ಬ್ರೇಕಿಂಗ್ ನ್ಯೂಸ್
22-05-26 05:57 pm HK News Staffer ದೇಶ - ವಿದೇಶ
ನವದೆಹಲಿ, ಮೇ 22: ಚುನಾವಣಾ ಆಯೋಗವು ಜೂನ್ 18ರಂದು ಹತ್ತು ರಾಜ್ಯಗಳ ವ್ಯಾಪ್ತಿಯನ್ನೊಳಗೊಂಡ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಸುವುದಾಗಿ ಘೋಷಿಸಿದೆ. ಜೊತೆಗೆ ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ಎರಡು ಉಪ ಚುನಾವಣೆಗಳನ್ನೂ ನಡೆಸಲಾಗುವುದು ಎಂದು ತಿಳಿಸಿದೆ.
ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಬಹು ನಿರೀಕ್ಷಿತ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಿಸಿದ್ದು, ಜೂನ್ 18ರಂದು ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಸಲು ಜೂನ್ 8 ಕೊನೆಯ ದಿನಾಂಕವಾಗಿರುತ್ತದೆ. 24 ರಾಜ್ಯಸಭಾ ಸದಸ್ಯರ ಅವಧಿ ಜೂನ್ 21ರಿಂದ ಜುಲೈ 19ರ ನಡುವೆ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಆ ಸ್ಥಾನಗಳನ್ನು ಭರ್ತಿ ಮಾಡಲು ಆಯೋಗ ಮುಂದಾಗಿದೆ ಎಂದು ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.
ಆಂಧ್ರಪ್ರದೇಶ, ಗುಜರಾತ್ ಮತ್ತು ಕರ್ನಾಟಕದಲ್ಲಿ ತಲಾ ನಾಲ್ಕು ಸದಸ್ಯರನ್ನು ಆಯ್ಕೆ ಮಾಡಲಾಗುತ್ತದೆ. ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ತಲಾ ಮೂರು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಜಾರ್ಖಂಡ್ನಲ್ಲಿ ಎರಡು ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಮಣಿಪುರ, ಮೇಘಾಲಯ, ಅರುಣಾಚಲ ಪ್ರದೇಶ ಮತ್ತು ಮಿಜೋರಾಂ ರಾಜ್ಯಗಳಲ್ಲಿ ತಲಾ ಒಂದು ಸದಸ್ಯರನ್ನು ಆಯ್ಕೆ ಮಾಡಲಾಗುತ್ತದೆ.
ಚುನಾವಣೆ ಘೋಷಣೆ ಬೆನ್ನಲ್ಲೇ ರಾಜ್ಯಸಭೆ ಸದಸ್ಯರಾಗಲು ಆಕಾಂಕ್ಷಿತರ ಲಾಬಿ ಶುರುವಾಗಿದೆ. ಕರ್ನಾಟಕದಲ್ಲಿ ನಾಲ್ಕು ಸ್ಥಾನಗಳ ಪೈಕಿ ಅತಿ ಹೆಚ್ಚು ವಿಧಾನಸಭೆ ಸ್ಥಾನಗಳನ್ನು ಹೊಂದಿರುವ ಕಾಂಗ್ರೆಸ್ ಮೂರು ಮತ್ತು ಬಿಜೆಪಿ ಒಂದು ಸ್ಥಾನ ಗೆಲ್ಲಲು ಅವಕಾಶ ಇರುತ್ತದೆ. ಬಿಜೆಪಿ- ಜೆಡಿಎಸ್ ಮೈತ್ರಿಯಿಂದಾಗಿ ಹಾಲಿ ರಾಜ್ಯಸಭೆ ಸದಸ್ಯರೂ ಆಗಿರುವ ದೇವೇಗೌಡ ಅವರನ್ನು ಮುಂದುವರಿಸುವ ಸಾಧ್ಯತೆಯೂ ಇದೆ. ಅಂದಹಾಗೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಗೆ ರಾಜ್ಯಸಭೆ ಚುನಾವಣೆ ಮತ್ತೆ ತಡೆಯಾಗಲಿದ್ದು ದೆಹಲಿಗೆ ತೆರಳಿ ಲಾಬಿ ನಡೆಸಲು ಮುಂದಾಗಿದ್ದ ತಂಡಕ್ಕೆ ಹಿನ್ನಡೆಯಾಗಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm