ಬ್ರೇಕಿಂಗ್ ನ್ಯೂಸ್
12-05-26 08:01 pm HK News Desk ದೇಶ - ವಿದೇಶ
ನವದೆಹಲಿ, ಮೇ 12: ದೇಶಾದ್ಯಂತ ವೈದ್ಯಕೀಯ ಶಿಕ್ಷಣ ಪ್ರವೇಶಾತಿಗಾಗಿ ಮೇ 3ರಂದು ನಡೆದಿದ್ದ ನೀಟ್ ಯುಜಿ (NEET UG 2026) ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ರದ್ದುಗೊಳಿಸಿದೆ. ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ, ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಕಾಪಾಡಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಎನ್ಟಿಎ ತಿಳಿಸಿದೆ. ಶೀಘ್ರದಲ್ಲೇ ಪರೀಕ್ಷೆಗೆ ಹೊಸ ದಿನಾಂಕ ಪ್ರಕಟಿಸುವುದಾಗಿ ತಿಳಿಸಿದೆ.
ಮೇ 3 ರಂದು ನಡೆದ ಪರೀಕ್ಷೆಯ ಪ್ರಶ್ನೆಪತ್ರಿಕೆ ರಾಜಸ್ಥಾನದಲ್ಲಿ ಸೋರಿಕೆಯಾಗಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಪ್ರತಿಭಟನೆ ಭುಗಿಲೆದ್ದಿತ್ತು. ಗೆಸ್ ಪತ್ರಿಕೆಯಲ್ಲಿದ್ದ ಸುಮಾರು 100ಕ್ಕೂ ಹೆಚ್ಚು ಜೀವಶಾಸ್ತ್ರ ಮತ್ತು ರಸಾಯನಶಾಸ್ತ್ರದ ಪ್ರಶ್ನೆಗಳು ಅಸಲಿ ಪ್ರಶ್ನೆ ಪತ್ರಿಕೆಗೆ ಹೋಲಿಕೆಯಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಕಳೆದ ಮೇ 3, 2026 ರಂದು ಭಾನುವಾರ ದೇಶಾದ್ಯಂತ ನೀಟ್ ಪರೀಕ್ಷೆ ನಡೆದಿತ್ತು. ಆದರೆ ರಾಜಸ್ಥಾನದಲ್ಲಿ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ವರದಿಗಳು ಹರಿದಾಡಿದ್ದವು. ಈ ಬಗ್ಗೆ ಮೇ 8 ರಂದು ಎನ್ಟಿಎ ಕೇಂದ್ರ ತನಿಖಾ ಸಂಸ್ಥೆಗಳಿಗೆ ಸ್ವತಂತ್ರ ಪರಿಶೀಲನೆ ನಡೆಸುವಂತೆ ಮನವಿ ಮಾಡಿತ್ತು.
ತನಿಖಾ ಸಂಸ್ಥೆಗಳು ಮತ್ತು ಕಾನೂನು ಜಾರಿ ಸಂಸ್ಥೆಗಳು ನೀಡಿದ ವರದಿಯನ್ನಾಧರಿಸಿ, ಕೇಂದ್ರ ಸರ್ಕಾರ ಪರೀಕ್ಷೆಯನ್ನು ರದ್ದುಗೊಳಿಸಲು ನಿರ್ಧರಿಸಿದೆ. ಹೀಗಾಗಿ ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರಿದೆ. ಇದೇ ವೇಳೆ, ಪ್ರಕರಣ ಬಗ್ಗೆ ಸಮಗ್ರ ತನಿಖೆಗಾಗಿ ಸಿಬಿಐಗೆ ಹೊಣೆ ವಹಿಸಲಾಗಿದೆ.
ದೆಹಲಿಯಲ್ಲಿ ಎನ್ಎಸ್ ಯುಐ ಪ್ರತಿಭಟನೆ
ಇದೇ ವೇಳೆ, ಕಾಂಗ್ರೆಸ್ನ ವಿದ್ಯಾರ್ಥಿ ವಿಭಾಗವಾದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್ಎಸ್ಯುಐ) ನವದೆಹಲಿಯ ಶಾಸ್ತ್ರಿ ಭವನದ ಹೊರಗೆ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿತು. ನೀಟ್ ಪರೀಕ್ಷೆಯಲ್ಲಿ "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ" "ಪತ್ರಿಕೆ ಸೋರಿಕೆ, ಮೋದಿ ಸರ್ಕಾರ ದುರ್ಬಲ" ಮತ್ತು "ವೈದ್ಯರ ಪದವಿ ಮಾರಾಟಕ್ಕಿದೆ" ಎಂದು ಬರೆದಿರುವ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm