ಬ್ರೇಕಿಂಗ್ ನ್ಯೂಸ್
21-07-26 09:03 pm HK News Staffer ದೇಶ - ವಿದೇಶ
ನವದೆಹಲಿ, ಜುಲೈ 21: ನೀಟ್ ಅಕ್ರಮಗಳಿಗೆ ನೈತಿಕ ಹೊಣೆ ಹೊತ್ತು ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆಗೆ ಒತ್ತಾಯಿಸಿ, ಪ್ರಧಾನಿ ನಿವಾಸದ ಮುಂದೆ ಅಹೋರಾತ್ರಿ ಧರಣಿ ಕುಳಿತಿದ್ದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಅಖಿಲೇಶ್ ಯಾದವ್ ಸೇರಿ ವಿಪಕ್ಷ ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಧರಣಿ ಕೈಬಿಡಲು ನಿರಾಕರಿಸಿದ ರಾಹುಲ್ ಅವರನ್ನು, ದೆಹಲಿ ಪೊಲೀಸರು ಬಲವಂತದಿಂದ ಎಬ್ಬಿಸಿ ಕರೆದೊಯ್ದಿದ್ದಾರೆ. ಈ ವೇಳೆ, ಸ್ಥಳದಲ್ಲಿ ತೀವ್ರ ಜಟಾಪಟಿ ನಡೆದಿದ್ದು ಪೊಲೀಸರು ಬಲವಂತವಾಗಿ ರಾಹುಲ್ ಗಾಂಧಿ ಎತ್ತುಕೊಂಡು ಹೋಗಿದ್ದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.






ಈ ಕುರಿತು ತನ್ನ ಎಕ್ಸ್ ಖಾತೆಯಲ್ಲಿ ವಿಡಿಯೋ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪಕ್ಷ, "ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆ ತೀವ್ರ ಖಂಡನೀಯ. ದೇಶದ ವಿಪಕ್ಷ ನಾಯಕನನ್ನು ಪೊಲೀಸರು ನಡೆಸಿಕೊಂಡ ರೀತಿ, ಪ್ರಜಾಪ್ರಭುತ್ವಕ್ಕೆ ಮಾಡಿದ ಅವಮಾನ" ಎಂದು ತೀವ್ರ ಆಕ್ರೋಶ ಹೊರಹಾಕಿದೆ.
ಇದಕ್ಕೂ ಮುನ್ನ ಪೋಸ್ಟ್ ಹಾಕಿರುವ ರಾಹುಲ್ ಗಾಂಧಿ, ಭಾರತದ ಇತಿಹಾಸದಲ್ಲೇ ನರೇಂದ್ರ ಮೋದಿ ಅತ್ಯಂತ ಯುವಜನ ವಿರೋಧಿ ಪ್ರಧಾನಮಂತ್ರಿ" ಎಂದು ಆರೋಪಿಸಿದ್ದಾರಲ್ಲದೆ, "ನ್ಯಾಯಕ್ಕಾಗಿ ಧ್ವನಿ ಎತ್ತಿರುವ ವಿದ್ಯಾರ್ಥಿಗಳಿಗೆ ಉತ್ತರಗಳ ಬದಲು ಲಾಠಿ ಪೆಟ್ಟು ಮತ್ತು ಬಂಧನದ ಉತ್ತರ ಸಿಗುತ್ತಿದೆ" ಎಂದು ಟೀಕಿಸಿದ್ದಾರೆ. ಪರೀಕ್ಷೆಗಳಲ್ಲಿನ ಅಕ್ರಮಗಳನ್ನು ತಡೆಯುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಇದರ ಜೊತೆಗೆ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಕೇಳುವುದಕ್ಕೂ ಪ್ರಧಾನಿ ಮೋದಿ ಸಿದ್ಧರಿಲ್ಲ ಎಂದು ಕಿಡಿಕಾರಿದ್ದಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm