ಬ್ರೇಕಿಂಗ್ ನ್ಯೂಸ್
23-06-26 10:47 pm HK News Staffer ದೇಶ - ವಿದೇಶ
ಮುಂಬೈ, ಜೂನ್ 23: ಮಹಾರಾಷ್ಟ್ರ ಸರಕಾರ ಮಾಹಿತಿ ಹಕ್ಕು ನಿಯಮಗಳಿಗೆ ಮಾಡಿರುವ ಐದು ತಿದ್ದುಪಡಿಗಳನ್ನು ಹಿಂಪಡೆಯದಿದ್ದರೆ, ಜುಲೈ 5ರಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ 89ರ ಹರೆಯದ ಸಾಮಾಜಿಕ ಹೋರಾಟಗಾರ ಅಣ್ಣಾ ಹಝಾರೆ ಎಚ್ಚರಿಕೆ ನೀಡಿದ್ದಾರೆ.
ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಈ ಸಂಬಂಧ ಪತ್ರ ಬರೆದಿರುವ ಅಣ್ಣಾ ಹಝಾರೆ, “ಜೂನ್ 12ರಂದು ಮಾಡಲಾಗಿರುವ ತಿದ್ದುಪಡಿಗಳು ಮಾಹಿತಿ ಹಕ್ಕು ಕಾಯ್ದೆಯ ಆಶಯಗಳನ್ನು ಉಲ್ಲಂಘಿಸುತ್ತದೆ ಹಾಗೂ ಪಾರದರ್ಶಕತೆಯನ್ನು ಇಲ್ಲವಾಗಿಸುತ್ತದೆ” ಎಂದು ಆಕ್ಷೇಪಿಸಿದ್ದಾರೆ. ಮಾಹಿತಿ ಹಕ್ಕು ಅರ್ಜಿಯನ್ನು ಸಲ್ಲಿಸಲು ಏರಿಕೆ ಮಾಡಲಾಗಿರುವ ಶುಲ್ಕವನ್ನೂ ಆಕ್ಷೇಪಿಸಿದ್ದು ಈ ಏರಿಕೆಗೆ ಯಾವುದೇ ತಾರ್ಕಿಕ ಸಮರ್ಥನೆಯಾಗಲಿ ಅಥವಾ ಆರ್ಥಿಕ ವಿಶ್ಲೇಷಣೆಯನ್ನಾಗಲಿ ಒದಗಿಸಿಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ.
“ಮಾಹಿತಿ ಹಕ್ಕು ಕಾಯ್ದೆ ಆದಾಯವನ್ನು ಸೃಷ್ಟಿಸುವ ಕಾನೂನಲ್ಲ. 20 ವರ್ಷಗಳ ಬಳಿಕ ಮಾಹಿತಿ ಹಕ್ಕು ಅರ್ಜಿಯ ಶುಲ್ಕವನ್ನು ಏರಿಕೆ ಮಾಡಿರುವುದಾದರೆ, ಮಾಹಿತಿ ನಿರಾಕರಿಸುವ ಅಧಿಕಾರಿಗಳ ಮೇಲಿನ ದಂಡವನ್ನೇಕೆ ಹೆಚ್ಚಳ ಮಾಡಬಾರದು?” ಎಂದೂ ಅವರು ಪ್ರಶ್ನಿಸಿದ್ದಾರೆ. ಮಾಹಿತಿ ಪಡೆಯಲು ಗುರುತಿನ ಚೀಟಿಯನ್ನು ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿರುವ ಅಣ್ಣಾ ಹಝಾರೆ, ಮಾಹಿತಿ ಹಕ್ಕು ಕಾಯ್ದೆಯ ಸೆಕ್ಷನ್ 6(2)ರ ಅನ್ವಯ ಅರ್ಜಿದಾರರು ಮಾಹಿತಿಯನ್ನು ಪಡೆಯಲು ತಮ್ಮ ವೈಯಕ್ತಿಕ ವಿವರಗಳನ್ನಾಗಲಿ ಅಥವಾ ಕಾರಣಗಳನ್ನಾಗಲಿ ಬಹಿರಂಗಗೊಳಿಸಬೇಕಾದ ಅಗತ್ಯವಿಲ್ಲ. ಇಂತಹ ಷರತ್ತುಗಳು ಮಾಹಿತಿ ಬಯಸುವವರಿಗೆ ಅಪಾಯ ತಂದೊಡ್ಡುತ್ತವೆ” ಎಂದು ಅವರು ತಮ್ಮ ಪತ್ರದಲ್ಲಿ ವಿವರಿಸಿದ್ದಾರೆ.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm