ಬ್ರೇಕಿಂಗ್ ನ್ಯೂಸ್
25-05-26 10:19 am HK News Staffer ದೇಶ - ವಿದೇಶ
ನವದೆಹಲಿ, ಮೇ 25: ದೇಶದ ಜನರಿಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಇಂಧನ ಶಾಕ್ ನೀಡಿದ್ದು, ಸೋಮವಾರ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಮತ್ತೆ ಏರಿಕೆ ಮಾಡಲಾಗಿದೆ. ಕಳೆದ 11 ದಿನಗಳಲ್ಲೇ ಇದು ನಾಲ್ಕನೇ ಬಾರಿ ಇಂಧನ ದರ ಏರಿಕೆಯಾಗಿದ್ದು, ವಾಹನ ಸವಾರರು ಹಾಗೂ ಸಾಮಾನ್ಯ ಜನರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಾರಿ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸುಮಾರು 3 ರೂ.ವರೆಗೆ ಹೆಚ್ಚಳ ಮಾಡಲಾಗಿದೆ.
ಇದರೊಂದಿಗೆ ಸಿಎನ್ಜಿ ದರವನ್ನೂ ಪ್ರತಿ ಕೆಜಿಗೆ 1 ರೂ. ಏರಿಕೆ ಮಾಡಲಾಗಿದ್ದು, ಇತ್ತೀಚಿನ ದಿನಗಳಲ್ಲಿ ಇದು ಮೂರನೇ ಬಾರಿಗೆ ಸಿಎನ್ಜಿ ದರ ಏರಿಕೆಯಾಗಿದೆ. ಒಟ್ಟಾರೆ ಸಿಎನ್ಜಿ ದರದಲ್ಲಿ ಸುಮಾರು 4 ರೂ.ಗಳಷ್ಟು ಹೆಚ್ಚಳ ಕಂಡುಬಂದಿದೆ.
ಹೊಸ ದರ ಪರಿಷ್ಕರಣೆಯ ನಂತರ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 110.89 ರೂ.ಗೆ ಏರಿಕೆಯಾದರೆ, ಡೀಸೆಲ್ ಬೆಲೆ 98.80 ರೂ. ತಲುಪಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ 102.12 ರೂ. ಹಾಗೂ ಡೀಸೆಲ್ 95.20 ರೂ. ಆಗಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ 113.51 ರೂ. ಮತ್ತು ಡೀಸೆಲ್ 99.82 ರೂ. ದಾಖಲಾಗಿದೆ. ಮುಂಬೈನಲ್ಲಿ ಪೆಟ್ರೋಲ್ ದರ 111.21 ರೂ. ಆಗಿದ್ದರೆ, ಡೀಸೆಲ್ 97.83 ರೂ. ತಲುಪಿದೆ. ಚೆನ್ನೈನಲ್ಲಿ ಪೆಟ್ರೋಲ್ 107.77 ರೂ. ಮತ್ತು ಡೀಸೆಲ್ 99.55 ರೂ. ಆಗಿದೆ.
ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವುದು ಹಾಗೂ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿಯುತ್ತಿರುವುದರಿಂದ ತೈಲ ಆಮದು ವೆಚ್ಚ ಹೆಚ್ಚಾಗಿದೆ. ಇದೇ ಕಾರಣದಿಂದ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಭಾರೀ ನಷ್ಟ ಅನುಭವಿಸುತ್ತಿದ್ದು, ಆ ನಷ್ಟವನ್ನು ತಗ್ಗಿಸಲು ಬೆಲೆ ಪರಿಷ್ಕರಣೆ ಅನಿವಾರ್ಯವಾಗಿದೆ ಎಂದು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿದೆ.
ಮೇ 15ರಂದು ಮೊದಲ ಬಾರಿಗೆ ಏಕಾಏಕಿ ಪ್ರತಿ ಲೀಟರ್ಗೆ ಸುಮಾರು 3 ರೂ.ಗಳಷ್ಟು ಏರಿಕೆ ಮಾಡಲಾಗಿತ್ತು. ಅದಾದ ಬಳಿಕ ಸತತವಾಗಿ ದರ ಏರಿಕೆ ನಡೆಯುತ್ತಿದ್ದು, ಇದರ ಪರಿಣಾಮ ಸಾರಿಗೆ ವೆಚ್ಚ, ಆಹಾರ ಪದಾರ್ಥಗಳ ಬೆಲೆ ಹಾಗೂ ದಿನನಿತ್ಯದ ಬದುಕಿನ ಮೇಲೂ ಬೀಳುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm