ಬ್ರೇಕಿಂಗ್ ನ್ಯೂಸ್
29-05-26 06:17 pm HK News Staffer ದೇಶ - ವಿದೇಶ
ಕೋಯಿಕ್ಕೋಡ್, ಮೇ 29: ಮರಣದಂಡನೆ ಶಿಕ್ಷೆಗೆ ಗುರಿಯಾಗಿ ಕಳೆದ 20 ವರ್ಷಗಳಿಂದ ಸೌದಿ ಅರೇಬಿಯಾದ ಜೈಲಿನಲ್ಲಿ ಬಂಧಿಯಾಗಿದ್ದ ಕೇರಳದ ಅಬ್ದುಲ್ ರಹೀಂ ಕೊನೆಗೂ ತಾಯ್ನಾಡಿಗೆ ಮರಳಿದ್ದಾರೆ. ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಕುಟುಂಬದವರನ್ನು ಸೇರಿಕೊಂಡಿರುವ ರಹೀಂ ಅವರ ಮರಳುವಿಕೆ ಭಾವುಕ ಕ್ಷಣಗಳಿಗೆ ಸಾಕ್ಷಿಯಾಗಿದೆ.
2006ರಲ್ಲಿ ಉದ್ಯೋಗ ಅರಸಿ ಸೌದಿ ಅರೇಬಿಯಾದ ರಾಜಧಾನಿ ರಿಯಾದ್ಗೆ ತೆರಳಿದ್ದ ರಹೀಂ, ಅಲ್ಲಿ ತಮ್ಮ ಮಾಲೀಕನ 17 ವರ್ಷದ ಪುತ್ರನ ಆರೈಕೆಯ ಜವಾಬ್ದಾರಿ ವಹಿಸಿಕೊಂಡಿದ್ದರು. ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ಆ ಬಾಲಕ ಕೃತಕ ಉಸಿರಾಟ ವ್ಯವಸ್ಥೆಯ ನೆರವಿನಿಂದ ಬದುಕುತ್ತಿದ್ದ. ಒಂದು ದಿನ ವಾಹನದಲ್ಲಿ ಕರೆದೊಯ್ಯುವಾಗ ಉಸಿರಾಟದ ಉಪಕರಣ ಕಳಚಿಬಿದ್ದ ಪರಿಣಾಮ ಬಾಲಕ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ರಹೀಂ ಅವರನ್ನು ಬಂಧಿಸಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ 2011ರಲ್ಲಿ ರಹೀಂ ಅವರಿಗೆ ಮರಣದಂಡನೆ ವಿಧಿಸಿತ್ತು. ಬಳಿಕ ಮೃತ ಬಾಲಕನ ಕುಟುಂಬವು 2024ರಲ್ಲಿ ₹34 ಕೋಟಿ ಬ್ಲಡ್ಮನಿ ನೀಡಿದರೆ ಕ್ಷಮಿಸಲು ಒಪ್ಪಿಗೆ ಸೂಚಿಸಿತು. ಆದರೆ ಅಷ್ಟೊಂದು ದೊಡ್ಡ ಮೊತ್ತವನ್ನು ಪಾವತಿಸುವ ಸಾಮರ್ಥ್ಯ ರಹೀಂ ಅವರ ಕುಟುಂಬಕ್ಕಿರಲಿಲ್ಲ.



ಈ ಹಿನ್ನೆಲೆಯಲ್ಲಿ ಕುಟುಂಬ ಸಾರ್ವಜನಿಕರ ನೆರವಿಗಾಗಿ ಮನವಿ ಮಾಡಿತ್ತು. ಜನರು, ಸಾಮಾಜಿಕ ಸಂಘಟನೆಗಳು ಹಾಗೂ ದಾನಿಗಳ ಸಹಕಾರದಿಂದ ಸುಮಾರು ₹47 ಕೋಟಿ ಸಂಗ್ರಹವಾಗಿದ್ದು, ಅದರಲ್ಲಿ ₹34 ಕೋಟಿಯನ್ನು ಮೃತ ಬಾಲಕನ ಕುಟುಂಬಕ್ಕೆ ಬ್ಲಡ್ಮನಿಯಾಗಿ ಪಾವತಿಸಲಾಯಿತು. ಉಳಿದ ಹಣವನ್ನು ಕಾನೂನು ಮತ್ತು ಇತರೆ ವೆಚ್ಚಗಳಿಗೆ ಬಳಸಲಾಗಿದೆ ಎಂದು ವರದಿಯಾಗಿದೆ.
20 ವರ್ಷಗಳ ಸುದೀರ್ಘ ಸೆರೆವಾಸದ ಬಳಿಕ ರಹೀಂ ಮೇ 20ರಂದು ಜೈಲಿನಿಂದ ಬಿಡುಗಡೆಯಾಗಿದ್ದು, ಗುರುವಾರ ಬೆಳಗ್ಗೆ ಕಲ್ಲಿಕೋಟೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ವೇಳೆ ಕುಟುಂಬಸ್ಥರು, ಸ್ನೇಹಿತರು ಹಾಗೂ ಬೆಂಬಲಿಗರು ಭಾವಪೂರ್ಣ ಸ್ವಾಗತ ಕೋರಿದರು.
ತಾವು ಜೀವಂತವಾಗಿ ತಾಯ್ನಾಡಿಗೆ ಮರಳಲು ನೆರವಾದ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸಿದ ರಹೀಂ, "ಈ ಬೆಂಬಲ ಮತ್ತು ಪ್ರಾರ್ಥನೆಗಳನ್ನು ಜೀವನಪೂರ್ತಿ ಮರೆಯುವುದಿಲ್ಲ" ಎಂದು ಹೇಳಿದ್ದಾರೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm