ಬ್ರೇಕಿಂಗ್ ನ್ಯೂಸ್
10-05-26 09:15 pm HK News Desk ದೇಶ - ವಿದೇಶ
ಚೆನ್ನೈ, ಮೇ 10: ತಮಿಳಿನ ಸೂಪರ್ ಸ್ಟಾರ್ ನಟರಾಗಿದ್ದ ವಿಜಯ್ ಈಗ ತಮಿಳುನಾಡು ಮುಖ್ಯಮಂತ್ರಿ ಪದವಿಗೇರಿದ್ದಾರೆ. ಸಾಮಾನ್ಯ ಚಿತ್ರ ನಟನಾಗಿದ್ದ ಮನುಷ್ಯ ಇಷ್ಟು ಬೇಗ ಸಿಎಂ ಪದವಿಗೇರುತ್ತಾನೆಂದು ಯಾವೊಬ್ಬ ರಾಜಕಾರಣಿಯೂ ಅಂದುಕೊಂಡಿರಲಿಲ್ಲ. ಅಂಥದ್ದರಲ್ಲಿ ಇದೀಗ ಪ್ರಮಾಣ ವಚನ ಸಮಾರಂಭದಲ್ಲೂ ವಿಶೇಷ ಎನ್ನಿಸುವಷ್ಟರ ಮಟ್ಟಿಗೆ ವಿಜಯ್ ಗಮನ ಸೆಳೆದಿದ್ದಾರೆ.
ಕಾಂಗ್ರೆಸ್, ಮುಸ್ಲಿಂ ಲೀಗ್ ಇನ್ನಿತರ ಸೆಕ್ಯುಲರ್ ಪಕ್ಷಗಳೊಂದಿಗೆ ಸೇರಿ ವಿಜಯ್ ಮೈತ್ರಿ ಸರ್ಕಾರ ರಚಿಸಿದರೂ ಪ್ರಮಾಣ ವಚನ ಸಮಾರಂಭದಲ್ಲೇ ವಂದೇ ಮಾತರಂ ಗೀತೆಯನ್ನು ಸಂಪೂರ್ಣ ಹಾಡಿಸುವ ಮೂಲಕ ಇಡೀ ದೇಶಕ್ಕೆ ಹೊಸ ಸಂದೇಶ ನೀಡಿದ್ದಾರೆ. ಇತ್ತೀಚೆಗಷ್ಟೇ ಕೇಂದ್ರ ಬಿಜೆಪಿ ಸರ್ಕಾರ ಸ್ವಾತಂತ್ರ್ಯ ಕಾಲದಲ್ಲಿ ಜನರನ್ನು ಒಂದುಗೂಡಿಸಿದ್ದ ವಂದೇ ಮಾತರಂ ಗೀತೆಗೆ ರಾಷ್ಟ್ರಗೀತೆ ಜನಗಣ ಮನ ಗೀತೆಯಷ್ಟೇ ಪ್ರಾಮುಖ್ಯತೆ ಕೊಡಬೇಕೆಂದು ಕಾನೂನು ಆದೇಶ ಮಾಡಿತ್ತು. ಆದರೆ ಸೆಕ್ಯುಲರ್, ತುಷ್ಟೀಕರಣದ ರಾಜಕೀಯದ ಕಾರಣಕ್ಕೆ ಬಿಜೆಪಿ ಸರ್ಕಾರದ ನಡೆಗೆ ಕಾಂಗ್ರೆಸ್ ಟೀಕೆ ಮಾಡಿತ್ತು.


ಆದರೆ ಗೀತೆಯನ್ನು ವಿರೋಧಿಸಿದ್ದ ರಾಹುಲ್ ಗಾಂಧಿ ಎದುರಲ್ಲೇ ಇದೀಗ ವಂದೇ ಮಾತರಂ ಗೀತೆಯನ್ನು ವಿಜಯ್ ತನ್ನ ಪ್ರಮಾಣವಚನ ಸಮಾರಂಭದಲ್ಲಿ ಹಾಡಿಸಿ ಗಮನ ಸೆಳೆದಿದ್ದಾರೆ. ಪೂರ್ಣ ಗೀತೆ ಹಾಡಿಸಿದ್ದಲ್ಲದೆ, ರಾಹುಲ್ ಸೇರಿದಂತೆ ಎಲ್ಲ ಸೆಕ್ಯುಲರ್ ನಾಯಕರೂ ಗೀತೆಗೆ ಎದ್ದು ನಿಂತು ಗೌರವ ಸೂಚಿಸುವಂತೆ ಮಾಡಿಸಿದ್ದಾರೆ. ವಿಶೇಷ ಅಂದರೆ, ನಿನ್ನೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಪ್ರಮಾಣ ವಚನ ಸ್ವೀಕರಿಸಿದರೂ ವಂದೇ ಮಾತರಂ ಪೂರ್ಣ ಗೀತೆಗೆ ಆದ್ಯತೆ ಕೊಟ್ಟಿರಲಿಲ್ಲ. ಬಂಗಾಳದ್ದೇ ಆದ ಬಂಕಿಮಚಂದ್ರ ಚಟರ್ಜಿ ವಂದೇ ಮಾತರಂ ಗೀತೆಯನ್ನು ರಚಿಸಿದ್ದರೂ, ರಾಷ್ಟ್ರಗೀತೆಯ ಮಾನ್ಯತೆ ಕೊಟ್ಟಿದ್ದ ಬಿಜೆಪಿ ಅವರದೇ ನಾಡಿನಲ್ಲಿ ಹೆಚ್ಚು ಮಹತ್ವ ಕೊಟ್ಟಿರಲಿಲ್ಲ.
ಸೆಕ್ಯುಲರ್ ಕಾರಣಕ್ಕೆ ಬಿಜೆಪಿ ಮತ್ತು ಅದರ ಸಿದ್ಧಾಂತವನ್ನು ವಿರೋಧಿಸುತ್ತ ಇದೀಗ ಸೆಕ್ಯುಲರ್ ಪಕ್ಷಗಳ ಜೊತೆಗೇ ಸೇರಿಕೊಂಡು ಸರ್ಕಾರ ರಚಿಸಿದ ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಬಿಜೆಪಿಗೆ ಠಕ್ಕರ್ ನೀಡಿ ರಾಜ್ಯಕ್ಕೆ ಹೊಸ ಸಂದೇಶ ನೀಡಿರುವುದು ವಿಶೇಷ. ತನ್ನ ಭಾಷಣದಲ್ಲಿಯೂ ಸೆಕ್ಯುಲರ್ ಆಡಳಿತದ ಹೊಸ ಅನುಭವ ಜನರಿಗೆ ನೀಡಲಿದ್ದೇನೆ ಎನ್ನುವ ವಾಗ್ದಾನವನ್ನೂ ವಿಜಯ್ ಮಾಡಿದ್ದಾರೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm