಕೆ ತಾಂತ್ರಿಕ ಬೆಂಬಲ ನೀಡಿದವರಲ್ಲಿ ಒಬ್ಬರು ಎಂದು ವರದಿ ತಿಳಿಸಿದೆ. ಈ ಸಂಸ್ಥೆ ಚೀನಾದ ಮುಂದುವರಿದ ಯುದ್ಧ ವಿಮಾನಗಳು ಮತ್ತು ಮಾನವರಹಿತ ವೈಮಾನಿಕ ವಾಹನಗಳ ಪ್ರಮುಖ ಅಭಿವೃದ್ಧಿ ಸಂಸ್ಥೆಯಾಗಿದೆ. ಪಾಕಿಸ್ತಾನದ ವಾಯುಪಡೆಯು ಚೀನಾದ AVIC ಅಂಗಸಂಸ್ಥೆಯಿಂದ ತಯಾರಾದ ಚೀನಾ ನಿರ್ಮಿತ J-10CE ಜೆಟ್ಗಳನ್ನು ಯುದ್ಧಕ್ಕೆ ಬಳಸಿತ್ತು.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm