ಬ್ರೇಕಿಂಗ್ ನ್ಯೂಸ್
15-06-26 11:18 am HK News Staffer ದೇಶ - ವಿದೇಶ
ಮಸ್ಕತ್, ಜೂನ್ 15: ಕೊಲ್ಲಿ ಪ್ರದೇಶದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ, ತೈಲ ಹಡಗುಗಳ ಮೇಲಿನ ದಾಳಿ ನಡುವೆಯೇ ತಾಂತ್ರಿಕ ದೋಷದಿಂದ ಭಾರತದ ಧ್ವಜವನ್ನು ಹೊಂದಿದ್ದ ನೌಕೆಯೊಂದು ಒಮಾನ್ ಕರಾವಳಿಯಲ್ಲಿ ಮುಳುಗಡೆಯಾಗಿದೆ. ಅದರಲ್ಲಿದ್ದ ಎಲ್ಲಾ 14 ಸಿಬ್ಬಂದಿಯನ್ನು ಭಾನುವಾರ ರಕ್ಷಿಸಲಾಗಿದೆ ಎಂದು ಮಸ್ಕತ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ರಾಯಭಾರ ಕಚೇರಿ, ವಾಣಿಜ್ಯ ನೌಕೆಯಾದ ವಿರಾಟ್ 1ರ ಎಂಜಿನ್ನಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದರಿಂದ ಸಮುದ್ರದಲ್ಲಿ ಮುಳುಗಡೆಯಾಗುತಿತ್ತು. ಈ ವೇಳೆ, ಒಮಾನ್ ಅಧಿಕಾರಿಗಳ ಸಹಕಾರದೊಂದಿಗೆ ಇತರೇ ಹಡಗುಗಳ ಮೂಲಕ ಅದರಲ್ಲಿದ್ದ ಎಲ್ಲಾ ಸಿಬ್ಬಂದಿಯನ್ನು ರಕ್ಷಿಸಲಾಗಿದೆ ಎಂದು ತಿಳಿಸಿದೆ. ಎಲ್ಲಾ 14 ಮಂದಿ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಅವರನ್ನು ಮುಂಬೈಗೆ ಪ್ರಯಾಣಿಸುತ್ತಿದ್ದ 'ಎಂವಿ ಜಬಲ್ ಅಲಿ' ಎಂಬ ಮತ್ತೊಂದು ಸರಕು ಸಾಗಣೆ ನೌಕೆಗೆ ಸ್ಥಳಾಂತರಿಸಲಾಗಿದೆ ಎಂದೂ ಹೇಳಿದೆ. ಕಳೆದ ವಾರ ಒಮಾನ್ ಕರಾವಳಿಯಲ್ಲಿ ಭಾರತೀಯ ಸಿಬ್ಬಂದಿಯನ್ನು ಹೊಂದಿದ್ದ ಮೂರು ಹಡಗುಗಳ ಮೇಲೆ ಅಮೆರಿಕ ಪಡೆಗಳು ದಾಳಿ ನಡೆಸಿದ್ದವು. ಈ ದಾಳಿಯಲ್ಲಿ ಮೂವರು ಭಾರತೀಯ ನಾವಿಕರು ಸಾವನ್ನಪ್ಪಿದ್ದರು.
ಹೊರ್ಮುಜ್ ನಲ್ಲಿ ಸಿಕ್ಕಿಬಿದ್ದ 13 ಹಡಗು, 563 ಸಿಬಂದಿ
ಇರಾನ್ ಭಾಗದಲ್ಲಿ ಹೊರ್ಮುಜ್ ಜಲಸಂಧಿ ಮುಚ್ಚಿರುವುದರಿಂದ ಭಾರತಕ್ಕೆ ಸೇರಿದ 13 ಹಡಗುಗಳು 107 ದಿನಗಳಿಂದ ಸಮುದ್ರದಲ್ಲಿ ಸಿಲುಕಿದ್ದು, 563 ನಾವಿಕರ ಸ್ಥಿತಿ ಅತಂತ್ರವಾಗಿದೆ. ಅನಿಶ್ಚಿತತೆ ಮುಂದುವರಿದಿದ್ದು ಅದರ ಸಿಬಂದಿಗೆ ಭಯದ ವಾತಾವರಣ ಸೃಷ್ಟಿಯಾಗಿದೆ. ಫೆ.28ರಂದು ಇರಾನ್ ಮೇಲೆ ಅಮೆರಿಕ ಮೊದಲ ಬಾರಿಗೆ ದಾಳಿ ಮಾಡಿತ್ತು. ಅಲ್ಲಿಂದ ಇಲ್ಲಿಯವರೆಗೆ ಹೊರ್ಮುಜ್ ಜಲಸಂಧಿಯನ್ನು ಆಂಶಿಕವಾಗಿ ಇರಾನ್ ಮುಚ್ಚಿದೆ. ಹಾಗಾಗಿ ಭಾರತದ ಒಟ್ಟು 13 ಹಡಗುಗಳು ಅಲ್ಲಿಂದ ಬರಲಾಗದೇ ಸಿಲುಕಿವೆ. ಹೊರ್ಮುಜ್ ಎಡಬದಿಯ ದಂಡೆಯಲ್ಲಿ ಲಂಗರು ಹಾಕಿರುವ ಹಡಗುಗಳಲ್ಲಿ ಸುಮಾರು 329 ನಾವಿಕರು, ದಕ್ಷಿಣದ ಒಮಾನ್ ಬಲಬದಿಯಲ್ಲಿ ಹಡಗುಗಳಲ್ಲಿ 233 ನಾವಿಕರು, ಕಳೆದ 107 ದಿನಗಳಿಂದ ಕಷ್ಟದಲ್ಲಿ ಜೀವನ ನಡೆಸುತ್ತಿದ್ದಾರೆಂದು ಮೂಲಗಳು ತಿಳಿಸಿವೆ.
ಸಿಬಂದಿಗೆ ಮಾನಸಿಕ ಸಮಸ್ಯೆ ಸಾಧ್ಯತೆ
ಜಲಸಂಧಿ ಮುಚ್ಚಿರುವುದರಿಂದ 20000 ಕ್ಕೂ ಹೆಚ್ಚು ಸಿಬಂದಿ ಸಮಸ್ಯೆಗೆ ತುತ್ತಾಗಿದ್ದಾರೆ. ದೀರ್ಘ ಕಾಲದಿಂದ ಇವರೆಲ್ಲರೂ ಸಮುದ್ರದಲ್ಲೇ ಸಿಲುಕಿದ್ದರಿಂದ ಮಾನಸಿಕ ಒತ್ತಡಕ್ಕೆ ತುತ್ತಾಗುವ ಸಾಧ್ಯತೆ ಇದೆ ಎಂದು ವೈದ್ಯರು ಎಚ್ಚರಿಸಿದ್ದಾರೆ.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm