ಬ್ರೇಕಿಂಗ್ ನ್ಯೂಸ್
26-05-26 12:54 pm HK News Staffer ದೇಶ - ವಿದೇಶ
ಬೆಂಗಳೂರು, ಮೇ 26: ಮುಂದಿನ ತಿಂಗಳು ವಿಧಾನ ಪರಿಷತ್ಗೆ ನಡೆಯಲಿರುವ ಚುನಾವಣೆಗೆ ಆಡಳಿತಾರೂಢ ಕಾಂಗ್ರೆಸ್ನಲ್ಲಿ ಪೈಪೋಟಿ ಶುರುವಾಗಿದೆ. ಜೂನ್, ಜುಲೈನಲ್ಲಿ ಖಾಲಿಯಾಗುವ 9 ಸ್ಥಾನಗಳಿಗೆ ಆಯ್ಕೆಗೊಳ್ಳಲು ಆಕಾಂಕ್ಷಿಗಳ ಪಟ್ಟಿ ಮೂರು ಡಜನ್ ಗಿಂತಲೂ ಹೆಚ್ಚಿದೆ. ಇದಕ್ಕಾಗಿ ಲಾಬಿ ನಡೆಸಲು ಆಕಾಂಕ್ಷಿಗಳ ತಂಡವೊಂದು ಸೋಮವಾರವೇ ದೆಹಲಿಗೆ ತೆರಳಿದೆ.
ನಾಮನಿರ್ದೇಶನ ಮತ್ತು ವಿಧಾನಸಭೆಯಿಂದ ಆಯ್ಕೆಯಾಗಿರುವ 12 ಸದಸ್ಯರು ನಿವೃತ್ತಿಯಾಗಲಿದ್ದಾರೆ. ಈ ಪೈಕಿ 9 ಸ್ಥಾನಗಳು ಕಾಂಗ್ರೆಸ್ ಪಾಲಾಗಲಿವೆ. ಪರಿಷತ್ ಸ್ಥಾನಗಳು ಖಾಲಿಯಾದ ಮೇಲೆ ಹೊಸ ಆಯ್ಕೆಗೆ ಸರ್ಕಾರ ಅಧಿಸೂಚನೆ ಹೊರಡಿಸಲಿದೆ. ಆ ನಂತರ ಪ್ರಕ್ರಿಯೆ ಶುರುವಾಗಲಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಹಲವರು ಮನವಿ ಸಲ್ಲಿಸಿದ್ದಾರೆ. ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿಗೆ ಮನವಿ ಸಲ್ಲಿಸಲು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಪರಿಷತ್ತಿಗೆ ನಾಮ ನಿರ್ದೇಶನವಾಗಿದ್ದ ಬಿಜೆಪಿಯ ಎಚ್. ವಿಶ್ವನಾಥ್, ಭಾರತಿ ಶೆಟ್ಟಿ, ಶಾಂತರಾಮ್ ಸಿದ್ಧಿ, ಡಾ.ತಳವಾರ ಸಾಬಣ್ಣ, ಕಾಂಗ್ರೆಸ್ನ ರಮೇಶ್ ಬಾಬು ಜುಲೈನಲ್ಲಿ ನಿವೃತ್ತಿಯಾಗಲಿದ್ದಾರೆ. ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಜೆಡಿಎಸ್ನ ಗೋವಿಂದರಾಜು, ಕಾಂಗ್ರೆಸ್ನ ನಸೀರ್ ಅಹ್ಮದ್, ಬಿಜೆಪಿಯ ಎನ್. ನಾಗರಾಜು (ಎಂಟಿಬಿ), ಕೆ.ಪ್ರತಾಪ್ ಸಿಂಹ ನಾಯಕ್, ಸುನೀಲ್ ವಲ್ಯಾಪುರೆ, ಕಾಂಗ್ರೆಸ್ನ ಬಿ.ಕೆ.ಹರಿಪ್ರಸಾದ್ ಮತ್ತು ತಿಪ್ಪಣ್ಣ ಕಮಕನೂರ ಜೂನ್ನಲ್ಲಿ ನಿವೃತ್ತಿಯಾಗಲಿದ್ದಾರೆ.
ಇದೇ ವೇಳೆ, ಈ ಸ್ಥಾನಗಳಿಗೆ ಆಯ್ಕೆಗೊಳ್ಳಲು ಕಾಂಗ್ರೆಸ್ ಕಡೆಯಿಂದ ಎ.ಎನ್.ನಟರಾಜ್ಗೌಡ, ಬಿ.ಆರ್.ನಾಯ್ಡು, ಅನಿಲ್ ತಡ್ಕಲ್, ಕಾಂತನಾಯಕ್, ನಟರಾಜ್, ರಾಜೇಶ್ವರಿ ಪಾಟೀಲ್, ಪುಷ್ಪಾ ಅಮರನಾಥ್, ತಿಪ್ಪೇಸ್ವಾಮಿ, ಸುನೀಲ್ ಹನುಮಣ್ಣವರ್, ಮೆಹರೋಜ್ ಖಾನ್, ನಿಜಾಮ್ ಫೈಜಾಕ್, ಎಂ.ವೆಂಕಟೇಶ್ ಮುಂಚೂಣಿಯಲ್ಲಿ ಲಾಬಿ ನಡೆಸುತ್ತಿದ್ದಾರೆ. ನಿವೃತ್ತಿ ಬಳಿಕ ಮರು ಆಯ್ಕೆ ಬಯಸುವವರ ಪಟ್ಟಿಯಲ್ಲಿ ರಮೇಶ್ ಬಾಬು, ಬಿ.ಕೆ ಹರಿಪ್ರಸಾದ್ ಮುಂದಿದ್ದಾರೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm