ಬ್ರೇಕಿಂಗ್ ನ್ಯೂಸ್
29-06-26 12:41 pm HK News Staffer ದೇಶ - ವಿದೇಶ
ಚೆನ್ನೈ, ಜೂ.27: ತಮಿಳುನಾಡಿನ ರಾಜಕೀಯದಲ್ಲಿ ಮತ್ತೊಮ್ಮೆ ಸಂಚಲನ ಮೂಡಿಸುವಂತಹ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್, ಮುಖ್ಯಮಂತ್ರಿ ವಿಜಯ್ ನೇತೃತ್ವದ ಟಿವಿಕೆ ಸರ್ಕಾರದ ಭವಿಷ್ಯದ ಬಗ್ಗೆ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಮೈತ್ರಿ ಪಕ್ಷಗಳ ಬೆಂಬಲದ ಮೇಲೆ ನಿಂತಿರುವ ಈ ಸರ್ಕಾರ ಐದು ವರ್ಷ ಪೂರ್ಣಗೊಳಿಸುವುದಿಲ್ಲ. ಮುಂದಿನ 3 ರಿಂದ 6 ತಿಂಗಳೊಳಗೆ ಸರ್ಕಾರ ಪತನವಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಡಿಎಂಕೆ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸ್ಟಾಲಿನ್, ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಕುರಿತು ವಿಶ್ಲೇಷಣೆ ನಡೆಸುತ್ತಾ ಟಿವಿಕೆ ಸರ್ಕಾರದ ಸ್ಥಿರತೆಯ ಬಗ್ಗೆ ಗಂಭೀರ ಅನುಮಾನ ವ್ಯಕ್ತಪಡಿಸಿದರು. ಜನರು ನೀಡಿರುವ ಜನಾದೇಶದ ಬಲದಿಂದ ಈ ಸರ್ಕಾರ ಅಧಿಕಾರದಲ್ಲಿಲ್ಲ. ಮೈತ್ರಿ ಪಕ್ಷಗಳ ಆಸರೆಯಿಂದ ಮಾತ್ರ ಸರ್ಕಾರ ಉಳಿದಿದೆ ಎಂದು ಆರೋಪಿಸಿದರು.
ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ವಿಧಾನಸಭೆಯಲ್ಲಿ ಸ್ವತಂತ್ರವಾಗಿ ಆಡಳಿತ ನಡೆಸಲು ಅಗತ್ಯವಿರುವ ಸ್ಪಷ್ಟ ಬಹುಮತ ಇಲ್ಲ. ಸರ್ಕಾರ ರಚಿಸಲು ಬೇಕಾದ 118 ಸ್ಥಾನಗಳ ಪೈಕಿ ಟಿವಿಕೆ ಕೇವಲ 108 ಸ್ಥಾನಗಳನ್ನು ಮಾತ್ರ ಗೆದ್ದಿದೆ. ಹೀಗಾಗಿ ಮೈತ್ರಿ ಪಕ್ಷಗಳ ಬೆಂಬಲವೇ ಸರ್ಕಾರದ ಜೀವಾಳವಾಗಿದೆ ಎಂದು ಸ್ಟಾಲಿನ್ ಹೇಳಿದರು.
ಈ ಚುನಾವಣೆಯಲ್ಲಿ ಜನರು ಡಿಎಂಕೆ ಸರ್ಕಾರವೇ ಅಧಿಕಾರಕ್ಕೆ ಬರಬೇಕು ಎಂಬ ಆಶಯದಿಂದ ಮತ ಚಲಾಯಿಸಿದ್ದರು. ಆದರೆ ಮೈತ್ರಿಕೂಟದ ಭಾಗವಾಗಿದ್ದ ಕೆಲವು ಪಕ್ಷಗಳ ರಾಜಕೀಯ ತಂತ್ರ, ಹೊಂದಾಣಿಕೆ ಹಾಗೂ ನಂತರದ ಬೆಳವಣಿಗೆಗಳಿಂದ ಟಿವಿಕೆ ಸರ್ಕಾರ ರಚನೆಯಾಗಲು ಅವಕಾಶ ಸಿಕ್ಕಿತು ಎಂದು ಅವರು ಆರೋಪಿಸಿದರು.
ಟಿವಿಕೆ ಸರ್ಕಾರವನ್ನು ಟೀಕಿಸಿದ ಸ್ಟಾಲಿನ್, "ಇದು ಅಲುಗಾಡುತ್ತಿರುವ ಸರ್ಕಾರ. ಯಾವ ಕ್ಷಣದಲ್ಲಿ ಸಮತೋಲನ ಕಳೆದುಕೊಂಡು ಕುಸಿಯುತ್ತದೆಯೋ ಹೇಳಲು ಸಾಧ್ಯವಿಲ್ಲ. ಯಾವ ಜಂಕ್ಷನ್ ಅಥವಾ ಯಾವ ತಿರುವಿನಲ್ಲಿ ಈ ವಾಹನ ನಿಲ್ಲುತ್ತದೋ ಗೊತ್ತಿಲ್ಲ" ಎಂದು ವ್ಯಂಗ್ಯವಾಡಿದರು.
ಮುಂದಿನ ದಿನಗಳಲ್ಲಿ ರಾಜಕೀಯ ಪರಿಸ್ಥಿತಿ ಕ್ಷಣಕ್ಷಣಕ್ಕೂ ಬದಲಾಗುವ ಸಾಧ್ಯತೆ ಇದೆ. ಆದ್ದರಿಂದ ಚುನಾವಣೆ ಯಾವಾಗ ಬೇಕಾದರೂ ಎದುರಾಗಬಹುದು. ಐದು ವರ್ಷಗಳ ಕಾಲ ಕಾಯಬೇಕಾದ ಅಗತ್ಯವಿಲ್ಲ ಎಂದು ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದರು.
ಸ್ಟಾಲಿನ್ ಅವರ ಈ ಹೇಳಿಕೆ ತಮಿಳುನಾಡಿನ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಆಡಳಿತಾರೂಢ ಟಿವಿಕೆ ಹಾಗೂ ಪ್ರತಿಪಕ್ಷಗಳ ನಡುವೆ ವಾಕ್ಸಮರ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ಸರ್ಕಾರದ ಸ್ಥಿರತೆ, ಮೈತ್ರಿ ರಾಜಕೀಯ ಹಾಗೂ ಮುಂದಿನ ರಾಜಕೀಯ ಬೆಳವಣಿಗೆಗಳ ಕುರಿತು ಇದೀಗ ರಾಜ್ಯ ರಾಜಕೀಯದಲ್ಲಿ ಕುತೂಹಲ ಹೆಚ್ಚಾಗಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm