ಬ್ರೇಕಿಂಗ್ ನ್ಯೂಸ್
19-05-26 01:06 pm HK News Staffer ದೇಶ - ವಿದೇಶ
ಬೆಂಗಳೂರು, ಮೇ 19: ದೇಶಾದ್ಯಂತ ವಾಹನ ಸವಾರರಿಗೆ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮತ್ತೊಮ್ಮೆ ಬೆಲೆ ಏರಿಕೆಯ ಶಾಕ್ ನೀಡಿವೆ. ಕಳೆದ ಮೇ 15ರಂದು ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಸುಮಾರು 3 ರೂ. ಹೆಚ್ಚಳವಾಗಿದ್ದ ಬೆನ್ನಲ್ಲೇ, ಇಂದು ಮತ್ತೆ ಪ್ರತಿ ಲೀಟರ್ಗೆ ಸರಾಸರಿ 90 ಪೈಸೆಯಿಂದ 96 ಪೈಸೆಯವರೆಗೆ ದರ ಏರಿಕೆಯಾಗಿದೆ. ಕೇವಲ ಐದು ದಿನಗಳ ಅಂತರದಲ್ಲಿ ಎರಡನೇ ಬಾರಿ ಇಂಧನ ದರ ಹೆಚ್ಚಳವಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಬೆಂಗಳೂರಿನಲ್ಲಿ ಹೊಸ ದರ ಎಷ್ಟು?
ಬೆಂಗಳೂರಿನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಪ್ರತಿ ಲೀಟರ್ಗೆ 94 ಪೈಸೆ ಏರಿಕೆಯಾಗಿದೆ. ಇದರೊಂದಿಗೆ ಪೆಟ್ರೋಲ್ ದರ 106.17 ರೂ.ನಿಂದ 107.16 ರೂ.ಗೆ ಏರಿಕೆಯಾದರೆ, ಡೀಸೆಲ್ ದರ 94.10 ರೂ.ನಿಂದ 95.03 ರೂ.ಗೆ ತಲುಪಿದೆ.
ಸತತ ದರ ಏರಿಕೆಯಿಂದ ವಾಹನ ಸವಾರರು ಹಾಗೂ ಮಧ್ಯಮ ವರ್ಗದ ಜನರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಜಾಗತಿಕ ಪರಿಸ್ಥಿತಿಯ ನೆಪದಲ್ಲಿ ಸರ್ಕಾರ ಜನರ ಮೇಲೆ ಹೆಚ್ಚುವರಿ ಹೊರೆ ಹಾಕಬಾರದು ಎಂದು ಆಗ್ರಹಿಸಿದ್ದಾರೆ.
ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ದರ
ದೆಹಲಿ : ಪೆಟ್ರೋಲ್ 98.64 ರೂ., ಡೀಸೆಲ್ 91.58 ರೂ.
ಮುಂಬೈ : ಪೆಟ್ರೋಲ್ 107.59 ರೂ., ಡೀಸೆಲ್ 94.08 ರೂ.
ಕೋಲ್ಕತ್ತಾ : ಪೆಟ್ರೋಲ್ 109.70 ರೂ., ಡೀಸೆಲ್ 96.07 ರೂ.
ಚೆನ್ನೈ : ಪೆಟ್ರೋಲ್ 104.49 ರೂ., ಡೀಸೆಲ್ 96.11 ರೂ.
ಜನಜೀವನದ ಮೇಲೆ ನೇರ ಪರಿಣಾಮ
ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಕೇವಲ ವಾಹನ ಸವಾರರನ್ನಷ್ಟೇ ಅಲ್ಲ, ಸಾಮಾನ್ಯ ಜನರ ದೈನಂದಿನ ಬದುಕಿನ ಮೇಲೂ ನೇರ ಪರಿಣಾಮ ಬೀರುತ್ತದೆ. ಸರಕು ಸಾಗಣೆ ವೆಚ್ಚ ಹೆಚ್ಚಾದಂತೆ ತರಕಾರಿ, ಆಹಾರ ಪದಾರ್ಥಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ.
ಬಸ್, ಟ್ಯಾಕ್ಸಿ, ಆಟೋ ದರ ಹೆಚ್ಚಳದ ಆತಂಕವೂ ಎದುರಾಗಿದ್ದು, ಸಣ್ಣ ವ್ಯಾಪಾರಿಗಳು ಮತ್ತು ಸಾರಿಗೆ ಕ್ಷೇತ್ರದವರ ಮೇಲೆ ಹೆಚ್ಚುವರಿ ಒತ್ತಡ ಸೃಷ್ಟಿಯಾಗಿದೆ. ನಿರಂತರ ಇಂಧನ ದರ ಏರಿಕೆಯಿಂದ ಹಣದುಬ್ಬರ ಮತ್ತಷ್ಟು ಹೆಚ್ಚುವ ಭೀತಿ ವ್ಯಕ್ತವಾಗಿದೆ.
ಜಾಗತಿಕ ತೈಲ ಬಿಕ್ಕಟ್ಟು ಕಾರಣವೇ?
ಪಶ್ಚಿಮ ಏಷ್ಯಾದ ಯುದ್ಧ ಪರಿಸ್ಥಿತಿ ಹಾಗೂ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯನ್ನು ಪ್ರಮುಖ ಕಾರಣವೆಂದು ಹೇಳಲಾಗುತ್ತಿದೆ. ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಾದಂತೆ ತೈಲ ಪೂರೈಕೆ ಮೇಲೆ ಪರಿಣಾಮ ಬೀಳುವ ಸಾಧ್ಯತೆ ಇರುವುದರಿಂದ ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆ ಅಸ್ಥಿರತೆ ಮುಂದುವರಿದಿದೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm