ಬ್ರೇಕಿಂಗ್ ನ್ಯೂಸ್
27-05-26 09:17 pm HK News Desk ದೇಶ - ವಿದೇಶ
ಕೊಲ್ಕತ್ತಾ, ಮೇ 27: ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿರುವ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಶಾಸಕರಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಪಕ್ಷ ವಿಭಜನೆಯಾಗುವ ಸ್ಥಿತಿ ಎದುರಾಗಿದೆ.
ಟಿಎಂಸಿಯ ಸುಮಾರು 20 ಸಂಸದರು ಬಿಜೆಪಿಯೊಂದಿಗೆ ಸಂಪರ್ಕದಲ್ಲಿದ್ದಾರೆ ಮತ್ತು ನಮ್ಮ ಪಕ್ಷದ ಹೈಕಮಾಂಡ್ ಒಪ್ಪಿಗೆ ನೀಡಿದರೆ ಅವರು ಕೇಸರಿ ಪಕ್ಷ ಸೇರಲು ಸಿದ್ಧರಿದ್ದಾರೆ ಎಂದು ಬಿಜೆಪಿಯ ಹಿರಿಯ ನಾಯಕ ಸೌಮಿತ್ರ ಖಾನ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
"ಬಿಜೆಪಿ ಕೇಂದ್ರ ನಾಯರು ಒಮ್ಮೆ ಹೇಳಿದರೆ, ಟಿಎಂಸಿ ಇನ್ನು ಮುಂದೆ ಪಕ್ಷವಾಗಿ ಉಳಿಯುವುದಿಲ್ಲ. ಎಲ್ಲರೂ ಬರಲು ಸಿದ್ಧರಿದ್ದಾರೆ. ಸುಮಾರು 50 ಟಿಎಂಸಿ ಶಾಸಕರು ಅವರ ಪಕ್ಷದ ನಾಯಕರ ಬಗ್ಗೆ ಅತೃಪ್ತರಾಗಿದ್ದಾರೆ ಮತ್ತು 20 ಸಂಸದರು ಬಿಜೆಪಿ ಸೇರಲು ಸಿದ್ಧರಿದ್ದಾರೆ" ಎಂದು ಖಾನ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.
ಬರಾಸತ್ ಕ್ಷೇತ್ರದ ಟಿಎಂಸಿ ಸಂಸದೆಯಾದ ಕಾಕೋಲಿ ಘೋಷ್ ದಸ್ತಿದಾರ್ ಮತ್ತು ಇನ್ನೂ ಸುಮಾರು ಆರು ಟಿಎಂಸಿ ಶಾಸಕರು ರಾಜ್ಯದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರೊಂದಿಗಿನ ಆಡಳಿತಾತ್ಮಕ ಸಭೆಯಲ್ಲಿ ಪಾಲ್ಗೊಂಡಿರುವುದು ಚರ್ಚೆಗೆ ಕಾರಣವಾಗಿತ್ತು. ಇದರ ನಂತರ ಪಕ್ಷದೊಳಗೆ ಅಸಮಾಧಾನ ಹೊಗೆಯಾಡಿತ್ತು. ಕಾಕೋಲಿ ಅವರನ್ನು ಟಿಎಂಸಿ ಲೋಕಸಭೆಯಲ್ಲಿ ಪಕ್ಷದ ಮುಖ್ಯ ಸಚೇತಕ ಸ್ಥಾನದಿಂದ ತೆಗೆದುಹಾಕಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಅವರಿಗೆ ವೈ-ಕೆಟಗರಿ ಭದ್ರತೆ ನೀಡಿದೆ. ಇದು ರಾಜಕೀಯ ವಲಯದಲ್ಲಿ ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ.
ಪ್ರಸ್ತುತ, ಪಶ್ಚಿಮ ಬಂಗಾಳದಿಂದ ಟಿಎಂಸಿ 29 ಲೋಕಸಭಾ ಸಂಸದರನ್ನು ಹೊಂದಿದ್ದರೆ, ಬಿಜೆಪಿ 12 ಮತ್ತು ಕಾಂಗ್ರೆಸ್ ಒಬ್ಬರನ್ನು ಹೊಂದಿದೆ. ಇದೇ ವೇಳೆ, ತೃಣಮೂಲ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರನ್ನು ಬಿಜೆಪಿ ನಾಯಕರು "ಪಾಪಿ" ಎಂದು ಟೀಕಿಸಿದ್ದು, ಈ "ಪಾಪಿಗಳು ಜೈಲಿಗೆ ಹೋಗಬೇಕಾಗುತ್ತದೆ" ಎಂದು ಎಚ್ಚರಿಸಿದ್ದಾರೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm