ಬ್ರೇಕಿಂಗ್ ನ್ಯೂಸ್
13-06-26 03:01 pm HK News Staffer ದೇಶ - ವಿದೇಶ
ನವದೆಹಲಿ, ಜೂ 13: ಡೀಸೆಲ್ ಮಾರಾಟಕ್ಕೆ ಕೇಂದ್ರ ಸರ್ಕಾರ ಮಿತಿ ಹೇರಿದೆ. ಪೆಟ್ರೋಲ್ ಬಂಕ್ಗಳಲ್ಲಿ ಒಂದು ವಾಹನಕ್ಕೆ ದಿನಕ್ಕೆ 200 ಲೀಟರ್ ಡೀಸೆಲ್ ಖರೀದಿಗೆ ಮಿತಿ ನಿಗದಿಪಡಿಸಲಾಗಿದೆ.
ಇಂಧನ ಅಕ್ರಮ ದಾಸ್ತಾನು ಮತ್ತು ಕಾಳಸಂತೆಯಲ್ಲಿ ಮಾರಾಟವನ್ನು ತಡೆಯಲು ಈ ಕ್ರಮಕೈಗೊಳ್ಳಲಾಗಿದೆ ಎಂದು ಕೇಂದ್ರ ತಿಳಿಸಿದೆ.
ವಾಣಿಜ್ಯ, ಕೈಗಾರಿಕಾ ಮತ್ತು ಸಾಂಸ್ಥಿಕ ಗ್ರಾಹಕರು ಇನ್ಮುಂದೆ ರಿಟೇಲ್ ಬಂಕ್ಗಳಲ್ಲಿ ಡೀಸೆಲ್ ಖರೀದಿಸುವಂತಿಲ್ಲ. ವಾಣಿಜ್ಯ ಉದ್ದೇಶಕ್ಕೆ ನಿಗದಿಪಡಿಸಿದ ಮಾರಾಟ ಕೇಂದ್ರಗಳಿಂದಲೇ ಇಂಧನ ಖರೀದಿಸಬೇಕು ಎಂದು ಸೂಚಿಸಿದೆ. ಪೆಟ್ರೋಲ್ ಪಂಪ್ಗಳಲ್ಲಿ ಡೀಸೆಲ್ ಲೀಟರ್ಗೆ 95.20 ರೂ.ಗಳಾಗಿದ್ದರೆ, ಬೃಹತ್ ಮಾರಾಟ ಕೇಂದ್ರಗಳಲ್ಲಿ ಈ ಬೆಲೆ 134.50 ರೂ. ಇದೆ. ದರ ಕಡಿಮೆ ಇರುವುದರಿಂದ ಬೃಹತ್ ವಾಹನಗಳ ಗ್ರಾಹಕರು ಪೆಟ್ರೋಲ್ ಬಂಕ್ಗಳಲ್ಲಿ ಇಂಧನ ಖರೀದಿಸುತ್ತಿದ್ದಾರೆ. ಇದನ್ನು ತಪ್ಪಿಸಲು ಹೊಸ ನಿಯಮ ಜಾರಿಗೊಳಿಸಲಾಗಿದೆ.
ರಿಟೇಲ್ ಬಂಕ್ಗಳಲ್ಲಿ ಡೀಸೆಲ್ ಅನ್ನು ವಾಹನದ ಇಂಧನ ಟ್ಯಾಂಕ್ಗೇ ತುಂಬಿಸಿ ಮಾರಬೇಕು. ಕ್ಯಾನ್, ಬ್ಯಾರೆಲ್ಗಳಲ್ಲಿ ತುಂಬಿಸಿ ಮಾರುವಂತಿಲ್ಲ. ಪೆಟ್ರೋಲಿಯಂ ಮತ್ತು ಸ್ಫೋಟಕ ಸುರಕ್ಷಿತಾ ಸಂಸ್ಥೆ ಅನುಮತಿಸಿದ ಕ್ಯಾನ್ನಲ್ಲಿ ಡೀಸೆಲ್ ಖರೀದಿಸಬಹುದು ಎಂದು ಸೂಚನೆ ನೀಡಿದೆ.
ಮಧ್ಯಪ್ರಾಚ್ಯ ಯುದ್ಧದಿಂದ ಜಾಗತಿಕ ಮಟ್ಟದಲ್ಲಿ ತೈಲ ಬಿಕ್ಕಟ್ಟು ಉಂಟಾಗಿದೆ. ಭಾರತದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಹೀಗಾಗಿ, ರಿಟೇಲ್ ಬಂಕ್ಗಳಲ್ಲಿ ಇಂಧನ ಕೊರತೆ ಆಗದಂತೆ ನೋಡಿಕೊಳ್ಳಲು ಮಿತಿ ಕ್ರಮ ಅನುಸರಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm