ಬ್ರೇಕಿಂಗ್ ನ್ಯೂಸ್
29-05-26 06:17 pm HK News Staffer ದೇಶ - ವಿದೇಶ
ಕೋಯಿಕ್ಕೋಡ್, ಮೇ 29: ಮರಣದಂಡನೆ ಶಿಕ್ಷೆಗೆ ಗುರಿಯಾಗಿ ಕಳೆದ 20 ವರ್ಷಗಳಿಂದ ಸೌದಿ ಅರೇಬಿಯಾದ ಜೈಲಿನಲ್ಲಿ ಬಂಧಿಯಾಗಿದ್ದ ಕೇರಳದ ಅಬ್ದುಲ್ ರಹೀಂ ಕೊನೆಗೂ ತಾಯ್ನಾಡಿಗೆ ಮರಳಿದ್ದಾರೆ. ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಕುಟುಂಬದವರನ್ನು ಸೇರಿಕೊಂಡಿರುವ ರಹೀಂ ಅವರ ಮರಳುವಿಕೆ ಭಾವುಕ ಕ್ಷಣಗಳಿಗೆ ಸಾಕ್ಷಿಯಾಗಿದೆ.
2006ರಲ್ಲಿ ಉದ್ಯೋಗ ಅರಸಿ ಸೌದಿ ಅರೇಬಿಯಾದ ರಾಜಧಾನಿ ರಿಯಾದ್ಗೆ ತೆರಳಿದ್ದ ರಹೀಂ, ಅಲ್ಲಿ ತಮ್ಮ ಮಾಲೀಕನ 17 ವರ್ಷದ ಪುತ್ರನ ಆರೈಕೆಯ ಜವಾಬ್ದಾರಿ ವಹಿಸಿಕೊಂಡಿದ್ದರು. ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ಆ ಬಾಲಕ ಕೃತಕ ಉಸಿರಾಟ ವ್ಯವಸ್ಥೆಯ ನೆರವಿನಿಂದ ಬದುಕುತ್ತಿದ್ದ. ಒಂದು ದಿನ ವಾಹನದಲ್ಲಿ ಕರೆದೊಯ್ಯುವಾಗ ಉಸಿರಾಟದ ಉಪಕರಣ ಕಳಚಿಬಿದ್ದ ಪರಿಣಾಮ ಬಾಲಕ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ರಹೀಂ ಅವರನ್ನು ಬಂಧಿಸಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ 2011ರಲ್ಲಿ ರಹೀಂ ಅವರಿಗೆ ಮರಣದಂಡನೆ ವಿಧಿಸಿತ್ತು. ಬಳಿಕ ಮೃತ ಬಾಲಕನ ಕುಟುಂಬವು 2024ರಲ್ಲಿ ₹34 ಕೋಟಿ ಬ್ಲಡ್ಮನಿ ನೀಡಿದರೆ ಕ್ಷಮಿಸಲು ಒಪ್ಪಿಗೆ ಸೂಚಿಸಿತು. ಆದರೆ ಅಷ್ಟೊಂದು ದೊಡ್ಡ ಮೊತ್ತವನ್ನು ಪಾವತಿಸುವ ಸಾಮರ್ಥ್ಯ ರಹೀಂ ಅವರ ಕುಟುಂಬಕ್ಕಿರಲಿಲ್ಲ.



ಈ ಹಿನ್ನೆಲೆಯಲ್ಲಿ ಕುಟುಂಬ ಸಾರ್ವಜನಿಕರ ನೆರವಿಗಾಗಿ ಮನವಿ ಮಾಡಿತ್ತು. ಜನರು, ಸಾಮಾಜಿಕ ಸಂಘಟನೆಗಳು ಹಾಗೂ ದಾನಿಗಳ ಸಹಕಾರದಿಂದ ಸುಮಾರು ₹47 ಕೋಟಿ ಸಂಗ್ರಹವಾಗಿದ್ದು, ಅದರಲ್ಲಿ ₹34 ಕೋಟಿಯನ್ನು ಮೃತ ಬಾಲಕನ ಕುಟುಂಬಕ್ಕೆ ಬ್ಲಡ್ಮನಿಯಾಗಿ ಪಾವತಿಸಲಾಯಿತು. ಉಳಿದ ಹಣವನ್ನು ಕಾನೂನು ಮತ್ತು ಇತರೆ ವೆಚ್ಚಗಳಿಗೆ ಬಳಸಲಾಗಿದೆ ಎಂದು ವರದಿಯಾಗಿದೆ.
20 ವರ್ಷಗಳ ಸುದೀರ್ಘ ಸೆರೆವಾಸದ ಬಳಿಕ ರಹೀಂ ಮೇ 20ರಂದು ಜೈಲಿನಿಂದ ಬಿಡುಗಡೆಯಾಗಿದ್ದು, ಗುರುವಾರ ಬೆಳಗ್ಗೆ ಕಲ್ಲಿಕೋಟೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ವೇಳೆ ಕುಟುಂಬಸ್ಥರು, ಸ್ನೇಹಿತರು ಹಾಗೂ ಬೆಂಬಲಿಗರು ಭಾವಪೂರ್ಣ ಸ್ವಾಗತ ಕೋರಿದರು.
ತಾವು ಜೀವಂತವಾಗಿ ತಾಯ್ನಾಡಿಗೆ ಮರಳಲು ನೆರವಾದ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸಿದ ರಹೀಂ, "ಈ ಬೆಂಬಲ ಮತ್ತು ಪ್ರಾರ್ಥನೆಗಳನ್ನು ಜೀವನಪೂರ್ತಿ ಮರೆಯುವುದಿಲ್ಲ" ಎಂದು ಹೇಳಿದ್ದಾರೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm