ಬ್ರೇಕಿಂಗ್ ನ್ಯೂಸ್
12-05-26 08:15 pm HK News Desk ದೇಶ - ವಿದೇಶ
ಚೆನ್ನೈ, ಮೇ 12: ಇತ್ತ ಸಿಎಂ ವಿಜಯ್ ಜೋಸೆಫ್ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಸಿದ್ಧತೆ ನಡೆಸುತ್ತಿರುವಾಗಲೇ ತಮಿಳುನಾಡು ರಾಜಕೀಯ ರೋಚಕ ತಿರುವು ಪಡೆದಿದ್ದು, ಎಸ್ಪಿ ವೇಲುಮಣಿ ಮತ್ತು ಸಿವಿ ಷಣ್ಮುಗಂ ನೇತೃತ್ವದ ಎಐಎಡಿಎಂಕೆಯ ಒಂದು ಬಣ ಟಿವಿಕೆ ನೇತೃತ್ವದ ಸರ್ಕಾರಕ್ಕೆ ಬೆಂಬಲ ಘೋಷಿಸಿದೆ.
ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದಲ್ಲಿ ಎಐಎಡಿಎಂಕೆ ಪಕ್ಷವು ಡಿಎಂಕೆ ಜೊತೆಗೆ ಮೈತ್ರಿಗೆ ತೆರೆಮರೆಯ ಹುನ್ನಾರ ನಡೆಸುತ್ತಿರುವಾಗಲೇ ಈ ನಿರ್ಧಾರದಿಂದ ಸಿಡಿದು ನಿಂತ ಒಂದು ಬಣದ ನಾಯಕರು ಪಕ್ಷವನ್ನೇ ಹೋಳು ಮಾಡಿದ್ದಾರೆ.
ಎಸ್ಪಿ ವೇಲುಮಣಿ ಮತ್ತು ಸಿವಿ ಷಣ್ಮುಗಂ ಬಣದ ನಾಯಕರು ಇಂದು ಮುಖ್ಯಮಂತ್ರಿ ವಿಜಯ್ ಅವರನ್ನು ಭೇಟಿ ಮಾಡಿ, ಅವರ ನೇತೃತ್ವದ ಸರ್ಕಾರಕ್ಕೆ ತಮ್ಮ ಬೆಂಬಲ ಘೋಷಿಸಿದ್ದಾರೆ. ಷಣ್ಮುಗಂ ಬಣದಲ್ಲಿ 30 ಶಾಸಕರಿದ್ದಾರೆ ಎನ್ನಲಾಗಿದೆ.

ಪಕ್ಷವನ್ನು ಉಳಿಸಲು ಈ ನಿರ್ಧಾರ
ಪಕ್ಷದ ಭವಿಷ್ಯದ ದೃಷ್ಟಿಯಿಂದ ನಾವು ಎಐಎಡಿಎಂಕೆ ಮುಖ್ಯಸ್ಥ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರಿಗೆ ಕೌನ್ಸಿಲ್ ಸಭೆ ಕರೆಯುವಂತೆ ಒತ್ತಾಯಿಸುತ್ತೇವೆ ಎಂದು ಹೇಳಿದ್ದಾರೆ. ಪಕ್ಷದ ಉಳಿವಿನ ದೃಷ್ಟಿಯಿಂದ ಈ ನಡೆ ಅನಿವಾರ್ಯ. ನಾವು ಡಿಎಂಕೆಗೆ ವಿರುದ್ಧವಾಗಿ ಜಯಲಲಿತಾ ನೇತೃತ್ವದಲ್ಲಿ ಪಕ್ಷವನ್ನು ಸ್ಥಾಪಿಸಿದ್ದೇವೆ. 53 ವರ್ಷಗಳ ಕಾಲ ನಮ್ಮ ರಾಜಕೀಯ ಅದಕ್ಕೆ ವಿರುದ್ಧವಾಗಿತ್ತು. ನಾವು ಡಿಎಂಕೆ ಜೊತೆಗೆ ಮೈತ್ರಿ ಮಾಡಿಕೊಂಡರೆ ಎಐಎಡಿಎಂಕೆ ಅಸ್ತಿತ್ವದಲ್ಲೇ ಇರಲ್ಲ ಎಂದಿದ್ದಾರೆ.
ಚುನಾವಣೆಯ ನಂತರ ನಾವು ಯಾವುದೇ ಮೈತ್ರಿ ಇಲ್ಲದೆ ನಿಲ್ಲುತ್ತೇವೆ. ನಮ್ಮ ಪಕ್ಷವನ್ನು ಬಲಪಡಿಸುವತ್ತ ನಮ್ಮ ಗಮನ ಇರಬೇಕು. ಎಐಎಡಿಎಂಕೆ ಶಾಸಕರಾಗಿ ಆಯ್ಕೆಯಾದವರು ಪಕ್ಷದ ಬೆಳವಣಿಗೆ ದೃಷ್ಟಿಯಿಂದ ಟಿವಿಕೆಗೆ ತಮ್ಮ ಬೆಂಬಲ ನೀಡಲು ನಿರ್ಧರಿಸಿದ್ದಾರೆ ಎಂದು ವೇಲು ಮಣಿ ಮತ್ತು ಷಣ್ಮುಗಂ ತಿಳಿಸಿದ್ದಾರೆ. ಪಳನಿಸ್ವಾಮಿ ಪರವಾಗಿ 17 ಶಾಸಕರಿದ್ದರೆ, ವೇಲು ಮಣಿ ಪರವಾಗಿ 30 ಶಾಸಕರಿದ್ದಾರೆ ಎನ್ನಲಾಗುತ್ತಿದೆ. ವಿಜಯ್ ಸರ್ಕಾರ ವಿಶ್ವಾಸ ಮತ ಯಾಚನೆ ಸಂದರ್ಭದಲ್ಲಿ ವೇಲು ಮಣಿ ನೇತೃತ್ವದಲ್ಲಿ ಶಾಸಕರು ವಿಜಯ್ ಪರ ನಿಲ್ಲುವ ಸಾಧ್ಯತೆಯಿದೆ. ರಾಜ್ಯಪಾಲರ ಸೂಚನೆಯಂತೆ ಸಿಎಂ ವಿಜಯ್ ಮೇ 13ರಂದು ಸದನದಲ್ಲಿ ವಿಶ್ವಾಸಮತ ಸಾಬೀತು ಮಾಡಬೇಕಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm