ಬ್ರೇಕಿಂಗ್ ನ್ಯೂಸ್
14-06-26 01:08 pm HK News Staffer ದೇಶ - ವಿದೇಶ
ತಿರುವನಂತಪುರಂ, ಜೂನ್ 14: ಕೇರಳದಲ್ಲಿ ಕೆಎಸ್ಆರ್ಟಿಸಿ 'ಸಾಮಾನ್ಯ' ಬಸ್ಗಳಲ್ಲಿ ಮಹಿಳೆಯರಿಗಾಗಿ 'ಪ್ರಿಯದರ್ಶಿನಿ' ಉಚಿತ ಪ್ರಯಾಣ ಯೋಜನೆ ಜಾರಿಗೆ ಬಂದಿದ್ದು ಜೂನ್ 15ರಂದು ಮುಖ್ಯಮಂತ್ರಿ ವಿಡಿ ಸತೀಶನ್ ಚಾಲನೆ ನೀಡಲಿದ್ದಾರೆ.
ವಿಶೇಷ ಅಂದರೆ, ಕೇರಳದಲ್ಲಿ ಈ ಸೌಲಭ್ಯವು ಎಲ್ಲಾ ಮಹಿಳೆಯರಿಗೂ ಅನ್ವಯವಾಗಲಿದೆ. ಕೇರಳದವರು ಮತ್ತು ಹೊರಗಿನಿಂದ ಭೇಟಿ ನೀಡುವವರಿಗೂ ಈ ಸೌಲಭ್ಯ ದೊರಕಲಿದೆ. ಲಿಂಗತ್ವ ಅಲ್ಪಸಂಖ್ಯಾತ ಪ್ರಯಾಣಿಕರಿಗೂ ಈ ಯೋಜನೆ ಲಾಭ ಸಿಗಲಿದೆ. ಇದಕ್ಕಾಗಿ ಪ್ರತ್ಯೇಕ ಗುರುತಿನ ಚೀಟಿ ತೋರಿಸುವ ಅಗತ್ಯವಿಲ್ಲ. ಬದಲಾಗಿ, ಅವರಿಗೆ "ಶೂನ್ಯ ದರ" (zero-fare) ಟಿಕೆಟ್ಗಳನ್ನು ನೀಡಲಾಗುತ್ತದೆ. ಇದರಿಂದ ಸರ್ಕಾರಕ್ಕೆ ಈ ಯೋಜನೆ ಲಾಭ ಪಡೆದವರ ಸಂಖ್ಯೆ ಸಿಗಲಿದ್ದು ಆರ್ಥಿಕ ಪರಿಣಾಮವನ್ನು ಅಂದಾಜು ಮಾಡಲು ಸಹಾಯವಾಗಲಿದೆ.
ರಾಜ್ಯದಾದ್ಯಂತ ಕಾರ್ಯಾಚರಿಸುತ್ತಿರುವ 3,125 ಕೆಎಸ್ಆರ್ಟಿಸಿ 'ಸಾಮಾನ್ಯ' ಬಸ್ಗಳಿಗೆ ಈ ಯೋಜನೆ ಅನ್ವಯಿಸುತ್ತದೆ. ಇದರಲ್ಲಿ ಅತಿ ಹೆಚ್ಚು ಅಂದರೆ 687 ಬಸ್ಗಳು ತಿರುವನಂತಪುರಂ ಜಿಲ್ಲೆಯಲ್ಲಿವೆ. ಈ ಬಗ್ಗೆ ಸಾರಿಗೆ ಸಚಿವ ಸಿ.ಪಿ. ಜಾನ್ ಮಾಹಿತಿ ನೀಡಿದ್ದು, ಈ ಯೋಜನೆಯಿಂದ ಅನೇಕ ಮಹಿಳೆಯರಿಗೆ ದೈನಂದಿನ ಪ್ರಯಾಣದ ವೆಚ್ಚದಲ್ಲಿ ಉಳಿತಾಯ ಆಗಲಿದ್ದು ಅವರ ಆದಾಯವನ್ನು ಹೆಚ್ಚಿಸಲು ಸಹಾಯ ಮಾಡಲಿದೆ ಎಂದರು. ಈ ಯೋಜನೆಗಾಗಿ ರಾಜ್ಯ ಸರ್ಕಾರಕ್ಕೆ 800 ಕೋಟಿಯಷ್ಟು ನಷ್ಟ ಎದುರಾಗಲಿದೆ.
ಯಾವೆಲ್ಲಾ ಬಸ್ ಗಳಲ್ಲಿ ಸೌಲಭ್ಯ ?
ಸಾಮಾನ್ಯ ಮತ್ತು ಪ್ರಮುಖ ನಗರ ಸಾರಿಗೆ ಬಸ್ ಗಳಲ್ಲಿ ಮಾತ್ರ ಈ ಫ್ರೀ ಯೋಜನೆ ಇರಲಿದೆ. ಲಿಮಿಟೆಡ್ ಸ್ಟಾಪ್ ಇರುವ ಸಾಮಾನ್ಯ ಸಾರಿಗೆ ಬಸ್ ಗಳಲ್ಲಿಯೂ ಉಚಿತ ಸಂಚಾರ ಇರಲಿದ್ದು ಈ ಸೌಲಭ್ಯ ಇರುವ ಬಸ್ ಗಳಲ್ಲಿ ಪ್ರತ್ಯೇಕ ಬೋರ್ಡ್ ಅಳವಡಿಸಲು ಸಾರಿಗೆ ಸಚಿವರು ಸೂಚಿಸಿದ್ದಾರೆ. ಕೆಎಸ್ಸಾರ್ಟಿಸಿ ಬಿಡುಗಡೆಗೊಳಿಸಿದ ಪಟ್ಟಿ ಪ್ರಕಾರ, ಏಳು ವಿಭಾಗಗಳಲ್ಲಿ ಉಚಿತ ಸಾರಿಗೆ ಸೌಲಭ್ಯ ಇರಲಿದೆ. ಸಾಮಾನ್ಯ ಬಸ್, ನಗರ ಸಾರಿಗೆ, ಟೌನ್ ಟು ಟೌನ್ ಸಾರಿಗೆ, ಲಿಮಿಟೆಡ್ ಸ್ಟಾಪ್ ಸಾರಿಗೆ ಬಸ್ ಗಳಲ್ಲಿ ಮಹಿಳೆಯರು ಉಚಿತ ಸಂಚಾರ ಮಾಡಬಹುದು.
ಇದಲ್ಲದೆ, ಗ್ರಾಮೀಣ ಸಂಪರ್ಕವನ್ನು ಸುಧಾರಿಸಲು ಹಿಂದಿನ ಎಲ್ಡಿಎಫ್ ಸರ್ಕಾರವು ಆರಂಭಿಸಿದ್ದ ಗ್ರಾಮೀಣ ಬಸ್ ಸೌಲಭ್ಯ 'ಗ್ರಾಮ ವಂಡಿ' ಯೋಜನೆಯನ್ನು ಸ್ಥಳೀಯ ಸಂಸ್ಥೆಗಳ ಸಹಾಯದೊಂದಿಗೆ 58 ರಿಂದ 500 ಸೇವೆಗಳಿಗೆ ವಿಸ್ತರಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಯೋಜಿಸಿದೆ.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm