ಬ್ರೇಕಿಂಗ್ ನ್ಯೂಸ್
11-05-26 06:20 pm HK News Staffer ದೇಶ - ವಿದೇಶ
ಕಾರವಾರ, ಮೇ 11: ಅರಬ್ಬಿ ಸಮುದ್ರದಲ್ಲಿ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಕಾರವಾರದ ಪರ್ಷಿಯನ್ ಮಾದರಿಯ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆಯಾಗಿದೆ. ಬೋಟ್ನಲ್ಲಿದ್ದ 22 ಮೀನುಗಾರರನ್ನು ಇತರ ಬೋಟ್ಗಳ ಮೀನುಗಾರರು ರಕ್ಷಿಸುವ ಮೂಲಕ ಭೀಕರ ದುರಂತವೊಂದು ತಪ್ಪಿದಂತಾಗಿದೆ.
ಕಾರವಾರ ತಾಲೂಕಿನ ಮುದಗಾ ಬಂದರಿನಿಂದ ಸುಮಾರು ಒಂದು ವಾರದ ಹಿಂದೆ ದಿನೇಶ್ ಕಾಂಚನ್ ಅವರಿಗೆ ಸೇರಿದ ‘ಶ್ರೀ ಅಮ್ಮ’ ಹೆಸರಿನ ಬೋಟ್ ಮೀನುಗಾರಿಕೆಗೆ ತೆರಳಿತ್ತು. ಗೋವಾದ ಬೇತುಲ್ ಸಮುದ್ರ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ತಾಂತ್ರಿಕ ದೋಷ ಉಂಟಾಗಿ ಬೋಟ್ಗೆ ನೀರು ನುಗ್ಗಿದೆ ಎನ್ನಲಾಗಿದೆ.
ಕ್ಷಣಾರ್ಧದಲ್ಲೇ ಬೋಟ್ ಸಮುದ್ರದ ಆಳಕ್ಕೆ ಮುಳುಗಿದರೂ, ಸಮೀಪದಲ್ಲಿದ್ದ ಇತರ ಮೀನುಗಾರಿಕಾ ಬೋಟ್ಗಳ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ 22 ಮಂದಿಯನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ರಕ್ಷಿಸಲ್ಪಟ್ಟ ಎಲ್ಲರೂ ಕಾರವಾರ ಹಾಗೂ ಉತ್ತರ ಕನ್ನಡ ಜಿಲ್ಲೆಯವರು ಎಂದು ತಿಳಿದುಬಂದಿದೆ.
ಈ ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಾರಿಕಾ ಬಲೆಗಳು, ಇಂಧನ ಹಾಗೂ ಸಂಗ್ರಹಿಸಿದ್ದ ಮೀನು ಸೇರಿ ಸುಮಾರು 1.5 ರಿಂದ 2 ಕೋಟಿ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
ಸದ್ಯ ಎಲ್ಲ ಮೀನುಗಾರರು ಸುರಕ್ಷಿತವಾಗಿ ದಡ ಸೇರಿದ್ದು, ಸ್ಥಳೀಯ ಮೀನುಗಾರ ಸಮುದಾಯದಲ್ಲಿ ಆತಂಕದ ಕ್ಷಣಗಳು ದೂರವಾದಂತಾಗಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm