ಬ್ರೇಕಿಂಗ್ ನ್ಯೂಸ್
23-07-26 05:57 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 23 : ವಿದ್ಯಾರ್ಥಿಗಳ ಮೇಲೆ ಪೊಲೀಸರು ಬಲಪ್ರಯೋಗ ನಡೆಸಿದ ಘಟನೆ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದು, ಇದೀಗ ಹಿರಿಯ ನಟ ನಾಸೀರುದ್ದೀನ್ ಶಾ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಯುವಕರ ಮೇಲೆ ಪೊಲೀಸ್ ಗೂಂಡಾಗಳು ನಡೆಸುತ್ತಿರುವ ದೌರ್ಜನ್ಯವನ್ನು ನೋಡಿ ನಾನು ಭಾವುಕನಾಗಿದ್ದೇನೆ. ನನ್ನ ರಕ್ತ ಕುದಿಯುತ್ತಿದೆ. ನಿಮ್ಮ ಮಕ್ಕಳ ಬಗ್ಗೆ ಯೋಚಿಸಿ. ಇಂದು ನೀವು ಮಾಡುತ್ತಿರುವುದಕ್ಕೆ ನಾಳೆ ನಿಮ್ಮ ಮಕ್ಕಳು ಕರ್ಮಫಲವನ್ನು ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
"ಪ್ರಧಾನಿ ಮೋದಿ ಮೌನ ಹೊಸದೇನಲ್ಲ. ಅವರು ಯಾವ ಮಹತ್ವದ ವಿಚಾರದ ಬಗ್ಗೆ ಪ್ರಾಮಾಣಿಕವಾಗಿ ಮಾತನಾಡಿದ್ದಾರೆ? ಯಾವಾಗಲಾದರೂ 'ನಾವು ತಪ್ಪು ಮಾಡಿದ್ದೇವೆ' ಎಂದು ಒಪ್ಪಿಕೊಂಡಿದ್ದಾರೆಯೇ? ಅವರು ತಮ್ಮನ್ನು ದೇವರಿಂದ ವಿಶೇಷ ಆಶೀರ್ವಾದ ಪಡೆದ ನಾಯಕನಂತೆ ಬಿಂಬಿಸಿಕೊಂಡಿದ್ದಾರೆ. ಆ ಭ್ರಮೆ ಅವರ ಬೆಂಬಲಿಗರ ಮೇಲೂ ಪರಿಣಾಮ ಬೀರಿದೆ. ನಮ್ಮ ಸಮಾಜಕ್ಕೆ ಏನಾಗಿದೆ? ಈ ವ್ಯಕ್ತಿಯನ್ನು ಪ್ರಶ್ನಿಸುವವರು ಯಾರೂ ಇಲ್ವಾ ?" ಎಂದು ಕಿಡಿಕಾರಿದ್ದಾರೆ.
"ಮೋದಿ ಇದುವರೆಗೆ ಒಂದೇ ಒಂದು ಮುಕ್ತ ಪತ್ರಿಕಾಗೋಷ್ಠಿ ನಡೆಸಿಲ್ಲ. ಅವರು ಕಠಿಣ ಪ್ರಶ್ನೆಗಳಿಗೆ ಉತ್ತರಿಸಲು ಹೆದರುತ್ತಾರೆ. 2002ರ ಗುಜರಾತ್ ಗಲಭೆ, ರಾಜಕೀಯಕ್ಕೆ ಬರುವ ಮುನ್ನ ಹಿಮಾಲಯದಲ್ಲಿ ಧ್ಯಾನ ಮಾಡಿದ್ದೆ ಎನ್ನುವ ಹೇಳಿಕೆ, 35 ವರ್ಷ ಭಿಕ್ಷೆ ಬೇಡಿದ್ದೇನೆ ಎಂಬಂತಹ ಹೇಳಿಕೆಗಳ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದರೆ ಉತ್ತರಿಸಲು ಅವರಿಗೆ ಭಯವಿದೆ," ಎಂದು ಆರೋಪಿಸಿದರು.
ಜನರಿಗೆ ಪೆಟ್ರೋಲ್ ಉಳಿಸಿ ಎಂದು ಹೇಳುತ್ತಾರೆ. ಆದರೆ ತಾವೇ ಹಲವು ಎಸ್ಯುವಿ ವಾಹನಗಳ ಬೆಂಗಾವಲಿನಲ್ಲಿ ಸಂಚರಿಸುತ್ತಾರೆ. ವಿದೇಶ ಪ್ರವಾಸ ಕಡಿಮೆ ಮಾಡಿ ಎಂದು ಸಲಹೆ ನೀಡುತ್ತಾರೆ. ಆದರೆ ತಾವೇ ನಿರಂತರ ವಿದೇಶ ಪ್ರವಾಸ ಕೈಗೊಳ್ಳುತ್ತಾರೆ. ಹಾಗಾಗಿ ನಾನು ಮೋದಿ ಹೇಳುವ ಅನೇಕ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸಲು ಸಾಧ್ಯವಾಗುವುದಿಲ್ಲ ಎಂದಿದ್ದಾರೆ.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
23-07-26 06:26 pm
HK News Desk
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am