ಬ್ರೇಕಿಂಗ್ ನ್ಯೂಸ್
14-06-26 04:49 pm HK News Staffer ದೇಶ - ವಿದೇಶ
ಗುವಾಹಟಿ, ಜೂನ್ 14: ಅಕ್ರಮ ವಲಸಿಗರು ಆಧಾರ್ ಕಾರ್ಡ್ ಪಡೆಯುವುದನ್ನು ತಡೆಯುವ ಉದ್ದೇಶದಿಂದ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ್ ನೀಡುವುದನ್ನು ಸ್ಥಗಿತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಸಾಧಾರಣ ಸಂದರ್ಭಗಳಲ್ಲಿ ಮಾತ್ರ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ್ ನೀಡಲು ಅವಕಾಶ ಇರಲಿದೆ ಎಂದರು. ಅಂತಹ ಪ್ರಕರಣಗಳಲ್ಲಿ ಜಿಲ್ಲಾಧಿಕಾರಿಗಳು ಅನುಮತಿಗಾಗಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಅರ್ಜಿದಾರರು ಆಧಾರ್ ಪಡೆಯಲು ಅರ್ಹರೇ ಎಂಬುದನ್ನು ಪರಿಶೀಲಿಸಿ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.
ರಾಜ್ಯದಲ್ಲಿ ಆಧಾರ್ ನೋಂದಣಿ ಈಗಾಗಲೇ ಬಹುತೇಕ ಪೂರ್ಣಗೊಂಡಿದೆ. ಕೆಲವು ಜಿಲ್ಲೆಗಳಲ್ಲಿ ಆಧಾರ್ ನೋಂದಣಿ ವ್ಯಾಪ್ತಿ ಶೇ.100ಕ್ಕಿಂತಲೂ ಹೆಚ್ಚಾಗಿದೆ ಎಂದು ಶರ್ಮಾ ತಿಳಿಸಿದರು. ನಿಗದಿತ ಜನಸಂಖ್ಯೆಗಿಂತ (ಶೇ.100ಕ್ಕಿಂತ) ಹೆಚ್ಚು ಆಧಾರ್ ಕಾರ್ಡ್ಗಳು ಹೇಗೆ ವಿತರಿಸಲ್ಪಟ್ಟಿವೆ ಮತ್ತು ಹೆಚ್ಚುವರಿ ಕಾರ್ಡ್ಗಳನ್ನು ಪಡೆಯುತ್ತಿರುವವರು ಯಾರು ಎಂಬುದನ್ನು ಪರಿಶೀಲಿಸಬೇಕಿದೆ. ಯಾವುದೇ ಅಕ್ರಮ ಬಾಂಗ್ಲಾದೇಶಿ ವಲಸಿಗರು ಆಧಾರ್ ಕಾರ್ಡ್ ಪಡೆಯದಂತೆ ನೋಡಿಕೊಳ್ಳಲು ಈ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಅವರು ಹೇಳಿದರು.
ಆದರೂ, ಚಹಾ ತೋಟದ ಕಾರ್ಮಿಕ ಸಮುದಾಯ ಹಾಗೂ ಪರಿಶಿಷ್ಟ ಪಂಗಡಗಳ ಜನರಿಗೆ ಆಧಾರ್ ಕಾರ್ಡ್ ವಿತರಣೆಯನ್ನು ಮುಂದುವರಿಸಲಾಗುವುದು. ಈ ಸಮುದಾಯಗಳ ಅನೇಕ ಮಂದಿಗೆ ಇನ್ನೂ ಆಧಾರ್ ಕಾರ್ಡ್ ದೊರೆತಿಲ್ಲ ಎಂದು ಅವರು ಹೇಳಿದರು. ಇದರ ವಿನಾಯಿತಿ ಎಪ್ರಿಲ್ 1, 2027ರ ವರೆಗೆ ಮಾತ್ರ ಜಾರಿಯಲ್ಲಿರುತ್ತದೆ. ಆ ದಿನಾಂಕದ ನಂತರ ಈ ಸಮುದಾಯಗಳಿಗೆ ಸೇರಿದ 18 ವರ್ಷ ಮೇಲ್ಪಟ್ಟವರಿಗೂ ಆಧಾರ್ ಕಾರ್ಡ್ ನೀಡಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.
ಆಧಾರ್ ಕಾರ್ಡ್ ವಿತರಣೆಯಲ್ಲಿ ರಾಜ್ಯ ಸರ್ಕಾರ ‘ಅತ್ಯಂತ ಕಟ್ಟುನಿಟ್ಟಿನ’ ನಿಲುವು ಅನುಸರಿಸಲಿದೆ. ಅಸ್ಸಾಂನಲ್ಲಿ ಆಧಾರ್ ಕಾರ್ಡ್ ಪಡೆಯುವುದು ಸುಲಭವಾಗುವುದಿಲ್ಲ ಎಂದು ಶರ್ಮಾ ಈ ಹಿಂದೆಯೇ ಹೇಳಿದ್ದರು.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm