ಬ್ರೇಕಿಂಗ್ ನ್ಯೂಸ್
19-05-26 01:06 pm HK News Staffer ದೇಶ - ವಿದೇಶ
ಬೆಂಗಳೂರು, ಮೇ 19: ದೇಶಾದ್ಯಂತ ವಾಹನ ಸವಾರರಿಗೆ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮತ್ತೊಮ್ಮೆ ಬೆಲೆ ಏರಿಕೆಯ ಶಾಕ್ ನೀಡಿವೆ. ಕಳೆದ ಮೇ 15ರಂದು ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಸುಮಾರು 3 ರೂ. ಹೆಚ್ಚಳವಾಗಿದ್ದ ಬೆನ್ನಲ್ಲೇ, ಇಂದು ಮತ್ತೆ ಪ್ರತಿ ಲೀಟರ್ಗೆ ಸರಾಸರಿ 90 ಪೈಸೆಯಿಂದ 96 ಪೈಸೆಯವರೆಗೆ ದರ ಏರಿಕೆಯಾಗಿದೆ. ಕೇವಲ ಐದು ದಿನಗಳ ಅಂತರದಲ್ಲಿ ಎರಡನೇ ಬಾರಿ ಇಂಧನ ದರ ಹೆಚ್ಚಳವಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಬೆಂಗಳೂರಿನಲ್ಲಿ ಹೊಸ ದರ ಎಷ್ಟು?
ಬೆಂಗಳೂರಿನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಪ್ರತಿ ಲೀಟರ್ಗೆ 94 ಪೈಸೆ ಏರಿಕೆಯಾಗಿದೆ. ಇದರೊಂದಿಗೆ ಪೆಟ್ರೋಲ್ ದರ 106.17 ರೂ.ನಿಂದ 107.16 ರೂ.ಗೆ ಏರಿಕೆಯಾದರೆ, ಡೀಸೆಲ್ ದರ 94.10 ರೂ.ನಿಂದ 95.03 ರೂ.ಗೆ ತಲುಪಿದೆ.
ಸತತ ದರ ಏರಿಕೆಯಿಂದ ವಾಹನ ಸವಾರರು ಹಾಗೂ ಮಧ್ಯಮ ವರ್ಗದ ಜನರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಜಾಗತಿಕ ಪರಿಸ್ಥಿತಿಯ ನೆಪದಲ್ಲಿ ಸರ್ಕಾರ ಜನರ ಮೇಲೆ ಹೆಚ್ಚುವರಿ ಹೊರೆ ಹಾಕಬಾರದು ಎಂದು ಆಗ್ರಹಿಸಿದ್ದಾರೆ.
ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ದರ
ದೆಹಲಿ : ಪೆಟ್ರೋಲ್ 98.64 ರೂ., ಡೀಸೆಲ್ 91.58 ರೂ.
ಮುಂಬೈ : ಪೆಟ್ರೋಲ್ 107.59 ರೂ., ಡೀಸೆಲ್ 94.08 ರೂ.
ಕೋಲ್ಕತ್ತಾ : ಪೆಟ್ರೋಲ್ 109.70 ರೂ., ಡೀಸೆಲ್ 96.07 ರೂ.
ಚೆನ್ನೈ : ಪೆಟ್ರೋಲ್ 104.49 ರೂ., ಡೀಸೆಲ್ 96.11 ರೂ.
ಜನಜೀವನದ ಮೇಲೆ ನೇರ ಪರಿಣಾಮ
ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಕೇವಲ ವಾಹನ ಸವಾರರನ್ನಷ್ಟೇ ಅಲ್ಲ, ಸಾಮಾನ್ಯ ಜನರ ದೈನಂದಿನ ಬದುಕಿನ ಮೇಲೂ ನೇರ ಪರಿಣಾಮ ಬೀರುತ್ತದೆ. ಸರಕು ಸಾಗಣೆ ವೆಚ್ಚ ಹೆಚ್ಚಾದಂತೆ ತರಕಾರಿ, ಆಹಾರ ಪದಾರ್ಥಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ.
ಬಸ್, ಟ್ಯಾಕ್ಸಿ, ಆಟೋ ದರ ಹೆಚ್ಚಳದ ಆತಂಕವೂ ಎದುರಾಗಿದ್ದು, ಸಣ್ಣ ವ್ಯಾಪಾರಿಗಳು ಮತ್ತು ಸಾರಿಗೆ ಕ್ಷೇತ್ರದವರ ಮೇಲೆ ಹೆಚ್ಚುವರಿ ಒತ್ತಡ ಸೃಷ್ಟಿಯಾಗಿದೆ. ನಿರಂತರ ಇಂಧನ ದರ ಏರಿಕೆಯಿಂದ ಹಣದುಬ್ಬರ ಮತ್ತಷ್ಟು ಹೆಚ್ಚುವ ಭೀತಿ ವ್ಯಕ್ತವಾಗಿದೆ.
ಜಾಗತಿಕ ತೈಲ ಬಿಕ್ಕಟ್ಟು ಕಾರಣವೇ?
ಪಶ್ಚಿಮ ಏಷ್ಯಾದ ಯುದ್ಧ ಪರಿಸ್ಥಿತಿ ಹಾಗೂ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯನ್ನು ಪ್ರಮುಖ ಕಾರಣವೆಂದು ಹೇಳಲಾಗುತ್ತಿದೆ. ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಾದಂತೆ ತೈಲ ಪೂರೈಕೆ ಮೇಲೆ ಪರಿಣಾಮ ಬೀಳುವ ಸಾಧ್ಯತೆ ಇರುವುದರಿಂದ ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆ ಅಸ್ಥಿರತೆ ಮುಂದುವರಿದಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm