ಬ್ರೇಕಿಂಗ್ ನ್ಯೂಸ್
06-06-26 10:42 pm HK News Desk ದೇಶ - ವಿದೇಶ
ಕಾಸರಗೋಡು, ಜೂನ್ 6: ಕಾಸರಗೋಡು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು ಕಲ್ಲಿನ ತಡೆಗೋಡೆ ಕುಸಿದು ಬಿದ್ದು ಇಬ್ಬರು ಸಣ್ಣ ಬಾಲಕರು ಮೃತಪಟ್ಟ ಘಟನೆ ದೇಲಂಪಾಡಿ ಪಂಚಾಯತ್ ವ್ಯಾಪ್ತಿಯ ಅಡೂರಿನಲ್ಲಿ ನಡೆದಿದೆ.
ಮೃತರನ್ನು ಸ್ಥಳೀಯ ನಿವಾಸಿ ಅಬುಬಕರ್ ಮತ್ತು ಸೌಧಾ ದಂಪತಿಯ ಮಕ್ಕಳಾದ ಮುನ್ಸೀರ್ (9) ಮತ್ತು ಮುಸಮ್ಮಿಲ್ (14) ಎಂದು ಗುರುತಿಸಲಾಗಿದೆ. ಇವರು ಅಡೂರಿನ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳಾಗಿದ್ದರು. ಮುಸಮ್ಮಿಲ್ ಎಂಟನೇ ತರಗತಿಯಲ್ಲಿದ್ದರೆ, ಮುನ್ಸೀರ್ ಐದನೇ ತರಗತಿಯಲ್ಲಿ ಓದುತ್ತಿದ್ದ. ಶಾಲಾ ರಜೆಯ ಸಮಯದಲ್ಲಿ ಬಸ್ ಕಾಯುವ ನಿಲ್ದಾಣದ ಬಳಿ ಇವರು ಸಣ್ಣ ಪಾಪ್-ಅಪ್ ತಿಂಡಿ ಅಂಗಡಿಯನ್ನು ಇಟ್ಟುಕೊಂಡಿದ್ದರು. ಶನಿವಾರ ಸಂಜೆ 5 ಗಂಟೆ ಸುಮಾರಿಗೆ ಇವರ ಸ್ನೇಹಿತ ಹಾಗೂ ನೆರೆಮನೆಯ ನಿವಾಸಿಯಾದ ವಹಾಶ್ (14) ಆಲೂಗೆಡ್ಡೆ ಚಿಪ್ಸ್ ಖರೀದಿಸಲು ಅಂಗಡಿಗೆ ಬಂದಿದ್ದ.

ಈ ವೇಳೆ ಅಂಗಡಿಯ ಹಿಂಭಾಗದಲ್ಲಿದ್ದ, ಇತ್ತೀಚೆಗಷ್ಟೇ ನಿರ್ಮಿಸಲಾಗಿದ್ದ ಭಾರಿ ಗಾತ್ರದ ಕಲ್ಲಿನ ತಡೆಗೋಡೆ ಇದ್ದಕ್ಕಿದ್ದಂತೆ ಇವರ ಮೇಲೆಯೇ ಕುಸಿದು ಬಿದ್ದಿದೆ. ಅವಶೇಷಗಳ ಅಡಿಯಲ್ಲಿ ಹೂತುಹೋಗಿದ್ದ ಮಕ್ಕಳನ್ನು ಸ್ಥಳೀಯರು ತಕ್ಷಣ ಹೊರತೆಗೆದು ಚೆರ್ಕಳದ ಆಸ್ಪತ್ರೆಗೆ ಸಾಗಿಸಿದರೂ, ಸಹೋದರರಿಬ್ಬರು ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ತೀವ್ರ ಗಾಯಗೊಂಡ ವಹಾಶ್ ಸದ್ಯ ಕಾಸರಗೋಡಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿದ್ದಾನೆ.
ಕಾಸರಗೋಡು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ತೀವ್ರಗೊಂಡಿದ್ದು, ಹವಾಮಾನ ಇಲಾಖೆ “ರೆಡ್ ಅಲರ್ಟ್” ಘೋಷಿಸಿದೆ. ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ 204 ಮಿಲಿಮೀಟರ್ಗಿಂತಲೂ ಅಧಿಕ ಮಳೆಯಾಗುವ ಸಾಧ್ಯತೆ ಇದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm