ಬ್ರೇಕಿಂಗ್ ನ್ಯೂಸ್
11-05-26 02:14 pm HK News Staffer ದೇಶ - ವಿದೇಶ
ಇಸ್ಲಮಾಬಾದ್, ಮೇ 11: ಅಫ್ಘನಿಸ್ತಾನ ಗಡಿಭಾಗ ವಾಯುವ್ಯ ಪಾಕಿಸ್ತಾನದಲ್ಲಿ ಪೊಲೀಸ್ ಚೆಕ್ಪಾಯಿಂಟ್ ಒಂದರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ 21 ಸೈನಿಕರು ಸಾವನ್ನಪ್ಪಿದ್ದು ಹಲವಾರು ಜನರು ಗಾಯಗೊಂಡಿದ್ದಾರೆ. ದಾಳಿಕೋರರು ಮೊದಲು ಪೊಲೀಸ್ ಚೆಕ್ ಪಾಯಿಂಟ್ನಲ್ಲಿ ಕಾರ್ ಬಾಂಬ್ ಸ್ಫೋಟಿಸಿದ್ದು ಬಳಿಕ ಗುಂಡಿನ ದಾಳಿ ನಡೆಸಿದರು. ದಾಳಿಯ ನಂತರ, ಪೊಲೀಸರ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ದೋಚಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಇತ್ತೇಹಾದ್- ಉಲ್- ಮುಜಾಹಿದ್ದೀನ್ ಪಾಕಿಸ್ತಾನ್ ಎಂಬ ಹೊಸ ಉಗ್ರವಾದಿ ಸಂಘಟನೆಯು ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಖೈಬರ್ ಪಖ್ತುಂಖ್ವಾ ಜಿಲ್ಲೆಯ ಬನ್ನು ಎಂಬಲ್ಲಿ ಭಾನುವಾರ ನಸುಕಿನಲ್ಲಿ ಈ ದಾಳಿ ನಡೆದಿದೆ. ಬನ್ನು ಅಫ್ಘಾನಿಸ್ತಾನದ ಗಡಿಯಲ್ಲಿರುವ ಪಾಕಿಸ್ತಾನಕ್ಕೆ ಸೇರಿದ ಪ್ರದೇಶವಾಗಿದೆ. ದಾಳಿಕೋರರು ತಮ್ಮ ಕಾರ್ಯಾಚರಣೆಯನ್ನು ಪೂರ್ಣಗೊಳಿಸಿದ ನಂತರ ಗಡಿಯನ್ನು ದಾಟಿ ಅಫ್ಘಾನಿಸ್ತಾನಕ್ಕೆ ಪಲಾಯನ ಮಾಡಿರಬಹುದು ಎಂದು ಶಂಕಿಸಲಾಗಿದೆ. ಈ ಪ್ರದೇಶವನ್ನು ಉಗ್ರರ ಭದ್ರಕೋಟೆ ಎಂದು ಪರಿಗಣಿಸಲಾಗಿದ್ದು, ಪೊಲೀಸ್, ಮಿಲಿಟರಿ ಮತ್ತು ಅರೆಸೈನಿಕ ಪಡೆಗಳ ಮೇಲೆ ಆಗಿಂದಾಗ್ಗೆ ದಾಳಿ ನಡೆಸುತ್ತಿದ್ದಾರೆ.
ಬನ್ನು ಪೊಲೀಸ್ ಅಧಿಕಾರಿ ಜಾಹಿದ್ ಖಾನ್ ಮಾತನಾಡಿ, ಭದ್ರತಾ ತಪಾಸಣಾ ಕೇಂದ್ರದ ಬಳಿ ಆತ್ಮಾಹುತಿ ಬಾಂಬರ್ ಇದ್ದ ಕಾರು ಸ್ಫೋಟವಾಗಿದೆ. ಬಳಿಕ ಹಲವಾರು ದಾಳಿಕೋರರು ಗುಂಡಿನ ದಾಳಿ ನಡೆಸಿದ್ದಾರೆ. ಇದರ ಬೆನ್ನಲ್ಲೇ ಹಲವಾರು ಸ್ಫೋಟಗಳು ಕೇಳಿಬಂದವು. ಸ್ಫೋಟವು ಎಷ್ಟು ಪ್ರಬಲವಾಗಿತ್ತೆಂದರೆ ಚೆಕ್ಪಾಯಿಂಟ್ ಕಟ್ಟಡ ಪೂರ್ತಿ ಕುಸಿದು ಬಿದ್ದಿದೆ ಎಂದು ಹೇಳಿದರು.
ಸ್ಫೋಟಕಗಳಿಂದ ತುಂಬಿದ ವಾಹನದಿಂದ ಪೊಲೀಸ್ ತಪಾಸಣಾ ಕೇಂದ್ರದ ಮೇಲೆ ಡಿಕ್ಕಿ ಪಡಿಸಲಾಗಿದೆ. ಪ್ರಬಲ ಸ್ಫೋಟದ ನಂತರ, ಪೊಲೀಸ್ ತಪಾಸಣಾ ಕೇಂದ್ರದ ಮೇಲೆ ದಾಳಿ ನಡೆಸಲಾಯಿತು. ದಾಳಿಯಲ್ಲಿ ಕನಿಷ್ಠ 21 ಸೈನಿಕರು ಸಾವನ್ನಪ್ಪಿದ್ದಾರೆ. ದಾಳಿಕೋರರು ಡ್ರೋನ್ಗಳನ್ನು ಸಹ ಬಳಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸ್ಫೋಟವು ಹತ್ತಿರದ ವಸತಿ ಪ್ರದೇಶಗಳಿಗೆ ವ್ಯಾಪಕ ಹಾನಿಯನ್ನುಂಟು ಮಾಡಿದ್ದು ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ. ಸರ್ಕಾರಿ ಆಸ್ಪತ್ರೆಗಳಿಂದ ರಕ್ಷಣಾ ಸಂಸ್ಥೆಗಳು ಮತ್ತು ಆಂಬ್ಯುಲೆನ್ಸ್ಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಬನ್ನುವಿನ ಸರ್ಕಾರಿ ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm